Home / ಲೇಖನ / ಇತರೆ / ನಿದ್ದೆಯ ಕತೆ

ನಿದ್ದೆಯ ಕತೆ

“ನಿದ್ದೆಗೇಡಿ ಬುದ್ದಿಗೇಡಿ” ಎಂಬ ಗಾದೆ ಮಾತಿದೆ. ನಿದ್ದೆಯಿಲ್ಲದವರು ಬುದ್ಧಿಯಿಲ್ಲದವರು ಒಂದೇ. ದೇಶ ವಿದೇಶಗಳಲ್ಲಿ ಜನರು ಈಗೀಗ ನಿದ್ದೆಯಿಲ್ಲದೆ ವಿಲವಿಲ ಒದ್ದಾಡುತ್ತಿರುವರು. ನಾನಾ ಒತ್ತಡಗಳಿಂದಾಗಿ ಮನಃಶಾಂತಿಯಿಲ್ಲದೆ ಕಡ್ಡಾಯವಾಗಿ ನಿದ್ರೆ ಮಾತ್ರೆ ತೆಗೆದುಕೊಂಡೇ ನಿದ್ರೆಗೆ ಜಾರುತ್ತಿರುವರು. ನಿದ್ರೆಯನ್ನು ಕೊಳ್ಳಲಾಗದು. ಸಹಜವಾಗಿ ನಿದ್ರೆ ಬರಬೇಕು. ಆದರೆ ನಿದ್ರೆಯಿಲ್ಲದೆ ನಾನಾ ಕಸರತ್ತು ಮಾಡುವರು. ಸುಖ, ನಿದ್ರೆ ಮಾತ್ರ ಕಾಣರು.

“ಬೇಗ ಮಲಗು ಬೇಗ ಏಳು” ಇದು ಕೆಲವರ ಕೈಯಿಂದ ಆಗದು. ಇವರು ತಡವಾಗಿ ಮಲಗುವುದು ತಡವಾಗಿ ಏಳುವುದು, ಸೂರ್ಯ ಪುತ್ರರಂತೆ ಬಿಸಿಲು ಮೈಸುಟ್ಟರೆ ಆಗ ಎಚ್ಚರವಾಗುವರು.

ಇನ್ನು ಕೆಲವರು ಸೂರ್ಯಕಾಂತಿಯ ಹೂವಂತೆ ಸೂರ್ಯನಿಗೆ ಮುಖ ಕೊಟ್ಟು ದುಡಿವವರು. ಸೂರ್ಯಾಸ್ತಮಿಸಿದಂತೆ ಅವರ ದುಡಿಮೆ ಮುಗಿವದು. ವಿಶ್ರಾಂತಿ ಬಯಸುವರು.

ಎಷ್ಟು ಹೊತ್ತಿಗೆ ಮಲಗಿದೆ ನಿದ್ರಿಸಿದೆ ಮುಖ್ಯ ಅಲ್ಲ. ಬೆಳಿಗ್ಗೆ ಸೂರ್ಯನನ್ನು ಎಬ್ಬಿಸುವುದು ಜಗಕೆ ಬೆಳಕು ಹರಿಸುವುದು ಮುಖ್ಯ. ಮೂಡಣ ದಿಕ್ಕಿಗೆ ಸೂರ್ಯನಿಗೆ ಮುಖ ಕೊಟ್ಟು ನಿಂತಾಗ ಸೂರ್ಯನಾಡುವ ಆಟದಿಂದ ನಮ್ಮ ಆಟ ಮೊದಲಾಗಬೇಕು. ಆಗ ಶಕ್ತಿ ಸಂಚಲನವಾಗುವುದು. ಅಂದು ಒಳ್ಳೆಯ ನಿದ್ದೆ ಸವಿಯಲು ಸಾಧ್ಯವಿದೆ.

ಒಳ್ಳೆಯ ನಿದ್ದೆ ಸಹಜವಾದ ನಿದ್ದೆ ಮನುಷ್ಯನನ್ನು ಲವಲವಿಕೆಯಿಂದ ಇಡುವುದು. ಏನೆಲ್ಲ ನೆನಪುಗಳನ್ನು ಒತ್ತರಿಸಿಕೊಂಡು ಬರುವುದು.

ನಿದ್ದೆಯ ಬಗ್ಗೆ ಇತ್ತೀಚಿಗೆ ಬ್ರಿಟನ್ ಅಧ್ಯಯನಕಾರರು ಹೊಸ ಹೊಸ ವಿಚಾರಗಳನ್ನು ಸಂಶೋಧಿಸಿರುವರು. ನಿದ್ದೆ-ನೆನಪಿನ ಶಕ್ತಿಯನ್ನು ವೃದ್ಧಿಸುವದೆಂದಿರುವರು. ಬ್ರಿಟನ್‌ನ ಎಕ್ಸೆಟರ್‌ ವಿಶ್ವವಿದ್ಯಾಲಯ ಹಾಗೂ ಸ್ಪೇನ್‌ನ ಮಿದುಳು ಹಾಗೂ ಭಾಷಾ ಕೇಂದ್ರದ ತಜ್ಞರ ತಂಡ ಈ ಅಧ್ಯಯನವನ್ನು ಕೈಗೊಂಡಿದ್ದು… ಈ ಹಿಂದೆ ಮರೆತು ಹೋಗಿದ್ದ ನೆನಪಿಗೆ ಸಿಗದ ಎಷ್ಟೋ ವಿಚಾರಗಳು, ಘಟನೆಗಳು ಸುಮಧುರ ಕ್ಷಣಗಳನ್ನು ಒಳ್ಳೆಯ ನಿದ್ದೆಯು ಸುಲಭವಾಗಿ ನೆನಪು ಮಾಡಿಕೊಳ್ಳಲು ಅನುವು ಮಾಡಿಕೊಡುವುದೆಂದು ಸಂಶೋಧಿಸಿರುವರು.

ಸರಿಯಾಗಿ ನಿದ್ರೆಯಾಗದ ದಿನಗಳಲ್ಲಿ ಎಚ್ಚರವಾಗಿದ್ದ, ನಿದ್ರೆಯಲ್ಲಿ ಮರೆತು ಹೋಗಿರುವ ಎಷ್ಟೋ ಹಣಕಾಸಿನ ವಿಚಾರಗಳು ಒಳ್ಳೆಯ ನಿದ್ರೆಯ ಬಳಿಕ ನೆನಪಿಸಿಕೊಳ್ಳುವ ಸಾಮಾರ್ಥ್ಯ ದುಪ್ಪಟ್ಟಾಗಿರುವುದೆಂದು ಅಧ್ಯಯನಕಾರರು ಖಚಿತಪಡಿಸಿರುವರು.

ಆದ್ದರಿಂದ ಒಳ್ಳೆಯ ನಿದ್ದೆಯಿಂದ ಒಳ್ಳೆಯ ಕನಸುಗಳು ಸಾಕಾರಗೊಳ್ಳುವುದು. ನೆನಪಿನ ಶಕ್ತಿಯನ್ನು ಮತ್ತಷ್ಟು ತೀಕ್ಷ್ಯಗೊಳಿಸುವುದು, ಆಯುಷ್ಯ ವೃದ್ಧಿಸುವುದು. ಇತ್ಯಾದಿ ಲಾಭಗಳನ್ನು ಎಕ್ಸೆಟರ್ ವಿಶ್ವವಿದ್ಯಾಲಯದ ನಿಕೊಲಸ್‌ಡುಮಯ್ ವಿವರಿಸಿರುವರು. ಆದ್ದರಿಂದ ಎಲ್ಲರೂ ಒಳ್ಳೆಯ ನಿದ್ದೆ ಮಾಡಲು ಮನಸು ಮಾಡೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...