ಭಾಗೀರಥಿ

ಹೆಣ್ಣು ಬಾಳ್ ಕಣ್ಣೀರು ಎಂದು ಹೇಳುವರೆಲ್ಲ
ಆದರೇಂ ಕಣ್ಣೀರನೊರೆಸುವವರಾರಿಲ್ಲ
ಮುಳ್ಳು ಬೇಲಿಯೊಳೆಲ್ಲ ಹೂಮಾಲೆ ಎಳೆದಂತೆ
ಬಾಳ ಸಾಗಿಸುವವರ ಕಂಡರೂ ಏನಂತೆ?
ಮರುಕವೊಂದಿನಿತಿಲ್ಲ! ಮಾತು ಗಾಳಿಯಲಾಯ್ತು
ಬಡಹಣ್ಗೆ ಈ ಬಯಲು ನೈರಾಶ್ಯಗತಿಯಾಯ್ತು
ಹುಣ್ಗೆ ಒರೆಎಳೆದಂತೆ ಅಪಹಾಸ್ಯ ಹಿರಿದಾಯ್ತು
ಪೂಜ್ಯನಾರಿಗೆ ನರಕ ಬಾಳನ್ನು ಕೊಟ್ಟಾಯ್ತು

ಇದಕಂಡು ಕನಿಕರದಿ, ಸಗರ ಸಂತತಿಯನ್ನು
ಎತ್ತಒಂದಾ ಧೀರೆ ಗಂಗೆಯೊಲು ಕನ್ನಡದಿ
ಬಂದ ಭಾಗೀರಥಿಯೆ ಬಾಳಿನಲ್ಲಿ ಮುನ್ನಡೆದೆ
ತೆಗಳುವವರನು ಕಂಡು ಕುಗ್ಗದೆಯೆ ನಿನ್ನನ್ನು,
ಅಪವಾದ ಅಪಮಾನಗಳನೆಲ್ಲಸಹಿಸುತ್ತ!
ಗೆಲುವಿರಲಿ ಶ್ರೀಮಾತೆ ನಿಂತಿಹಳು ಹರಿಸುತ್ತ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೨೧
Next post ರಂಗಣ್ಣನ ಕನಸಿನ ದಿನಗಳು – ೧೬

ಸಣ್ಣ ಕತೆ

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

cheap jordans|wholesale air max|wholesale jordans|wholesale jewelry|wholesale jerseys