ಭಾಗೀರಥಿ

ಹೆಣ್ಣು ಬಾಳ್ ಕಣ್ಣೀರು ಎಂದು ಹೇಳುವರೆಲ್ಲ
ಆದರೇಂ ಕಣ್ಣೀರನೊರೆಸುವವರಾರಿಲ್ಲ
ಮುಳ್ಳು ಬೇಲಿಯೊಳೆಲ್ಲ ಹೂಮಾಲೆ ಎಳೆದಂತೆ
ಬಾಳ ಸಾಗಿಸುವವರ ಕಂಡರೂ ಏನಂತೆ?
ಮರುಕವೊಂದಿನಿತಿಲ್ಲ! ಮಾತು ಗಾಳಿಯಲಾಯ್ತು
ಬಡಹಣ್ಗೆ ಈ ಬಯಲು ನೈರಾಶ್ಯಗತಿಯಾಯ್ತು
ಹುಣ್ಗೆ ಒರೆಎಳೆದಂತೆ ಅಪಹಾಸ್ಯ ಹಿರಿದಾಯ್ತು
ಪೂಜ್ಯನಾರಿಗೆ ನರಕ ಬಾಳನ್ನು ಕೊಟ್ಟಾಯ್ತು

ಇದಕಂಡು ಕನಿಕರದಿ, ಸಗರ ಸಂತತಿಯನ್ನು
ಎತ್ತಒಂದಾ ಧೀರೆ ಗಂಗೆಯೊಲು ಕನ್ನಡದಿ
ಬಂದ ಭಾಗೀರಥಿಯೆ ಬಾಳಿನಲ್ಲಿ ಮುನ್ನಡೆದೆ
ತೆಗಳುವವರನು ಕಂಡು ಕುಗ್ಗದೆಯೆ ನಿನ್ನನ್ನು,
ಅಪವಾದ ಅಪಮಾನಗಳನೆಲ್ಲಸಹಿಸುತ್ತ!
ಗೆಲುವಿರಲಿ ಶ್ರೀಮಾತೆ ನಿಂತಿಹಳು ಹರಿಸುತ್ತ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೨೧
Next post ರಂಗಣ್ಣನ ಕನಸಿನ ದಿನಗಳು – ೧೬

ಸಣ್ಣ ಕತೆ

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…