Home / ಕಥೆ / ಅನುವಾದ / ಬಲು ದೊಡ್ಡ ಬಹುಮಾನ ನೀನು, ಅದಕ್ಕೆ ಎದ್ದು

ಬಲು ದೊಡ್ಡ ಬಹುಮಾನ ನೀನು, ಅದಕ್ಕೆ ಎದ್ದು

ಬಲು ದೊಡ್ಡ ಬಹುಮಾನ ನೀನು, ಅದಕ್ಕೆ ಎದ್ದು
ಬಂದವನ ಘನಕಾವ್ಯ ಹಾರಿಸಿದ ಹೆಮ್ಮೆಯ
ತುಂಬು ಹಾಯಿಯೆ ನನ್ನ ಭಾವಗಳ ಹೂಳಿದ್ದು
ಹೊತ್ತ ಬಸಿರೊಳೆ ಅದಕೆ ಗೋರಿಯನು ಕಟ್ಟಿದ್ದು ?
ಇರುಳ ಶಕ್ತಿಗಳ ನೆರವಿಂದ ಮರ್ತ್ಯರ ಮೀರಿ
ಬರೆಯಬಲ್ಲವನ ಸತ್ವವೆ ನನ್ನಮೆಟ್ಟಿದ್ದು ?
ಅಲ್ಲ ಖಂಡಿತ ಅಲ್ಲ ನನ್ನ ಕವಿತೆಯ ದಾರಿ
ಅವನಲ್ಲ, ಇರುಳ ಕೆಳೆಯೂ ಅಲ್ಲ ಮುಚ್ಚಿದ್ದು.
ನನ್ನ ಮೌನ ತಮ್ಮ ಗೆಲುವು ಎನ್ನುವ ಕೂಗು
ಸಲ್ಲದ್ದು ಅವನಿಗೂ, ರಾತ್ರಿ ಪ್ರೇರಣೆ ನೀಡಿ
ಮಂಕು ಚೆಲ್ಲುವ ಅವನ ನಗುಮೊಗದ ಮರುಳಿಗೂ,
ನಾನಾಗಲಿಲ್ಲ ಅವರೆದುರು ಎಂದೂ ಹೇಡಿ.
ನಿನ್ನ ಸಿರಿಮೊಗ ಅವನ ಕವಿತೆಯನು ತುಂಬಿತು
ಉಳಿಯಿತೇನೆನಗೆ, ಆಗೆನ್ನ ಎದೆ ಕುಂದಿತು.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 86
Was it the proud full sail of his great verse

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...