Home / ಲೇಖನ / ಇತರೆ / ಪಾಲ್ಮರ್ ಕತೆ

ಪಾಲ್ಮರ್ ಕತೆ

ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಪಾಲ್ಮರ್ ಎಂಬ ಶ್ರೀಮಂತ ದಂತ ವೈದ್ಯನಿದ್ದಾನೆ. ತನ್ನ ವೃತ್ತಿಗಿಂತಾ ಪ್ರವೃತ್ತಿಯ ಬಗ್ಗೆ ವಿಪರೀತ ಹುಚ್ಚು. ವನ್ಯ ಜೀವಿಗಳ ಬೇಟೆಯಾಡುವುದು! ಕೆಲವರನ್ನು ಸುಟ್ಟರೂ ಹುಟ್ಟು ಗುಣ ಹೋಗಲಾರದು… ಎಂಬಂತೇ ಪಾಲ್ಮರ್ ಈ ಹಿಂದೆ ಅಮೆರಿಕಾದಲ್ಲಿ ಜಿಂಕೆಯನ್ನು ಬೇಟೆಯಾಡಿ ಸಿಕ್ಕಿ ಬಿದ್ದಿರುವರು. ಆ ಪ್ರಕರಣವಿನ್ನು ಹಸಿಹಸಿಯಾಗಿರುವಾಗಲೇ ಈತ ವಿಶ್ವಪ್ರಸಿದ್ಧ ಸೆಸಿಲ್ ಹೆಸರಿನ ಆಫ್ರಿಕನ್ ಸಿಂಹವನ್ನು ಈಗ ಆಗಸ್ಟ್ ೨೦೧೫ರಲ್ಲಿ ಕೊಂದಿದ್ದಾನೆ. ಇದು ವನ್ಯ ಜೀವಿ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿರುವನು!

ಜಿಂಬಾಬ್ವೆಯ ಹವಾಂಗೆ ರಾಷ್ಟ್ರೀಯ ಅಭಯಾರಣ್ಯದಲ್ಲಿ ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದುವಾಗಿದ್ದು ಈ ಸಿಂಹದ ಫೋಟೋ ತೆಗೆಯುವುದೂ ಕೂಡಾ ಕಷ್ಟದ ಕೆಲಸ. ಬಿಲ್ಲು ವಿದ್ಯೆಯಲ್ಲಿ ಪ್ರಾವೀಣ್ಯತೆ ಹೊಂದಿರುವ ಪಾಲ್ಮರ್ ದಂತ ವೈದ್ಯ ಕೆಲಸಕ್ಕಿಂತ ಬೇಟೆ ಕೆಲಸ ಪ್ರವೃತ್ತಿಯನ್ನಾಗಿಸಿಕೊಂಡಿರುವರು!

ವನ್ಯ ಜೀವಿಗಳನ್ನು ಬೇಟೆಯಾಡುವುದು ಅಪರಾಧ. ಗುರುತರವಾದ ಶಿಕ್ಷೆ ದಂಡನೆ ಇದೆಯೆಂದು ಅರಿವಿದ್ದರೂ ಈತ ಅಮೆರಿಕಾದಿಂದ ಬೇಟೆಯಾಡಲು ಜಿಂಬಾಬ್ಬೆಗೆ ಬಂದಿದ್ದ! ಅಷ್ಟೊಂದು ಗೀಳು!

ಬ೦ದವನೇ ಈತ ಬಾಣ ಬಿಟ್ಟಿದ್ದಾನೆ! ಅದು ಗಾಯಗೊಂಡು ಕೆರಳಿ ತಪ್ಪಿಸಿಕೊಂಡಿದೆ. ಅದಕ್ಕಾಗಿ ೪೦ ಗಂಟೆಗಳ ಕಾಲ ಹುಡುಕಾಟ ನಡೆಸಿ ತದನಂತರ ಬಂದೂಕಿನಿಂದ ಗುಂಡು ಹಾರಿಸಿಕೊಂದಿದ್ದಾನೆ! ಅಲ್ಲದೆ ಅದರೊಂದಿಗೆ ಸೆಲ್ಫಿ ಕೂಡಾ ತೆಗೆದುಕೊಂಡಿದ್ದಾನೆ!

ಈತ ಎಂಥಾ ಹುಚ್ಚನೆಂದರೆ…. ಈ ರಾಷ್ಟ್ರೀಯ ಅಭಯಾರಣ್ಯದಲ್ಲಿ ಬೇಟೆಯಾಡುವುದು ಕೂಡಾ ಕಾನೂನುಬದ್ಧ ಇರಬಹುದೆಂದು ನಾನು ಭಾವಿಸಿದ್ದೆನೆಂದು ಆತ ತಪ್ಪೋಪ್ಪಿಕೊಂಡಿದ್ದಾನೆ.

ಈ ಅಭಯಾರಣ್ಯಕ್ಕೆ ನಿತ್ಯ ನೂರಾರು ಜನರು ಬಂದು ಹೋಗುತ್ತಿದ್ದ ಪ್ರವಾಸಿಗರ ಬಲು ನೆಚ್ಚಿನ ಮೆಚ್ಚಿನ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದ ಈ ಸಿಂಹವನ್ನು ಕೊಂದಿರುವುದು ಭಾರೀ ಭಾರೀ ನೋವನ್ನುಂಟು ಮಾಡಿದೆಯೆಂದು ಜಿಂಬಾಬ್ವೆಯ ಸಫಾರಿ ನಿಯೋಜಕರ ಕೂಟದ ಅಧ್ಯಕ್ಷ ಇಮ್ಯನುವೆಲ್ ಪುಂಡ್ರಿಯಾ ಅವರು ಸಾರಿದ್ದಾರೆ.

ಈ ಪಾಲ್ಕರ್ ಸಿಂಹದ ಬೇಟೆಗಾಗಿ ೫೦ ಲಕ್ಷ ರೂಪಾಯಿ ನೀಡಿದ್ದ ಎಂದು ಈ ಇಮ್ಯನುವೆಲ್ ಪುಂಡ್ರಿಯಾ ಹೇಳಿರುವರು.

ಅಬ್ಬಾ! ಇಂಥಾ ಹುಚ್ಚರ ಸಹವಾಸದಿಂದ ಯಾರಿಗೆ ನೆಮ್ಮದಿ ಗೌರವ ಹೆಸರು ಬರಲು ಸಾಧ್ಯ ಹೇಳಿ? ಗೊತ್ತಿಲ್ಲದ ದಡ್ಡರಿಗೆ ಬುದ್ಧಿ ಹೇಳಬಹುದು. ಈತ ಗೊತ್ತಿರುವ ವಿದ್ಯಾವಂತ ವೈದ್ಯ ಇವನಿಗೆ ಹೇಗೆ ಬುದ್ದಿ ಹೇಳುವುದು ??
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...