Home / ಬಾಲ ಚಿಲುಮೆ / ಕವಿತೆ / ಮರಿ ಇಲಿ ಸಾಹಸ

ಮರಿ ಇಲಿ ಸಾಹಸ

ಒಂದೂರಲ್ಲಿ ಇದ್ದರು ರಾಯರು
ಅವರ ಮನೆಯಲಿ ಇಲಿಗಳು ನೂರು
ಎಲ್ಲೆಂದರಲ್ಲಿ ಅವುಗಳ ವಾಸ
ಬೇಡ ರಾಯರಿಗಿದು ತರಲೆ ಸಹವಾಸ

ಮಗಳ ಬೂಟು ರಾಯರ ಹ್ಯಾಟು
ಹೆಂಡತಿ ಸೀರೆ ಮಗನ ಸೂಟು
ಸೋಪು ಬ್ರೆಷ್ ಕಿಟಕಿಯ ಕರ್ಟನ್
ಎಲ್ಲವು ಆದವು ರೂಪದಿ ಮಾಡ್ರನ್

ಇಲಿಗಳ ಓಡಿಸೆ ಅವರ ಪ್ರಯತ್ನ
ಆದವು ಎಲ್ಲಾ ವಿಫಲಯತ್ನ
ರೋಸಿದ ರಾಯರು ತಂದರು ಬೆಕ್ಕು
ಅಡಗಿಸಲೋಸುಗ ಇಲಿಗಳ ಸೊಕ್ಕು

ಬೆಕ್ಕನು ಕಂಡು ಇಲಿಗಳು ನೊಂದು
ಕರೆದವು ಕೂಡಲೆ ಸಭೆಯನ್ನೊಂದು
ಬೆಕ್ಕಿನ ಕಾಟವು ಸಾಕೇಸಾಕು
ತಪ್ಪಿಸಿಕೊಳ್ಳಲು ಪರಿಹಾರವು ಬೇಕು

ಕೂಡಲೆ ಒಂದು ಹಿರಿ ಇಲಿಬಂದು
ಗಣಗಣ ಗಂಟೆಯ ತಂದಿತು ಒಂದು
ಕಟ್ಟಿರಿ ಶತ್ರುಗೆ ಕೊರಳಿಗೆ ಎಂದು
ಆಡಲೆ ಇಲ್ಲ ಮಾತನು ಒಂದೂ

ಶತಶತಮಾನದ ಈ ಸಮಸ್ಯೆ
ಪರಿಹಾರಕ್ಕೆ ಮಾಡಿದ್ದವು ತಪಸ್ಸೇ
ಆದರು ಸಾಧ್ಯವು ಆಗದು ಎಂದು
ಗೋಣನು ಕೆಳಗೆ ಹಾಕಿದವಂದು

ಕೈಚೆಲ್ಲಿ ಕುಳಿತ ಇಲಿಗಳ ಗುಂಪು
ಬೆಕ್ಕಿಗೆ ಸಿಕ್ಕವು ಭೋಜನ ಸೊಂಪು
ಮರಿ ಇಲಿಯೊಂದು ಹಾಕಿತು ಲೆಕ್ಕ
ಹುಡುಕಲೆ ಬೇಕು ಉಪಾಯವು ಪಕ್ಕ

ಮರಿಇಲಿ ರಾಯರ ಕೋಣೆಯಲಿ
ಶತಪಥ ಹೆಜ್ಜೆಯ ಹಾಕುತಲಿ
ನೆನೆಯಿತು ಗಣಪನ ಮನದಲ್ಲಿ
ಹೊಳೆಯಿತು ಸಂಚು ತಲೆಯಲ್ಲಿ

ರಾಯರು ನಿತ್ಯ ಗುಳಿಗೆಯ ನುಂಗಿ
ನಿದ್ರಿಸುವರು ನೆಮ್ಮದಿಯಲಿ ಮಲಗಿ
ಮರಿಇಲಿ ತಂದು ನಿದ್ರೆಯ ಗುಳಿಗೆ
ಹಾಕಿತು ಬೆಕ್ಕಿನ ತಟ್ಟೆಯ ಒಳಗೆ

ಒಡತಿಯು ತಂದಳು ಹಾಲನ್ನು
ಮುದದಲಿ ಕರೆದಳು ಬೆಕ್ಕನ್ನು
ಕಣ್ಮುಚ್ಚಿ ಕುಡಿಯಿತು ಹಾಲನ್ನು
ನಿದ್ರೆಗೆ ಅಪ್ಪಿತು ಧರೆಯನ್ನು

ಮರಿಇಲಿ ಆಗಲೆ ಗಂಟೆಯನು
ಬಿಗಿಯಿತು ಬೆಕ್ಕಿನ ಕೊರಳನ್ನು
ಮರಿಇಲಿ ಸಾಹಸ ಕೊಂಡಾಡಿದವು
ಸಂತಸದೀ ಕುಣಿಕುಣಿದಾಡಿದವು.
*****

Tagged:

Leave a Reply

Your email address will not be published. Required fields are marked *

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...