ಇರುವೆ

ಇರುವೆ ಇರುವೆ ಎಲ್ಲಿರುವೆ?
ನೆಲದಲಿ ಹುತ್ತದಲಿ ನಾನಿರುವೆ

ಸಣ್ಣನೆ ಕಪ್ಪನೆ ಇರುವೆ
ನಿನಗೆ ಆಪರಿ ವೇಗವೇ?
ಮೈಯಲಿ ಬುಳು ಬುಳು ಓಡುವೆ
ಕಚ್ಚದೆ ಕರುಣೆಯ ತೋರುವೆ

ರಾಜ ರಾಣಿ ಜೊತೆಗೆ ಸವಾರಿ
ಅನ್ನವ ಅರಸುತ ಹೊರಡುವಿರಿ
ಶಿಸ್ತಿನ ಶಿಪಾಯಿ ತರಹ ನಿಮ್ ಪರಿ
ನೋಡಿ ಅರಗಾಗುವವು ವೈರಿ ಪಡೆ

ನಿಮ್ಮಯ ತೂಕಕ್ಕಿಂತ ಹೆಚ್ಚಿನ ಭಾರ
ಹೊತ್ತು ನೀವು ಎಲ್ಲಿಗೋ ನಡೆವಿರಿ
ನಿಮ್ಮಯ ಬದುಕು ಮೂರು ತಿಂಗಳು
ಆರು ತಿಂಗಳಿನ ಅನ್ನದ ತಿರುಳು?

ನಿಮ್ಮಯ ಬುದ್ಧಿ ನಮಗಿದ್ದಿದ್ದರೆ
ಫೇಲು ಮಾತು ನಮ್ಮಲ್ಲಿರಲಿಲ್ಲ
ಸತತೋದ್ಯೋಗ ನಮದಾಗಿದ್ದರೆ
ನಮ್ಮ ದೇಶ ಹೀಗಿರುತ್ತಿರಲಿಲ್ಲ

ಕೆಂಪು ಕೆಂಪನೇ ಕಂಜಿರುವ
ತಲೆ ತಗ್ಗಿಸಿಯೇ ನೀ ನಡೆವೆ
ಶಿಸ್ತು ಸಂಯಮ ನಿಮಗಿಲ್ಲವೇ?
ಸುಮ್ಮನೇ ಕಚ್ಚಿ ನೋಯಿಸುವೆ

ಕಪ್ಪನೆಯ ಗೊದ್ದ, ಕಟ್ಟಿರುವೆ
ಎರೆಮಣ್ಣಲ್ಲವೇ ನಿನ್ನಯ ಠಾವು?
ದಪ್ಪನೆ ಕಣ್ಣು ಉದ್ದ ಮೀಸೆಯ
ಮುಟ್ಟಲು ಖಂಡಿತ ಹೆದರುವೆನು

ಬಿದ್ದರೆ ಸಾಕು ಬೆಲ್ಲದ ವಾಸನೆ
ನುಗ್ಗಿ ಬರುವಿರಿ ಆನೆಯೋಪಾದಿ
ಮೀಸ ಕುಣಿಸುತ ಮುಕುರುವಿರಿ
ಮಕರಂದವ ಹೀರಿ ಸಾಯುವಿರಿ

ಮುಟ್ಟಿದರೆ ಮುನಿಗಳೇ ನೀವು
ಕಚಕ್ಕನೆ ಕಚ್ಚಲು ಭಾರಿ ನೋವು
ಬೇರ್ಪಟ್ಟರೂ ರುಂಡ ಮುಂಡಗಳು
ನಂದವು ನಿಮ್ಮಯ ಸೇಡಿನ ಕಿಡಿಗಳು

ಹಾರುವ ಹೋರುವ ಪುಕ್ಕದ ಇರುವೆ
ಗಿಡಗಳಲಲ್ಲವೇ ನಿಮ್ಮಯ ಇರವು
ಹಾರುತಲೇ ಮೇಲೆ ಕೆಳಗೆ ಬೀಳುವೆ
ಆ ಕೋಪಕೆ ನಮ್ಮನು ಕಚ್ಚಿಬಿಡುವೆ

ಸತ್ತ ವಾಸನೆ ಬಡಿದರೆ ನಿಮಗೆ
ಜಾತ್ರೆ-ಸಂತೆಗಳ ನೆನಪಾಗುವುದು
ನಿಮ್ಮಯ ಆ ಗುಣ ನಮಗೇಕಿಲ್ಲವೋ
ಇದ್ದರೆ ದಾರಿದ್ರ್ಯ ಇರಲಿಲ್ಲವೇನೋ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...