ಕನ್ನಡದ ಸಿರಿದೇವಿ ಅನುಭಾವಿ ಮಾದೇವಿ
ಕನ್ನಡದ ದುಸ್ಥಿತಿಯ ಕಂಡು ಕಳವಳಗೊಂಡು
ಮೈಮರೆದು ಮಲಗಿರುವ ಮಹಿಳೆಯರ, ವಿಸ್ಮರಣ-
ಸಾಗರದಿ ಮುಳುಮುಳುಗಿ ತೊಳಲುತಿಹ ಪುರುಷರನ್ನು
ಎಚ್ಚರಿಸಿ ಮತ್ತೆ ಕನ್ನಡ ತಾಯ ಐಸಿರಿಯ
ಪವಣಿಸಲು ಹೊಂದಿಸಲು ತಲೆಯೆತ್ತಿ ಮೆರೆಯಿಸಲು
ಕೈಲಾಸವನು ತೊರೆದು ಶಿವಲಿಂಗದೈಕ್ಯವನು
ಮನವಾರೆ ಬಿಟ್ಟಳಿದು ಬಂದಳೆನ್ನುವ ರೀತಿ
ಶಿವಸಿದ್ಧರಾಮನೂ ತನ್ನ ತಪದೆರವಿತ್
ಬಸವಣ್ಣ ತನ್ನ ಘನಮನದ ಭಕುತಿಯನಿತ್ತ
ಪಾರ್ವತಿಯು ಕಣ್ದೆರೆದು ಬಾಯ್ತುಂಬ ಹರಸಿದಳು
ಶಿವನಿತ್ತ ತನ್ನ ಮಹ ವರದ ಹಸ್ತವನಾಗ
ಎಂಬ ರೀತಿಯೊಳೀಗ ಕನ್ನಡದ ನಾಡಿನಲಿ
ಕೀರ್ತಿಯಲಿ ಜಯದೇವಿ ಮಾತಾಯಿ ಎಸೆಯುವಳು
*****
Related Post
ಸಣ್ಣ ಕತೆ
-
ಗ್ರಹಕಥಾ
[ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…
-
ಯಿದು ನಿಜದಿ ಕತೀ…
ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ... ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ, ವುಗಾದಿ… Read more…
-
ನಿಂಗನ ನಂಬಿಗೆ
ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…
-
ಪತ್ರ ಪ್ರೇಮ
ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…
-
ಸಾವಿಗೊಂದು ಸ್ಮಾರಕ
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…