ಹೂವು

ಕರೆಯದಿರು ಕೈ ಮಾಡಿ ನೆನೆಸದಿರು ಕನಸಿನಲಿ
ನಿನ್ನ ದೃಷ್ಟಿಯು ಇತ್ತ ಸುಳಿಯದಿರಲಿ
ನನ್ನ ಒಲುಮೆಯ ನೀನು ಬಯಸದಿರು ಎಂದಿಗೂ
ಚಿತ್ತವಳಿಪನು ನನಗೆ ತಳೆಯದಿರಲಿ

ನಾನೊಂದು ನಿಷ್ಪಾಪಿ ಹೂವು ಸುಖದಿಂದಿರುವೆ
ದೃಷ್ಟಿ ತಾಕಿದರಾನು ಬಾಡಿಯೇನು
ಮುಟ್ಟಲೇತಕೆ ಮುಂದೆ? ಬಾಳಲಾರೆನು ತುಂಬಿ
ಸೃಷ್ಟಿಗೀತೆಯನೆಂತು ಹಾಡಿಯೇನು

ಜನುಮವಿತ್ತನ ಪಾದ ಸೇರಲೆಂದೆಂಬಾಸೆ
ನನ್ನ ಪಾವಿತ್ರ್ಯವನು ಉಳಿಸು ಗುಂಗಿ
ಹುಡಿಯಲ್ಲಿ ಹೊರಳುವೊಲು ಮಾಡದಿರು ಕಾಡದಿರು
ಒಂದೆ ಅರೆನಿಮಿಷವನು ಇಲ್ಲಿ ತಂಗಿ

ನನ್ನ ಸೌಂದರ್ಯವದು ಈಶನಿಗೆ ಮೀಸಲಿದೆ
ನನ್ನ ಸೌರಭ್ಯವೂ ಅವನಿಗಾಗಿ
ಸುಮ್ಮನೇತಕೆ ಬಯಕೆ? ಜಾರಿಸದಿರೆನ್ನನ್ನು
ಒಂದೇ ನಿಮಿಷದ ಅಧಮ ಸೌಖ್ಯಕಾಗಿ

ಮೊರೆಯದಿರು ಮನಸಿನಲಿ ಮರೆಯದಿರು ಮೆಲು ನುಡಿಯ
ಇರಲಿ ತುಂಬಿಯೆ ನಮ್ಮ ಸೋದರತನ
ಚ್ಯುತಿ ಬರದೆ ಸತ್ಯದಾ ಸಾಧನೆಯು ನಡೆದಿರಲಿ
ತುಂಬಿರಲಿ ಸಂತಸದಿ ನಮ್ಮೀ ಮನ

ದಾರಿತಪ್ಪುವ ಚಿಂತೆ ನನಗಿಲ್ಲ ಭಾರವನು
ಗುರುದೇವ ಹೊತ್ತಿರಲು ಓ ಸೋದರ
ಬೀಳಲಿರೆ ಹಿಡಿಯುವನು ಕೈಯಿಂದಲೆತ್ತುವನು
ಏತಕ್ಕೆ ಸಾಕಿನ್ನು ಈ ಕಾತರ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೧೮
Next post ರಾವಣಾಂತರಂಗ – ೨೦

ಸಣ್ಣ ಕತೆ

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…