Home / ಕವನ / ಕವಿತೆ / ಭಾರತೀಯ ಏಡಿಗಳು

ಭಾರತೀಯ ಏಡಿಗಳು

ದಿನಾ ಪತ್ರಿಕೆ ಬಿಡಿಸಿದರೆ ಸಾಕು
ನೆನಪಿಗೆ ಬರುವುದು ಎಂದೋ ಕೇಳಿದ್ದ ಏಡಿಗಳ ಕಥೆ;
ಮನತುಂಬುವುದು ಆ ಕಥೆಯೊಳಗಿನ ವ್ಯಥೆ.
ಪರದೇಶಗಳಿಗೆ ಕಳುಹಿಸಲೆಂದು ಹಡಗು ತುಂಬಿದ್ದರು
ಮೀನು ತುಂಬಿದ್ದ ಬುಟ್ಟಿಗಳ.
ದೀರ್ಘ ಪ್ರಯಾಣ, ತೆರೆಗಳ ನಿರಂತರ ಹೊಡೆತ
ಕುಲುಕಾಟದಲಿ ಸಡಿಲಗೊಂಡಿತೊಂದು ಬುಟ್ಟಿಯ ಮುಚ್ಚಳ.
ಕಟ್ಟಲೆಂದು ತೆರೆದನೊಬ್ಬ ಬುಟ್ಟಿಯ
ಕಟ್ಟುವುದ ಬಿಟ್ಟು ದಂಗಾಗಿ ಕುಳಿತನವ
ಏಡಿಗಳ ಕಾಲೆಳೆಯುವ ಆಟವ ನೋಡುತ.
ಮೇಲೇರುತ್ತಿದ್ದ ಏಡಿಗಳ ಕಾಲು ಹಿಡಿದು
ಕೆಳಗಳೆಯುತ್ತಿದ್ದವು ಕೆಳಗಿದ್ದ ಏಡಿಗಳು!
ಪದೇ ಪದೇ ಕೆಳಗುರುಳುತ್ತಿದ್ದವು ಮೇಲೇರುತ್ತಿದ್ದ ಏಡಿಗಳು!
ಈ ಎಳೆದಾಟದ ಆಟವ ನೋಡುತ ಮೈಮರೆತನವ ವಿಸ್ಮಯದಿಂದ,
ಮೇಲೇರ ಪ್ರಯತ್ನಿಸಿಯೂ ಮೇಲೆರಲಾಗದ
ಏಡಿಗಳ ಸ್ಥಿತಿಗೆ ಮಮ್ಮಲ ಮರುಗುತ.
ಇದ ನೋಡಿ ಅಲ್ಲಿದ್ದ ವಿದೇಶಿಯನೊಬ್ಬ
ಉದ್ಘರಿಸಿದ “ಓ ಇಂಡಿಯನ್ ಕ್ರ್ಯಾಬ್ಸ್” “ಅಪ್ಪಟ ಭಾರತೀಯ ಏಡಿಗಳು”!
ಈ ಬುಟ್ಟಿಗೆ ಮುಚ್ಚಳದಗತ್ಯವಿಲ್ಲ.
ಇವು ಹೊರಗೆ ಬರುವುದಿಲ್ಲ ಏಡಿಗೆ ಏಡಿಯೇ ಸರ್ಪಗಾವಲು!

ನಾವೇನು ಬೇರೆಯೇ?
ಮೇಲೇರುತ್ತಿರುವವರ ಕೆಳಕೆ ಜಗ್ಗುವುದು ನಮ್ಮ ನಿರಂತರ ಆಟ.
ಈ ಆಟದಲಿ ಮೇಲೇರಿದವರು ಕೆಳಕ್ಕುರುಳುವುದು
ಒದ್ದಾಡುವುದು, ನಗೆಗೀಡಾಗುವುದು ನಮ್ಮ ಜನ್ಮಕ್ಕಂಟಿದ ಶಾಪ.
ಮೇಲೇರುವವರ ಕ೦ಡರೆ ನಮಗಾಗದು
ಯಾರನ್ನೂ ಮೇಲೇರ ಬಿಡೆವು, ಕೆಳಗುರುಳಿಸಿಯೇ ತೀರುವೆವು
ಕೊನೆಗೊಮ್ಮೆ ಎಲ್ಲರೂ ನೆಲಸಮವಾಗುವೆವು
ಮತ್ತೆ ಮೇಲೇರಲೇ ಆಗದಂತೆ!
ಆಗ ಬರುವುದು ಇನ್ನೊಂದು ಗುಂಪು ಇದೇ ಆಟ ಆಡುತ.
ಪತ್ರಿಕೆ ತುಂಬಾ ಇದೇ ಸುದ್ದಿ
ಎಲ್ಲ ಕಡೆ ಏಡಿಗಳಂತವರದ್ದ ಆಟ.
ಕುರ್ಚಿಗಾಗಿ, ಹಣಕ್ಕಾಗಿ, ಹೆಣ್ಣಿಗಾಗಿ ಕಾದಾಟ, ಎಳೆದಾಟ, ಜಗ್ಗಾಟ.
ಅವರ ಕಾಲನ್ನಿವರು ಇವರು ಕಾಲನ್ನವರು
ಎಳೆದು ಉರುಳಿಸುತ್ತಿರೋ ಕಥೆಗಳು
ಈ ಎಳೆದಾಟದಲಿ ಕಂಗೆಟ್ಟಿರುವ ಪ್ರಜೆಗಳ
ಪರಿಹಾರ ಕಾಣದ ವ್ಯಥೆಗಳು!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...