Home / ಲೇಖನ / ವಿಜ್ಞಾನ / ಬಾಹ್ಯಾಕಾಶದ ಕಥೆ

ಬಾಹ್ಯಾಕಾಶದ ಕಥೆ

ಬಾಹ್ಯಾಕಾಶಕ್ಕೆ ತೆರಳುವ ವಿಜ್ಞಾನಿಗಳು ವಾರ ಎರಡು ವಾರ ತಿಂಗಳುಗಟ್ಟಲೆ ಹೇಗೆ ಜೀವಿಸುವರೆಂಬುದೇ ನಿಗೂಢ ಪವಾಡ, ಇದೊಂದು ಸಾಹಸದ ಕತೆ.

ಅಲ್ಲಿ- ಬಾಹ್ಯಾಕಾಶದಲ್ಲಿ ವಿಜ್ಞಾನಿಗಳು ಪ್ಯಾಕೆಟ್ ಮಾಡಲಾದ ಆಹಾರ ಇಲ್ಲವೇ ಮಾತ್ರೆಗಳು ತಿಂದು ಮೂತ್ರ ಕುಡಿದು ಸಂಶೋಧನೆ ಮಾಡುವರು.

ಈಗೀಗ ಅಮೆರಿಕದ ನಾಸಾದ ಪ್ರಯೋಗ ಸಿದ್ಧಿಸಿದೆ. ಅಲ್ಲಿ ತರಕಾರಿ ಬೆಳೆಯುವ ಹಚ್ಚನೆ ತರಕಾರಿ ತಿನ್ನಬಹುದು. ಬಿಸಿಬಿಸಿ ಅಡಿಗೆ ತಯಾರಿಸಬಹುದೆಂದು ಈಗಾಗಲೇ ವಿಜ್ಞಾನಿಗಳು ಘೋಷಿಸಿದ್ದಾರೆ.

ಹೌದು! ಅಲ್ಲಿ ಗುರುತ್ವವೇ ಇಲ್ಲದೆ ಆ ಜಾಗದಲ್ಲಿ ಮಣ್ಣಲ್ಲಿ ಬೀಜಗಳೇ ನಿಲ್ಲುವುದಿಲ್ಲ ಹೇಗೋ ನಿಲ್ಲಿಸಿದರೂ ಬೀಜಕ್ಕೆ ಯಾವ ದಿಕ್ಕಿಗೆ ಮೊಳಕೆಯಾಗಬೇಕೋ ತಿಳಿಯಲಾರದ ಸ್ಥಳದಲ್ಲಿ ತರಕಾರಿ ಬೆಳೆಯುವುದು ಭಗೀರಥ ಪ್ರಯತ್ನವೆಂದು ನಾಸಾದ ಐಯಾನ್ ಕ್ರಾಫೋರ್ಡ್ ಎಂಬ ವಿಜ್ಞಾನಿ ತಿಳಿಸಿದ್ದಾರೆ.

ಬಾಹ್ಯಾಕಾಶದಲ್ಲೇ ಆಹಾರ ಬೆಳೆಯುವ ನಾಸಾದ ಯೋಜನೆಯ ಹೆಸರು ವೆಜ್-೦೧ ಎಂದು! ಇದಕ್ಕೆಂದೇ ಕಳೆದ ತಿಂಗಳು ಜುಲೈ ೨೦೧೫ರಲ್ಲಿ ಸ್ಪೇಸ್‌ಎಕ್ಸ್ ಎನ್ನುವ ಖಾಸಗಿ ಉಪಗ್ರಹವನ್ನು ಕಳುಹಿಸಿ ಸ್ಪೇಸ್ ಸ್ಟೇಷನ್‌ಗೆ ಜೋಡಿಸಲಾಗಿದೆ. ಇದರಲ್ಲಿ ವಿಜ್ಞಾನಿಗಳಿಗೆ ಬೇಕಾದ ಆಹಾರ ಪದಾರ್ಥಗಳ ಜತೆಗೆ ಇದರೊಳಗೆ ತರಕಾರಿ ತೋಟವನ್ನೇ ಬೆಳೆಸಲು ಬೇಕಾದ ವ್ಯವಸ್ಥೆ ರೂಪಿಸಲಾಗಿದೆಯೆಂದು ನಾಸಾದ ವಿಜ್ಞಾನಿಗಳು ಅರುಹಿದ್ದಾರೆ.

ಈಗೀಗ ಇಂಟರ್‌ನ್ಯಾಷನಲ್ ಸ್ಟೇಸ್ ಸ್ಟೇಷನ್‌ನಲ್ಲಿ ಫ್ರೆಶ್ ತರಕಾರಿ ಬೆಳೆದಿರುವರು. ಇದರ ಹೆಸರು- ಲೆಟ್ಯೂಸ್. ಇದು ಒಂದು ರೀತಿಯ ಎಲೆಕೋಸನ್ನು ಹೋಲುವ ಒಂದು ತರಕಾರಿ ಎಂದು ನಾಸಾದ ವಿಜ್ಞಾನಿಗಳು ಖಚಿತ ಪಡಿಸಿರುವರು.

ಈಗಾಗಲೇ ೩೩ ದಿನಗಳ ಕಾಲ ಸ್ಪೇಸ್ ಸ್ಟೇಷನ್‌ನಲ್ಲಿರುವ ಲ್ಯಾಬ್‌ನಲ್ಲಿ ಬೆಳೆಯಲಾಗಿರುವ ಈ ತರಕಾರಿಯನ್ನು ಆಗಸ್ಟ್ ೨೦೧೫ರ ಸೋಮವಾರ ಮೊದಲ ವಾರದಂದು ಕಟಾವು ಮಾಡಿರುವರು. ಇದನ್ನು ಅಲ್ಲಿದ್ದ ಆರು ಜನ ವಿಜ್ಞಾನಿಗಳು ಪ್ರೀತಿಯಿಂದ ಖುಷಿಖುಷಿಯಲಿ ಸೇವಿಸಿದ್ದಾರೆ! ಇದು ಮೊತ್ತ ಮೊದಲಾಗಿದೆ!

ಅಲ್ಲಿ ಸಿಟ್ರಿಕ್ ಆಮ್ಲದಿಂದ ಸ್ವಚ್ಛಗೊಳಿಸಿ ಲೆಟ್ಯೂಸ್‌ನ್ನು ನಾಸಾ ವಿಜ್ಞಾನಿಗಳು ಬಳಸಿರುವರು. ಇವರು ಅರ್ಧ ತಿಂದು ಉಳಿದರ್ಧವನ್ನು ಪ್ಯಾಕ್ ಮಾಡಿ ಫ್ರೀಜರ್‌ನಲ್ಲಿಟ್ಟು ಭೂಮಿಗೆ ವಾಪಾಸ್ಸು ತಂದಿರುವರು! ಇಲ್ಲಿ ಅದನ್ನು ವೈಜ್ಞಾನಿಕ ವಿಶ್ಲೇಷಣೆಗೆ ಒಳಪಡಿಸಲಾಗುವುದೆಂದು ವಿಜ್ಞಾನಿಗಳು ಖಚಿತ ಪಡಿಸಿರುವರು.

– ಹೀಗೆ ನಾಸಾದ ವಿಜ್ಞಾನಿಗಳು ಬಾಹ್ಯಾಕಾಶದಲ್ಲಿ ಮಾಡಿರುವ ಸಾಧನೆಯನ್ನು ಎಲ್ಲರ ಅರಿವಿಗೆ ತಂದಿದ್ದು ಇನ್ನೂ ಹೆಚ್ಚಿನ ಸಂಶೋಧನೆಗಿಲ್ಲಿ ವಿಫುಲವಾದ ಅವಕಾಶವಿದೆ. ಇನ್ನು ಏನೇನು ಹೊಸಹೊಸ ಸಂಶೋಧನೆಗಳು ಜರುಗುತ್ತವೆಂಬುದನ್ನು ಕಾದು ನೋಡೋಣವಲ್ಲವೇ??
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...