ನನ್ನ ವಾಣಿಯ ನೀನು ವರಿಸಿದವನೇನಲ್ಲ
ನಾ ಬಲ್ಲೆ ; ಹಾಗೆಂದೆ ಕಾವ್ಯಕ್ಕೆ ಕೃಪೆ ಬಯಸಿ
ಕೃತಿಕಾರ ಬರೆದ ಅಂಕಿತದ ನುಡಿಯನ್ನೆಲ್ಲ
ಬದಿಸರಿಸಬಹುದು, ನಿನಗಿಲ್ಲ ಯಾವುದೆ ತಡೆ.
ಚೆಲುವನಿರುವಂತೆ ನೀ ಕುಶಲಮತಿಯೂ ಹೌದು,
ಹಾಗೆಂದೆ ನನ್ನ ಮೆಚ್ಚಿಕೆಯಾಚೆ ಬೆಳೆದಿರುವೆ.
ಹೊಸದೃಷ್ಟಿ ಧೋರಣೆಯ ಹೊಸಮುದ್ರೆ ತಾಳುವುದು
ಖುಷಿ ಈಗ ನಿನಗೆ, ಹಾಗೇ ಮಾಡು ನನ್ನೊಲವೆ.
ಅತಿಶಯೋಕ್ತಿಯ ಮೆರುಗು ಕೊಡುವ ಕಲ್ಪಕ ಸೊಬಗು
ಎಂಥದೆಂಬುದ ಅವರು ಚಿಂತಿಸುತಿರಲು ಅಲ್ಲಿ,
ನಿಜ ನುಡಿವ ನಿಜ ಗೆಳೆಯ ನಿನ್ನ ನಿಜ ಚೆಲುವನ್ನು
ನಿಜ ಪ್ರೀತಿಯಲಿ ಹಿಡಿವೆ ಇಲ್ಲಿ ನಿಜನುಡಿಯಲ್ಲಿ.
ರಕ್ತ ಮಾಂಸದ ಕೊರತೆಯಿರುವ ವ್ವಕ್ತಿತ್ವಕ್ಕೆ
ಬೇಕು ನಿಜ ಆ ಶೈಲಿ, ನಿನಗೆ ಅದು ಯಾತಕ್ಕೆ ?
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 82
I grant thou wert not married to my muse
Related Post
ಸಣ್ಣ ಕತೆ
-
ಕರಾಚಿ ಕಾರಣೋರು
ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…
-
ದಿನಚರಿಯ ಪುಟದಿಂದ
ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್ಪ್ರೆಸ್ ಬಸ್ಸುಗಳು… Read more…
-
ಇರುವುದೆಲ್ಲವ ಬಿಟ್ಟು
ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…
-
ಕರಿ ನಾಗರಗಳು
ಚಿತ್ರ: ಆಂಬರ್ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್ ನೀರು ಹರಿಯುತ್ತಿದ್ದ… Read more…
-
ಬಾಳ ಚಕ್ರ ನಿಲ್ಲಲಿಲ್ಲ
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…