Home / ಲೇಖನ / ಇತರೆ / ಬಲಿಕತೆ

ಬಲಿಕತೆ

ಭವ್ಯ ಭಾರತ ಇನ್ನು ಓಬಿರಾಯನ ಕಾಲದಲ್ಲಿದೆಯೆನಿಸುವುದು. ಇನ್ನೂ ಹಳ್ಳಿಗಳಲ್ಲಿ ಕುಗ್ರಾಮಗಳಲ್ಲಿ ಜಾತಿ, ಮತ, ಕುಲ, ಭೇದಗಳ ಜೊತೆಗೆ ಕಂದಾಚಾರ ಮೂಢನಂಬಿಕೆಗಳ ಆಚರಣೆಗಳನ್ನು ಗಮನಿಸಿದರೆ ಇನ್ನೂ ತೀರಾ ಹಿಂದುಳಿದ ದೇಶವೆಂದು ಅನಿಸುವುದು.

ದಿನಾಂಕ ೨೭-೭-೨೦೧೫ರಲ್ಲಿ ಕಲಬುರ್ಗಿ ತಾಲ್ಲೂಕಿನ ಸೋಮನಾಥ ಹಳ್ಳಿಯಲ್ಲಿ ನಿಧಿಯ ದುರಾಸೆಗಾಗಿ ಐದು ವರ್ಷದ ಜ್ಯೋತಿ ಎಂಬ ಬಾಲಕಿಯನ್ನು ಬಲಿಕೊಡಲು ಯತ್ನಿಸಿದ ಆತಂಕಕಾರಿ ಭಯಂಕರ ಘಟನೆಯೊಂದು ಜರುಗಿದೆ. ಇಡೀ ಜಿಲ್ಲೆಯೇನು ಕನ್ನಡ ನಾಡೇ ತಲ್ಲಣಗೊಂಡಿದೆ.

ಸೋಮನಾಥ ಹಳ್ಳಿಯಲ್ಲಿ ಮಹಾ ಮಾಟಗಾರ ಬಸಣ್ಣ ಸಾಯಿಬಣ್ಣ ಡೆಂಬ್ರಿಯು ವಯಸ್ಸು ೭೨ ಆಗಿದ್ದು ಈತ ಈ ಹಿಂದೆ ದಿನಾಂಕ ೨೬-೧೧-೨೦೧೪ರಂದು ಫರಹತಾಬಾದ್ ಠಾಣೆಯ ವ್ಯಾಪ್ತಿಯಲ್ಲಿ ಈಗಾಗಲೇ ರೇಣುಕಾ ಎಂಬ ಪುಟ್ಟ ಬಾಲಕಿಯನ್ನು ಇದೇ ಬಸಣ್ಣ ಸಾಯಿಬಣ್ಣ ಡೆಂಗ್ರಿಯು ನಿಧಿಯ ದುರಾಸೆಗಾಗಿ ಬಲಿ ಕೊಟ್ಟಿದ್ದರಿಂದ ಈತನ ವಿರುದ್ಧ ಕೇವಲ ಕೊಲೆಯ ಕೇಸು ದಾಖಲಾಗಿತ್ತು ! ಈಗ ಕೊಲೆಯ ಯತ್ನದ ಪ್ರಕರಣ ದಾಖಲಾಗಿದೆ.

ಕೊಲೆ ಮಾಡಿದವನ್ನು ಬಿಟ್ಟಿದ್ದರಿಂದಲ್ಲವೇ ಇನ್ನೊಂದು ಮತ್ತೊಂದು ಮಗದೊಂದು ಕೊಲೆಗೆ ಯತ್ನ ನಡೆಸಿರುವುದೆಂದು ಇಡೀ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿರುವರು.

ದಿನಾಂಕ ೨೭-೦೭-೨೦೧೫ರಂದು ಮಂಗಳವಾರದ ದಿನದಂದು ಜ್ಯೋತಿ ಎಂಬ ಬಾಲಕಿಗೆ “ನನ್ನ ಮನೆಯ ಬಳಿ ನಿಧಿ ಇದೆ. ನಿನ್ನನ್ನು ಬಲಿ ಕೊಟ್ಟರೆ ನನಗೆ ನಿಧಿಯು ಸಿಗುವುದು. ನಿನಗೆ ಸ್ವರ್ಗ ಲಭಿಸುವುದು” ಎಂದು ಏನೇನೋ ಆಮಿಷವೊಡ್ಡಿ ಬಾಲಕಿಯನ್ನು ಉಪಾಯವಾಗಿ ತನ್ನ ಮನೆಗೆ ಈ ಮಾಟಗಾರ ಕರೆದುಕೊಂಡು ಹೋಗಿದ್ದ! ಅಂದು ಮಾಟದ ವಿಧಿ ವಿಧಾನ ಯಂತ್ರ, ಮಂತ್ರ, ತಂತ್ರ ಎಲ್ಲಾ ವಿದ್ಯೆ ಪೂರೈಸಿ ಇನ್ನೇನು ಬಲಿ ನೀಡಬೇಕು.

ಅಷ್ಟರಲ್ಲಿ- ಈ ಸುದ್ದಿ ಮಹಿಳೆಯೊಬ್ಬರಿಗೆ ಈ ವಿಷಯ ತಿಳಿದಿದೆ ಆಕೆ ಜನರಿಗೆ ತಿಳಿಸಿದ್ದಾಳೆ ಅವರೆಲ್ಲಾ ಆತನ ಮನೆಗೆ ನುಗ್ಗಿ ದಾಂಧಲೆ ನಡೆಸಿದಾಗ ಬಾಲಕಿ ಅವನಿಂದ ತಪ್ಪಿಸಿಕೊಂಡಳು. ಜನರು ಕುಪಿತಗೊಂಡು ಅವನನ್ನು ಹಿಗ್ಗಾಮುಗ್ಗಾ ಬಡಿದಿದ್ದಾರೆ! ಪೊಲೀಸ್‌ನವರಿಗೆ ಬಾಲಕಿಯ ತಂದೆ ದೇವೇಂದ್ರ ಅವರು ದೂರು ಸಲ್ಲಿಸಿರುವರು ಮಾಟಗಾರನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈಗ ಈ ಹಳ್ಳಿಯಲ್ಲಿ ಏನು? ಸುತ್ತ ೧೮ ಹಳ್ಳಿಗಳಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ! ಚಿಕ್ಕಚಿಕ್ಕ ಹೆಣ್ಣು ಮಕ್ಕಳನ್ನು ಬಲಿಕೊಡುವರೆಂದು… ಇದರ ನಿವಾರಣೆ ಹೆಣ್ಣುಮಕ್ಕಳ ರಕ್ಷಣೆ ಎಲ್ಲರ ಕೆಲಸವಲ್ಲವೇ??
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...