Home / ಕವನ / ಕವಿತೆ / ಹೂವು

ಹೂವು

ಕರೆಯದಿರು ಕೈ ಮಾಡಿ ನೆನೆಸದಿರು ಕನಸಿನಲಿ
ನಿನ್ನ ದೃಷ್ಟಿಯು ಇತ್ತ ಸುಳಿಯದಿರಲಿ
ನನ್ನ ಒಲುಮೆಯ ನೀನು ಬಯಸದಿರು ಎಂದಿಗೂ
ಚಿತ್ತವಳಿಪನು ನನಗೆ ತಳೆಯದಿರಲಿ

ನಾನೊಂದು ನಿಷ್ಪಾಪಿ ಹೂವು ಸುಖದಿಂದಿರುವೆ
ದೃಷ್ಟಿ ತಾಕಿದರಾನು ಬಾಡಿಯೇನು
ಮುಟ್ಟಲೇತಕೆ ಮುಂದೆ? ಬಾಳಲಾರೆನು ತುಂಬಿ
ಸೃಷ್ಟಿಗೀತೆಯನೆಂತು ಹಾಡಿಯೇನು

ಜನುಮವಿತ್ತನ ಪಾದ ಸೇರಲೆಂದೆಂಬಾಸೆ
ನನ್ನ ಪಾವಿತ್ರ್ಯವನು ಉಳಿಸು ಗುಂಗಿ
ಹುಡಿಯಲ್ಲಿ ಹೊರಳುವೊಲು ಮಾಡದಿರು ಕಾಡದಿರು
ಒಂದೆ ಅರೆನಿಮಿಷವನು ಇಲ್ಲಿ ತಂಗಿ

ನನ್ನ ಸೌಂದರ್ಯವದು ಈಶನಿಗೆ ಮೀಸಲಿದೆ
ನನ್ನ ಸೌರಭ್ಯವೂ ಅವನಿಗಾಗಿ
ಸುಮ್ಮನೇತಕೆ ಬಯಕೆ? ಜಾರಿಸದಿರೆನ್ನನ್ನು
ಒಂದೇ ನಿಮಿಷದ ಅಧಮ ಸೌಖ್ಯಕಾಗಿ

ಮೊರೆಯದಿರು ಮನಸಿನಲಿ ಮರೆಯದಿರು ಮೆಲು ನುಡಿಯ
ಇರಲಿ ತುಂಬಿಯೆ ನಮ್ಮ ಸೋದರತನ
ಚ್ಯುತಿ ಬರದೆ ಸತ್ಯದಾ ಸಾಧನೆಯು ನಡೆದಿರಲಿ
ತುಂಬಿರಲಿ ಸಂತಸದಿ ನಮ್ಮೀ ಮನ

ದಾರಿತಪ್ಪುವ ಚಿಂತೆ ನನಗಿಲ್ಲ ಭಾರವನು
ಗುರುದೇವ ಹೊತ್ತಿರಲು ಓ ಸೋದರ
ಬೀಳಲಿರೆ ಹಿಡಿಯುವನು ಕೈಯಿಂದಲೆತ್ತುವನು
ಏತಕ್ಕೆ ಸಾಕಿನ್ನು ಈ ಕಾತರ
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್