Home / ಬಾಲ ಚಿಲುಮೆ / ಕವಿತೆ / ಪರಿವರ್ತನೆ

ಪರಿವರ್ತನೆ

ಸಿದ್ಧನ ಅಪ್ಪ
ಅವನು ಬೆಪ್ಪ
ಹಗಲಿಡೀ ಮೈಮುರಿ ದುಡಿಯುವನು
ಹಗಲು ಮಲಗಲು
ಚಂದ್ರನು ನಗಲು
ಗಪ್ಪನೆ ಗಡಂಗಿಗೆ ಹೊರಡುವನು

ಕಂಠ ಪೂರ್ತಿ
ಕುಡಿದು ಭರ್ತಿ
ಓಲಾಡುತ ಮನೆಗೆ ಬರುವನು
ಹೆಂಡತಿ ಮಕ್ಕಳ
ಬಡಿದು ಗೋಳು
ಹೊಯ್ದುಕೊಳುತ ಕೂಗಾಡುವನು

ಗಲಾಟೆ ಗದ್ದಲ
ರಸ್ತೆ ಉದ್ದಗಲ
ಕೇಳುವ ಜನರಿಗೆ ಮೋಜಾಗುವುದು
ಅಕ್ಕ ಪಕ್ಕದ
ಮನ ಮಠದ
ಜನರಿಗದು ಕಿರಿ ಕಿರಿ ಮಾಡುವುದು

ಸಿದ್ಧನು ಶಾಲೆಗೆ
ಹೋಗಲು ಅಲ್ಲಿಗೆ
ಮಕ್ಕಳು ಅವಪ್ಪನ ಛೇಡಿಸಿ ನಗುವರು
ಅವಮಾನಿತ ಸಿದ್ಧ
ಮನೆಗೆ ಬಂದ
ನೊಂದು ತಾಯಿಗೆ ಕೊಡುವನು ದೂರು

ಅಮ್ಮಾ ಅಪ್ಪನು
ಏಕ ಕುಡಿವನು?
ಅದರಿಂದ ಆರೋಗ್ಯ ಕೆಡುವದಂತಲ್ಲ
ಕರುಳಲಿ ತೂತು
ಕಿಡ್ನಿಯು ಕೊಳೆತು
ಬಳಲಿ ಬಳಲಿ ಬೇಗ ಸಾಯುವರಂತಲ್ಲ

ಕುಡಿತದ ಚಟವ
ಬಿಡಿಸೋ ಭಾರವು
ನಿನ್ನದು ಅಪ್ಪನ ಪತ್ನಿಯೇ ನೀ ಕೇಳು
ಅಪ್ಪನು ಸತ್ತರೆ
ದಿಕ್ಕಾರು ಆಸರೆ
ಸನ್ಮಾರ್ಗದಿ ನಡೆಯಲು ನೀ ಹೇಳು

ಸಿದ್ಧನು ಹೇಳಿದ
ವಿಷಯ ಕೇಳಿದ
ಅವನಪ್ಪನು ಕುಡಿತವನು ಬಿಟ್ಟುಕೊಟ್ಟ
ದುಡಿದ ಹಣವನು
ಬ್ಯಾಂಕಲಿ ಅವನು
ಕೂಡಿಡುತ್ತಲೇ ಸಿದ್ಧನನು ಓದಿಸಿಬಿಟ್ಟ.

ಬೆಳೆದನು ಸಿದ್ಧ
ಹಣವನ್ನು ಗಳಿಸಿದ
ಮುಪ್ಪಿನ ಮಾತಾ ಪಿತರನು ಸಾಕಲು
ಆ ದಿನ ನೆನಪು
ಮಗನ ಕದಪು
ನೇವರಿಸುತ ಸೂಸುವ ಹರ್ಷದ ಹೊನಲು
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...