ಮರಿ ಇಲಿ ಸಾಹಸ

ಒಂದೂರಲ್ಲಿ ಇದ್ದರು ರಾಯರು
ಅವರ ಮನೆಯಲಿ ಇಲಿಗಳು ನೂರು
ಎಲ್ಲೆಂದರಲ್ಲಿ ಅವುಗಳ ವಾಸ
ಬೇಡ ರಾಯರಿಗಿದು ತರಲೆ ಸಹವಾಸ

ಮಗಳ ಬೂಟು ರಾಯರ ಹ್ಯಾಟು
ಹೆಂಡತಿ ಸೀರೆ ಮಗನ ಸೂಟು
ಸೋಪು ಬ್ರೆಷ್ ಕಿಟಕಿಯ ಕರ್ಟನ್
ಎಲ್ಲವು ಆದವು ರೂಪದಿ ಮಾಡ್ರನ್

ಇಲಿಗಳ ಓಡಿಸೆ ಅವರ ಪ್ರಯತ್ನ
ಆದವು ಎಲ್ಲಾ ವಿಫಲಯತ್ನ
ರೋಸಿದ ರಾಯರು ತಂದರು ಬೆಕ್ಕು
ಅಡಗಿಸಲೋಸುಗ ಇಲಿಗಳ ಸೊಕ್ಕು

ಬೆಕ್ಕನು ಕಂಡು ಇಲಿಗಳು ನೊಂದು
ಕರೆದವು ಕೂಡಲೆ ಸಭೆಯನ್ನೊಂದು
ಬೆಕ್ಕಿನ ಕಾಟವು ಸಾಕೇಸಾಕು
ತಪ್ಪಿಸಿಕೊಳ್ಳಲು ಪರಿಹಾರವು ಬೇಕು

ಕೂಡಲೆ ಒಂದು ಹಿರಿ ಇಲಿಬಂದು
ಗಣಗಣ ಗಂಟೆಯ ತಂದಿತು ಒಂದು
ಕಟ್ಟಿರಿ ಶತ್ರುಗೆ ಕೊರಳಿಗೆ ಎಂದು
ಆಡಲೆ ಇಲ್ಲ ಮಾತನು ಒಂದೂ

ಶತಶತಮಾನದ ಈ ಸಮಸ್ಯೆ
ಪರಿಹಾರಕ್ಕೆ ಮಾಡಿದ್ದವು ತಪಸ್ಸೇ
ಆದರು ಸಾಧ್ಯವು ಆಗದು ಎಂದು
ಗೋಣನು ಕೆಳಗೆ ಹಾಕಿದವಂದು

ಕೈಚೆಲ್ಲಿ ಕುಳಿತ ಇಲಿಗಳ ಗುಂಪು
ಬೆಕ್ಕಿಗೆ ಸಿಕ್ಕವು ಭೋಜನ ಸೊಂಪು
ಮರಿ ಇಲಿಯೊಂದು ಹಾಕಿತು ಲೆಕ್ಕ
ಹುಡುಕಲೆ ಬೇಕು ಉಪಾಯವು ಪಕ್ಕ

ಮರಿಇಲಿ ರಾಯರ ಕೋಣೆಯಲಿ
ಶತಪಥ ಹೆಜ್ಜೆಯ ಹಾಕುತಲಿ
ನೆನೆಯಿತು ಗಣಪನ ಮನದಲ್ಲಿ
ಹೊಳೆಯಿತು ಸಂಚು ತಲೆಯಲ್ಲಿ

ರಾಯರು ನಿತ್ಯ ಗುಳಿಗೆಯ ನುಂಗಿ
ನಿದ್ರಿಸುವರು ನೆಮ್ಮದಿಯಲಿ ಮಲಗಿ
ಮರಿಇಲಿ ತಂದು ನಿದ್ರೆಯ ಗುಳಿಗೆ
ಹಾಕಿತು ಬೆಕ್ಕಿನ ತಟ್ಟೆಯ ಒಳಗೆ

ಒಡತಿಯು ತಂದಳು ಹಾಲನ್ನು
ಮುದದಲಿ ಕರೆದಳು ಬೆಕ್ಕನ್ನು
ಕಣ್ಮುಚ್ಚಿ ಕುಡಿಯಿತು ಹಾಲನ್ನು
ನಿದ್ರೆಗೆ ಅಪ್ಪಿತು ಧರೆಯನ್ನು

ಮರಿಇಲಿ ಆಗಲೆ ಗಂಟೆಯನು
ಬಿಗಿಯಿತು ಬೆಕ್ಕಿನ ಕೊರಳನ್ನು
ಮರಿಇಲಿ ಸಾಹಸ ಕೊಂಡಾಡಿದವು
ಸಂತಸದೀ ಕುಣಿಕುಣಿದಾಡಿದವು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಧರ್ಮದ ಮುಸುಕಿನೊಳಗಿಂದ
Next post ಚಂದಿರ

ಸಣ್ಣ ಕತೆ

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

cheap jordans|wholesale air max|wholesale jordans|wholesale jewelry|wholesale jerseys