Home / ಕವನ / ಕವಿತೆ / ಪರದೇಶಿ

ಪರದೇಶಿ

ಹೊತ್ತು ಮೂಡುವ ಮುನ್ನ
ಕೂಡಿ ಹಾಕಿಕೊಂಡ ಕನಸುಗಳನ್ನು
ಎಳೆ ಬಿಸಿಲಿನಲ್ಲಿ ವಿಮಾನವೇರಿದ
ಕೇರಳಿ, ಬಂಗ್ಲಾ, ಪಾಕಿಸ್ತಾನಿ, ಫಿಲಿಫೈನ್‌ (ಏಕಾಂಗಿ)
ಕೆಲಸಿಗರು ಉರಿಬಿಸಿಲಿನಲಿ ಬಂದಿಳಿಯುವರು
ಬಿಸಿಲಿಗೆ ಹಸಿರು ಕನಸು ಬಿಚ್ಚುತ್ತ
ಬಣ್ಣಬಣ್ಣದ ಹೂವುಗಳೂಡೆಸುತ್ತ ಕುಣಿಯುವರು
ಶತ ಶತಮಾನದಿ ಕೂಡಿ ಬಿದ್ದ
ಧರ್ಮ, ಬಸಿಲಿನ ಹೊಡೆತ, ಮರುಭೂಮಿ,
ಒಂದಕ್ಕೊಂದು ಸ್ಪರ್ಧಿಸುತ
ಅರ್ಥ ಹುಡುಕುವುದರಲ್ಲಿ ಬಿದ್ದಿರುವಾಗ
ಬಂಜರು ಭೂಮಿ ಸಾವಿರ ಸಾವಿರ
ಲಕ್ಷ ಲಕ್ಷ ಜನರನ್ನು ದತ್ತುಕೊಂಡಿದೆ.
ಹಸಿದು ಹಂಬಲಿಸಿದ ಬಂಜೆಯೊಡಲು
ತುಂಬದೆ ತೆಕ್ಕೆ ಬದ್ದಿದೆ
ಒತ್ತಾಗಿ ಬೆಳೆಯುತಿದೆ
ಏನೋ! ನಿಜ, ಈಗ…
ಮಾಳಿ, ಮೇಸ್ತ್ರಿ ಡ್ರೈವರ್, ದೋಬಿ…
ನಿಟ್ಟಿಸಿರಿಡುವರು.
ಹೆಂಡತಿಯ ಮೃದು ಮಾತು ಬಣ್ಣದ ಬಳೆಗಳಲ್ಲಿ
ಮಕ್ಕಳ ಕಿರುಚಾಟ ತುಂಟಾಟಗಳಲ್ಲಿ
ತಾಯಿ ಕೈತುತ್ತಿನಲಿ
ಚಿತ್ರಗಳು ಒಂದೊಂದೇ ಮೂಡಿಸಿಕೊಂಡು
ಹಗಲು ಧಗೆಯಾಗಿ ರಾತ್ರಿ ನೀರಸವಾಗಿ
ಅಬ್ಬರದ ಉಬ್ಬರದ ಅರಬ್ಬರ
ತೊತ್ತುಗಳಾಗಿ
ಪ್ರವಾಹದೇರುಬ್ಬದಲಿ ಸೆಣಸಾಟ
ಬದುಕು ಅಪೂರ್ಣ
ಊರಿನ ಪತ್ರಗಳು
ಮದುವೆ ಮುಂಜುವೆ ಹಬ್ಬ ಹರಿದಿನಗಳು
ಮನದಾಳ ಬಿರಿದು ಬಿಸಿಲಿಗೆ ತತ್ತರಿಸುವುದು
ಬಂಧುಗಳ, ಕರುಳುಗಳ ಸಾವಿನ ಸುದ್ದಿ
ಗಳ ಗಳನೇ ಕಣ್ಣೀರುರುಳಿ
ಅನಾಥ ಪ್ರಜ್ಞೆಯ ನೋವು ಕೂಡಾ
ಅನಾಥವಾದಾಗ
ಯಾವ ಕನಸು ಚಿಗಿತು ಚಿತ್ತಾರವಾಗಿ
ನಿಂತು ಮನ ಆರಳಿಸಿಯಾವು!
ಇವರು ಅನಾಥರು
ಮರಳುಗಾಡಿನ ಮರೀಚಿಕೆ
ಭಾವನೆಗಳು ಅಲ್ಲೇ ಹರಿದು ಕಮರಿ
ಮುಚ್ಚಿ ಬಿಡುವುವು
ತಾನಿಲ್ಲಿ ಯಂತ್ರ, ಗೊತ್ತಾದಾಗ
ಆಸೆ ಸತ್ತು ಕಣ್ಣು ಬತ್ತಿ
ದಿನ ರಾತ್ರಿಗಳಿಗೆ ಬದುಕೇ ಇಲ್ಲ
ನಿಟ್ಟಿಸಿರಿಡುವಾಗ
ದೂರದ ತಾಯ್ನಾಡು ಕೈ ಬೀಸಿ ಕರೆಯುತಿದೆ
ಬಾ ಬಾ ಎಂದು
ಅಂಗಲಾಚುತ್ತಿದೆ ಹೆಂಡತಿಯ
ಏಕಾಂತದ ಕಣ್ಣೀರು
ಬಿಸಿಲಿನುಬ್ಬುಬ್ಬರ ಇಳಿಸಿ ಸೂರ್ಯ
ಕಡಲು ಸೇರಲೇಬೇಕು
ಸತ್ತು ಬದುಕಿಯೋ
ಬದುಕಿ ಸತ್ತೋ
ಕೊನಗೆ ಸಮಾಧಿಗೆ ಬರುತ್ತಾರೆ
ತಾಯ್ನಾಡಿಗೆ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...