ಪಾಲ್ಮರ್ ಕತೆ

ಪಾಲ್ಮರ್ ಕತೆ

ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಪಾಲ್ಮರ್ ಎಂಬ ಶ್ರೀಮಂತ ದಂತ ವೈದ್ಯನಿದ್ದಾನೆ. ತನ್ನ ವೃತ್ತಿಗಿಂತಾ ಪ್ರವೃತ್ತಿಯ ಬಗ್ಗೆ ವಿಪರೀತ ಹುಚ್ಚು. ವನ್ಯ ಜೀವಿಗಳ ಬೇಟೆಯಾಡುವುದು! ಕೆಲವರನ್ನು ಸುಟ್ಟರೂ ಹುಟ್ಟು ಗುಣ ಹೋಗಲಾರದು… ಎಂಬಂತೇ ಪಾಲ್ಮರ್ ಈ ಹಿಂದೆ ಅಮೆರಿಕಾದಲ್ಲಿ ಜಿಂಕೆಯನ್ನು ಬೇಟೆಯಾಡಿ ಸಿಕ್ಕಿ ಬಿದ್ದಿರುವರು. ಆ ಪ್ರಕರಣವಿನ್ನು ಹಸಿಹಸಿಯಾಗಿರುವಾಗಲೇ ಈತ ವಿಶ್ವಪ್ರಸಿದ್ಧ ಸೆಸಿಲ್ ಹೆಸರಿನ ಆಫ್ರಿಕನ್ ಸಿಂಹವನ್ನು ಈಗ ಆಗಸ್ಟ್ ೨೦೧೫ರಲ್ಲಿ ಕೊಂದಿದ್ದಾನೆ. ಇದು ವನ್ಯ ಜೀವಿ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿರುವನು!

ಜಿಂಬಾಬ್ವೆಯ ಹವಾಂಗೆ ರಾಷ್ಟ್ರೀಯ ಅಭಯಾರಣ್ಯದಲ್ಲಿ ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದುವಾಗಿದ್ದು ಈ ಸಿಂಹದ ಫೋಟೋ ತೆಗೆಯುವುದೂ ಕೂಡಾ ಕಷ್ಟದ ಕೆಲಸ. ಬಿಲ್ಲು ವಿದ್ಯೆಯಲ್ಲಿ ಪ್ರಾವೀಣ್ಯತೆ ಹೊಂದಿರುವ ಪಾಲ್ಮರ್ ದಂತ ವೈದ್ಯ ಕೆಲಸಕ್ಕಿಂತ ಬೇಟೆ ಕೆಲಸ ಪ್ರವೃತ್ತಿಯನ್ನಾಗಿಸಿಕೊಂಡಿರುವರು!

ವನ್ಯ ಜೀವಿಗಳನ್ನು ಬೇಟೆಯಾಡುವುದು ಅಪರಾಧ. ಗುರುತರವಾದ ಶಿಕ್ಷೆ ದಂಡನೆ ಇದೆಯೆಂದು ಅರಿವಿದ್ದರೂ ಈತ ಅಮೆರಿಕಾದಿಂದ ಬೇಟೆಯಾಡಲು ಜಿಂಬಾಬ್ಬೆಗೆ ಬಂದಿದ್ದ! ಅಷ್ಟೊಂದು ಗೀಳು!

ಬ೦ದವನೇ ಈತ ಬಾಣ ಬಿಟ್ಟಿದ್ದಾನೆ! ಅದು ಗಾಯಗೊಂಡು ಕೆರಳಿ ತಪ್ಪಿಸಿಕೊಂಡಿದೆ. ಅದಕ್ಕಾಗಿ ೪೦ ಗಂಟೆಗಳ ಕಾಲ ಹುಡುಕಾಟ ನಡೆಸಿ ತದನಂತರ ಬಂದೂಕಿನಿಂದ ಗುಂಡು ಹಾರಿಸಿಕೊಂದಿದ್ದಾನೆ! ಅಲ್ಲದೆ ಅದರೊಂದಿಗೆ ಸೆಲ್ಫಿ ಕೂಡಾ ತೆಗೆದುಕೊಂಡಿದ್ದಾನೆ!

ಈತ ಎಂಥಾ ಹುಚ್ಚನೆಂದರೆ…. ಈ ರಾಷ್ಟ್ರೀಯ ಅಭಯಾರಣ್ಯದಲ್ಲಿ ಬೇಟೆಯಾಡುವುದು ಕೂಡಾ ಕಾನೂನುಬದ್ಧ ಇರಬಹುದೆಂದು ನಾನು ಭಾವಿಸಿದ್ದೆನೆಂದು ಆತ ತಪ್ಪೋಪ್ಪಿಕೊಂಡಿದ್ದಾನೆ.

ಈ ಅಭಯಾರಣ್ಯಕ್ಕೆ ನಿತ್ಯ ನೂರಾರು ಜನರು ಬಂದು ಹೋಗುತ್ತಿದ್ದ ಪ್ರವಾಸಿಗರ ಬಲು ನೆಚ್ಚಿನ ಮೆಚ್ಚಿನ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದ ಈ ಸಿಂಹವನ್ನು ಕೊಂದಿರುವುದು ಭಾರೀ ಭಾರೀ ನೋವನ್ನುಂಟು ಮಾಡಿದೆಯೆಂದು ಜಿಂಬಾಬ್ವೆಯ ಸಫಾರಿ ನಿಯೋಜಕರ ಕೂಟದ ಅಧ್ಯಕ್ಷ ಇಮ್ಯನುವೆಲ್ ಪುಂಡ್ರಿಯಾ ಅವರು ಸಾರಿದ್ದಾರೆ.

ಈ ಪಾಲ್ಕರ್ ಸಿಂಹದ ಬೇಟೆಗಾಗಿ ೫೦ ಲಕ್ಷ ರೂಪಾಯಿ ನೀಡಿದ್ದ ಎಂದು ಈ ಇಮ್ಯನುವೆಲ್ ಪುಂಡ್ರಿಯಾ ಹೇಳಿರುವರು.

ಅಬ್ಬಾ! ಇಂಥಾ ಹುಚ್ಚರ ಸಹವಾಸದಿಂದ ಯಾರಿಗೆ ನೆಮ್ಮದಿ ಗೌರವ ಹೆಸರು ಬರಲು ಸಾಧ್ಯ ಹೇಳಿ? ಗೊತ್ತಿಲ್ಲದ ದಡ್ಡರಿಗೆ ಬುದ್ಧಿ ಹೇಳಬಹುದು. ಈತ ಗೊತ್ತಿರುವ ವಿದ್ಯಾವಂತ ವೈದ್ಯ ಇವನಿಗೆ ಹೇಗೆ ಬುದ್ದಿ ಹೇಳುವುದು ??
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಿಂಸೆ
Next post ಮಾನ್ಯರಿಗೆ ಶರಣು

ಸಣ್ಣ ಕತೆ

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

cheap jordans|wholesale air max|wholesale jordans|wholesale jewelry|wholesale jerseys