Home / ಕವನ / ಕವಿತೆ / ಬದರಿಕಾಶ್ರಮದಲ್ಲಿ ಒಂದು ಬೆಳಗು

ಬದರಿಕಾಶ್ರಮದಲ್ಲಿ ಒಂದು ಬೆಳಗು

ಕತ್ತಲೆಯ ಕಿಡಿಗೇಡಿತನ ಕಂಡು ಋಭು ನೊಂದು
ದೇವಗಾನದಿ ಬೆಳಕ ತಂದನೇನು?
ಬೆಳಕೆ ದಾರಿಯತೋರು ಎಂಬ ಒಳದನಿ ಕೇಳಿ
ಸೂರ್ಯನಾರಾಯಣನು ಬಂದನೇನು ?

ತಾಮಸದ ಪಾಚಿಯನು ಎತ್ತಿ ಹಾಕಿದ ಹಾಗೆ
ಹಿಮಕೆ ಮುತ್ತಿದ ತಿಮಿರರಾಸಿಯನ್ನು
ಮಾಯಮಾಡಿದ ಅಬ್ಬ! ಆದಿತ್ಯನವಗಾವು-
ದೀಡಹುದು ! ಕೇಳುವನೆ ಘನತಮವನು?

ಭಕ್ತಿ ಹಣ್ಣಾದಂತೆ ಬೆಳಕು ಸೋರಿತು ಬುವಿಗೆ
ಹಿಮಕೆ ಎರೆದಿತು ಬೆಳೆಕುಜೇನು ತುಂಬ
ಜೀವಿಗಳನೆಬ್ಬಿಸಿತು “ಏಳಿ ಕಳೆದಿದೆ ಕಾಳು
ಬನ್ನಿ ತುಂಬಿಹುದೀಗ ಅಮೃತಕುಂಭ

ನಾರಾಯಣಾದ್ರಿಯಲಿ ಆತ್ಮಪ್ರಭೆಯನು ಕಂಡು
ಪೂರ್ವನರಗಿರಿ ಮಿಂಚಿ ಬೆಳಗುತಿಹುದು
ತನ್ನಲ್ಲಿ ಆ ಬಿಂಬದೈಸಿರಿಯನುಂಡುಂಡು
ಸಾರೂಪ್ಯ ಸೌಖ್ಯದಲಿ ತೊಳಗುತಿಹುದು

ಓ! ದಿವ್ಯ ದೃಷ್ಟಿಯನ್ನು ತೆರೆದಾಗ ಪುಣ್ಯವೋ
ಪಾಪವೋ ಏನೆಲ್ಲ ಮಾಯವಾಗಿ
ಏಕಮೇವಂ ಆದ ದಿವ್ಯ ಪುರುಷನ ಇದಿರು
ಜೀವ ನಿಲುವದು ಬಾಗಿ ಭಕ್ತನಾಗಿ

ಪ್ರಕೃತಿಗೀಯಲು ನೆರವ ಕಾರುಣ್ಯದಲಿ ಪುರುಷ
ಅವಳ ಬಸಿರಲಿ ಬಹುದು ದಿವ್ಯ ಸೃಷ್ಟಿ
ಮಾಯೆಯಾವುದು ಇಲ್ಲಿ ಭಗವಂತನಾಟದಲಿ?
ನೀಡಿರಲು ನಮಗಾತ ಸತ್ಯದೃಷ್ಟಿ

ಬದರಿಕಾಶ್ರಮದಲ್ಲಿ ನೋಡಿದೆನು ಬೆಳಗಿನಲಿ
ಹಿಮಗಿರಿಯು ಬುದ್ಧನೊಲು ನಿಂತಿದ್ದಿತು
ನಿಸ್ಸೀಮವಾಗಿರುವ ಬಾನು ಬಯಲುಗಳಲ್ಲಿ
ಬಗೆವಕ್ಕಿ ಪಕ್ಕಗಳ ಕೆದರಿದ್ದಿತು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...