Home / ಲೇಖನ / ಇತರೆ / ಪಾಲ್ಮರ್ ಕತೆ

ಪಾಲ್ಮರ್ ಕತೆ

ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಪಾಲ್ಮರ್ ಎಂಬ ಶ್ರೀಮಂತ ದಂತ ವೈದ್ಯನಿದ್ದಾನೆ. ತನ್ನ ವೃತ್ತಿಗಿಂತಾ ಪ್ರವೃತ್ತಿಯ ಬಗ್ಗೆ ವಿಪರೀತ ಹುಚ್ಚು. ವನ್ಯ ಜೀವಿಗಳ ಬೇಟೆಯಾಡುವುದು! ಕೆಲವರನ್ನು ಸುಟ್ಟರೂ ಹುಟ್ಟು ಗುಣ ಹೋಗಲಾರದು… ಎಂಬಂತೇ ಪಾಲ್ಮರ್ ಈ ಹಿಂದೆ ಅಮೆರಿಕಾದಲ್ಲಿ ಜಿಂಕೆಯನ್ನು ಬೇಟೆಯಾಡಿ ಸಿಕ್ಕಿ ಬಿದ್ದಿರುವರು. ಆ ಪ್ರಕರಣವಿನ್ನು ಹಸಿಹಸಿಯಾಗಿರುವಾಗಲೇ ಈತ ವಿಶ್ವಪ್ರಸಿದ್ಧ ಸೆಸಿಲ್ ಹೆಸರಿನ ಆಫ್ರಿಕನ್ ಸಿಂಹವನ್ನು ಈಗ ಆಗಸ್ಟ್ ೨೦೧೫ರಲ್ಲಿ ಕೊಂದಿದ್ದಾನೆ. ಇದು ವನ್ಯ ಜೀವಿ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿರುವನು!

ಜಿಂಬಾಬ್ವೆಯ ಹವಾಂಗೆ ರಾಷ್ಟ್ರೀಯ ಅಭಯಾರಣ್ಯದಲ್ಲಿ ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದುವಾಗಿದ್ದು ಈ ಸಿಂಹದ ಫೋಟೋ ತೆಗೆಯುವುದೂ ಕೂಡಾ ಕಷ್ಟದ ಕೆಲಸ. ಬಿಲ್ಲು ವಿದ್ಯೆಯಲ್ಲಿ ಪ್ರಾವೀಣ್ಯತೆ ಹೊಂದಿರುವ ಪಾಲ್ಮರ್ ದಂತ ವೈದ್ಯ ಕೆಲಸಕ್ಕಿಂತ ಬೇಟೆ ಕೆಲಸ ಪ್ರವೃತ್ತಿಯನ್ನಾಗಿಸಿಕೊಂಡಿರುವರು!

ವನ್ಯ ಜೀವಿಗಳನ್ನು ಬೇಟೆಯಾಡುವುದು ಅಪರಾಧ. ಗುರುತರವಾದ ಶಿಕ್ಷೆ ದಂಡನೆ ಇದೆಯೆಂದು ಅರಿವಿದ್ದರೂ ಈತ ಅಮೆರಿಕಾದಿಂದ ಬೇಟೆಯಾಡಲು ಜಿಂಬಾಬ್ಬೆಗೆ ಬಂದಿದ್ದ! ಅಷ್ಟೊಂದು ಗೀಳು!

ಬ೦ದವನೇ ಈತ ಬಾಣ ಬಿಟ್ಟಿದ್ದಾನೆ! ಅದು ಗಾಯಗೊಂಡು ಕೆರಳಿ ತಪ್ಪಿಸಿಕೊಂಡಿದೆ. ಅದಕ್ಕಾಗಿ ೪೦ ಗಂಟೆಗಳ ಕಾಲ ಹುಡುಕಾಟ ನಡೆಸಿ ತದನಂತರ ಬಂದೂಕಿನಿಂದ ಗುಂಡು ಹಾರಿಸಿಕೊಂದಿದ್ದಾನೆ! ಅಲ್ಲದೆ ಅದರೊಂದಿಗೆ ಸೆಲ್ಫಿ ಕೂಡಾ ತೆಗೆದುಕೊಂಡಿದ್ದಾನೆ!

ಈತ ಎಂಥಾ ಹುಚ್ಚನೆಂದರೆ…. ಈ ರಾಷ್ಟ್ರೀಯ ಅಭಯಾರಣ್ಯದಲ್ಲಿ ಬೇಟೆಯಾಡುವುದು ಕೂಡಾ ಕಾನೂನುಬದ್ಧ ಇರಬಹುದೆಂದು ನಾನು ಭಾವಿಸಿದ್ದೆನೆಂದು ಆತ ತಪ್ಪೋಪ್ಪಿಕೊಂಡಿದ್ದಾನೆ.

ಈ ಅಭಯಾರಣ್ಯಕ್ಕೆ ನಿತ್ಯ ನೂರಾರು ಜನರು ಬಂದು ಹೋಗುತ್ತಿದ್ದ ಪ್ರವಾಸಿಗರ ಬಲು ನೆಚ್ಚಿನ ಮೆಚ್ಚಿನ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದ ಈ ಸಿಂಹವನ್ನು ಕೊಂದಿರುವುದು ಭಾರೀ ಭಾರೀ ನೋವನ್ನುಂಟು ಮಾಡಿದೆಯೆಂದು ಜಿಂಬಾಬ್ವೆಯ ಸಫಾರಿ ನಿಯೋಜಕರ ಕೂಟದ ಅಧ್ಯಕ್ಷ ಇಮ್ಯನುವೆಲ್ ಪುಂಡ್ರಿಯಾ ಅವರು ಸಾರಿದ್ದಾರೆ.

ಈ ಪಾಲ್ಕರ್ ಸಿಂಹದ ಬೇಟೆಗಾಗಿ ೫೦ ಲಕ್ಷ ರೂಪಾಯಿ ನೀಡಿದ್ದ ಎಂದು ಈ ಇಮ್ಯನುವೆಲ್ ಪುಂಡ್ರಿಯಾ ಹೇಳಿರುವರು.

ಅಬ್ಬಾ! ಇಂಥಾ ಹುಚ್ಚರ ಸಹವಾಸದಿಂದ ಯಾರಿಗೆ ನೆಮ್ಮದಿ ಗೌರವ ಹೆಸರು ಬರಲು ಸಾಧ್ಯ ಹೇಳಿ? ಗೊತ್ತಿಲ್ಲದ ದಡ್ಡರಿಗೆ ಬುದ್ಧಿ ಹೇಳಬಹುದು. ಈತ ಗೊತ್ತಿರುವ ವಿದ್ಯಾವಂತ ವೈದ್ಯ ಇವನಿಗೆ ಹೇಗೆ ಬುದ್ದಿ ಹೇಳುವುದು ??
*****

Tagged:

Leave a Reply

Your email address will not be published. Required fields are marked *

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...