Home / ಲೇಖನ / ಇತರೆ / ನಿದ್ದೆಯ ಕತೆ

ನಿದ್ದೆಯ ಕತೆ

“ನಿದ್ದೆಗೇಡಿ ಬುದ್ದಿಗೇಡಿ” ಎಂಬ ಗಾದೆ ಮಾತಿದೆ. ನಿದ್ದೆಯಿಲ್ಲದವರು ಬುದ್ಧಿಯಿಲ್ಲದವರು ಒಂದೇ. ದೇಶ ವಿದೇಶಗಳಲ್ಲಿ ಜನರು ಈಗೀಗ ನಿದ್ದೆಯಿಲ್ಲದೆ ವಿಲವಿಲ ಒದ್ದಾಡುತ್ತಿರುವರು. ನಾನಾ ಒತ್ತಡಗಳಿಂದಾಗಿ ಮನಃಶಾಂತಿಯಿಲ್ಲದೆ ಕಡ್ಡಾಯವಾಗಿ ನಿದ್ರೆ ಮಾತ್ರೆ ತೆಗೆದುಕೊಂಡೇ ನಿದ್ರೆಗೆ ಜಾರುತ್ತಿರುವರು. ನಿದ್ರೆಯನ್ನು ಕೊಳ್ಳಲಾಗದು. ಸಹಜವಾಗಿ ನಿದ್ರೆ ಬರಬೇಕು. ಆದರೆ ನಿದ್ರೆಯಿಲ್ಲದೆ ನಾನಾ ಕಸರತ್ತು ಮಾಡುವರು. ಸುಖ, ನಿದ್ರೆ ಮಾತ್ರ ಕಾಣರು.

“ಬೇಗ ಮಲಗು ಬೇಗ ಏಳು” ಇದು ಕೆಲವರ ಕೈಯಿಂದ ಆಗದು. ಇವರು ತಡವಾಗಿ ಮಲಗುವುದು ತಡವಾಗಿ ಏಳುವುದು, ಸೂರ್ಯ ಪುತ್ರರಂತೆ ಬಿಸಿಲು ಮೈಸುಟ್ಟರೆ ಆಗ ಎಚ್ಚರವಾಗುವರು.

ಇನ್ನು ಕೆಲವರು ಸೂರ್ಯಕಾಂತಿಯ ಹೂವಂತೆ ಸೂರ್ಯನಿಗೆ ಮುಖ ಕೊಟ್ಟು ದುಡಿವವರು. ಸೂರ್ಯಾಸ್ತಮಿಸಿದಂತೆ ಅವರ ದುಡಿಮೆ ಮುಗಿವದು. ವಿಶ್ರಾಂತಿ ಬಯಸುವರು.

ಎಷ್ಟು ಹೊತ್ತಿಗೆ ಮಲಗಿದೆ ನಿದ್ರಿಸಿದೆ ಮುಖ್ಯ ಅಲ್ಲ. ಬೆಳಿಗ್ಗೆ ಸೂರ್ಯನನ್ನು ಎಬ್ಬಿಸುವುದು ಜಗಕೆ ಬೆಳಕು ಹರಿಸುವುದು ಮುಖ್ಯ. ಮೂಡಣ ದಿಕ್ಕಿಗೆ ಸೂರ್ಯನಿಗೆ ಮುಖ ಕೊಟ್ಟು ನಿಂತಾಗ ಸೂರ್ಯನಾಡುವ ಆಟದಿಂದ ನಮ್ಮ ಆಟ ಮೊದಲಾಗಬೇಕು. ಆಗ ಶಕ್ತಿ ಸಂಚಲನವಾಗುವುದು. ಅಂದು ಒಳ್ಳೆಯ ನಿದ್ದೆ ಸವಿಯಲು ಸಾಧ್ಯವಿದೆ.

ಒಳ್ಳೆಯ ನಿದ್ದೆ ಸಹಜವಾದ ನಿದ್ದೆ ಮನುಷ್ಯನನ್ನು ಲವಲವಿಕೆಯಿಂದ ಇಡುವುದು. ಏನೆಲ್ಲ ನೆನಪುಗಳನ್ನು ಒತ್ತರಿಸಿಕೊಂಡು ಬರುವುದು.

ನಿದ್ದೆಯ ಬಗ್ಗೆ ಇತ್ತೀಚಿಗೆ ಬ್ರಿಟನ್ ಅಧ್ಯಯನಕಾರರು ಹೊಸ ಹೊಸ ವಿಚಾರಗಳನ್ನು ಸಂಶೋಧಿಸಿರುವರು. ನಿದ್ದೆ-ನೆನಪಿನ ಶಕ್ತಿಯನ್ನು ವೃದ್ಧಿಸುವದೆಂದಿರುವರು. ಬ್ರಿಟನ್‌ನ ಎಕ್ಸೆಟರ್‌ ವಿಶ್ವವಿದ್ಯಾಲಯ ಹಾಗೂ ಸ್ಪೇನ್‌ನ ಮಿದುಳು ಹಾಗೂ ಭಾಷಾ ಕೇಂದ್ರದ ತಜ್ಞರ ತಂಡ ಈ ಅಧ್ಯಯನವನ್ನು ಕೈಗೊಂಡಿದ್ದು… ಈ ಹಿಂದೆ ಮರೆತು ಹೋಗಿದ್ದ ನೆನಪಿಗೆ ಸಿಗದ ಎಷ್ಟೋ ವಿಚಾರಗಳು, ಘಟನೆಗಳು ಸುಮಧುರ ಕ್ಷಣಗಳನ್ನು ಒಳ್ಳೆಯ ನಿದ್ದೆಯು ಸುಲಭವಾಗಿ ನೆನಪು ಮಾಡಿಕೊಳ್ಳಲು ಅನುವು ಮಾಡಿಕೊಡುವುದೆಂದು ಸಂಶೋಧಿಸಿರುವರು.

ಸರಿಯಾಗಿ ನಿದ್ರೆಯಾಗದ ದಿನಗಳಲ್ಲಿ ಎಚ್ಚರವಾಗಿದ್ದ, ನಿದ್ರೆಯಲ್ಲಿ ಮರೆತು ಹೋಗಿರುವ ಎಷ್ಟೋ ಹಣಕಾಸಿನ ವಿಚಾರಗಳು ಒಳ್ಳೆಯ ನಿದ್ರೆಯ ಬಳಿಕ ನೆನಪಿಸಿಕೊಳ್ಳುವ ಸಾಮಾರ್ಥ್ಯ ದುಪ್ಪಟ್ಟಾಗಿರುವುದೆಂದು ಅಧ್ಯಯನಕಾರರು ಖಚಿತಪಡಿಸಿರುವರು.

ಆದ್ದರಿಂದ ಒಳ್ಳೆಯ ನಿದ್ದೆಯಿಂದ ಒಳ್ಳೆಯ ಕನಸುಗಳು ಸಾಕಾರಗೊಳ್ಳುವುದು. ನೆನಪಿನ ಶಕ್ತಿಯನ್ನು ಮತ್ತಷ್ಟು ತೀಕ್ಷ್ಯಗೊಳಿಸುವುದು, ಆಯುಷ್ಯ ವೃದ್ಧಿಸುವುದು. ಇತ್ಯಾದಿ ಲಾಭಗಳನ್ನು ಎಕ್ಸೆಟರ್ ವಿಶ್ವವಿದ್ಯಾಲಯದ ನಿಕೊಲಸ್‌ಡುಮಯ್ ವಿವರಿಸಿರುವರು. ಆದ್ದರಿಂದ ಎಲ್ಲರೂ ಒಳ್ಳೆಯ ನಿದ್ದೆ ಮಾಡಲು ಮನಸು ಮಾಡೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ