Home / ಕವನ / ಕವಿತೆ / ಜೀವನ ಚಿತ್ತಾರ

ಜೀವನ ಚಿತ್ತಾರ

ನಾನು ಚಿತ್ರಿಕನಲ್ಲ
ಆದರೂ ಬಾಳಿನೊಂದು ಹಾಳೆಯಲಿ
ಚಿತ್ತಾರ ಬರೆಯ ಬಯಸಿದೆ.
ನನ್ನ ಬೆರಳುಗಳಲ್ಲಿ ರೇಖೆಗಳನ್ನೆಳೆಯುವ ಕಸುವಿಲ್ಲ
ಕುಸುರಿ ಕೆಲಸದ ಚತುರತೆಯಿಲ್
ಬಣ್ಣಗಳ ಬಾಂಡಲಿಯೂ ನನ್ನಲ್ಲಿಲ್ಲ.
ಆದರೂ ಆಸೆ –
ಬಾಳ ಕೊನೆಯ ಸಂಪುಟದ ಒಂದು ಹಾಳೆಯಲಿ
ಜೀವನ ಚಿತ್ತಾರ ಬರೆಯುವಾಸೆ.
ಯಾವ ಚಿತ್ತಾರ ಬರೆಯಲಿ?

ಪ್ರೀತಿ, ಪ್ರೇಮ, ಪ್ರಣಯ?
ಇಲ್ಲ, ಎಲ್ಲರೂ ಬರೆಯುತ್ತಾರೆ ಅದನ್ನು?!
ಆದರೆ ಯಾರಿಗೂ ಅರ್ಥವಾಗದ
ಬಣ್ಣ ಬಣ್ಣದ ಗೋಜಲದು.

ಸಾವು, ನೋವು, ಆಗಲಿಕೆ, ದುಃಖ?
ಇಲ್ಲ. ಇದು ಎಲ್ಲರ ಬಾಳಲ್ಲೂ
ಬರೆಯಲಾಗುವ ಕರಿಬಣ್ಣದ ಚಿತ್ರಗಳು
ಅದರಲ್ಲೇನಿದೆ ವಿಶೇಷ?

ಸತ್ಯ, ನ್ಯಾಯ, ನೀತಿ, ಧರ್ಮ?
ಇಲ್ಲ. ಇದಕ್ಕೆಲ್ಲ ಈಗ ಅರ್ಥವೇ ಇಲ್ಲ.
ಕ್ರೌರ್ಯ, ಕೊಲೆ, ಸುಲಿಗೆ, ಅತ್ಯಾಚಾರ?
ಇಲ್ಲ. ಈಗ ಎಲ್ಲೆಲ್ಲೂ ಅದೇ ಚಿತ್ರ.

ಮತ್ತಾವ ಚಿತ್ತಾರ ಬರೆಯಲಿ?
ಭವಿಷ್ಯದ ಚಿತ್ರ ಅದಾಗಬೇಕು
ಜೀವನ ಪ್ರೀತಿ ಅಲ್ಲಿರಬೇಕು
ರೇಖೆಗಳ ಸಿಕ್ಕುಗಳಿಲ್ಲದ, ಬಣ್ಣಗಳ ಗೊಂದಲಗಳಿರದ
ನನ್ನ ಮಕ್ಕಳು ಮೊಮ್ಮಕ್ಕಳು ಮರಿಮಕ್ಕಳು
ನೋಡಿ ಅರ್ಥಮಾಡಿಕೊಳ್ಳಲಾಗುವ
ಯಾರಕಾಲಕ್ಕೂ ಮುಂದುವರಿಸಲಾಗುವ
ಚಿತ್ತಾರ ಅದಾಗಬೇಕು.

ವಿಶ್ವ ಪ್ರೇಮದ ಚಿತ್ರ,
ಪರಿಸರಮಾಲಿನ್ಯವಿರದ ಚಿತ್ರ
ತಂಪು ಗಾಳಿಯ ಸ್ಪರ್ಶಕೆ
ಮರಗಿಡಗಳು ತೊನೆದಾಡುವ ಚಿತ್ರ
ಹೂಗಳು ನಲಿದಾಡುವ ಚಿತ್ರ
ಜಾತಿ ಮತ ಭೇದ ಭಾವಗಳಿಲ್ಲದೆ
ಎಲ್ಲರೊಂದಾಗಿ ನಲಿಯುವ ಚಿತ್ರ
ಮಕ್ಕಳ ಮುಖ ತುಂಬ ನಗುಚೆಲ್ಲುವ ಚಿತ್ರ
ಅವರಿಗಿಷ್ಟವಾದ ಗೆರೆ ಎಳೆದು ಬಣ್ಣ ತುಂಬಿದರೂ
ಹಾಳಾಗದ ಚಿತ್ರ ಅದಾಗಬೇಕು.

ನಾ ಬರೆವ ಚಿತ್ರ ಜೀವಂತಿಕೆಯ ಪುಟಿಸುವ
ಜೀವನದ ಮುಂದುವರಿಕೆಯ ಚಿತ್ರವಾಗಬೇಕು,
ಮನಕ್ಕೆ ತಂಪು ನೀಡುವ ಚಿತ್ತಾರವಾಗಬೇಕು
ಎಂದು ಬಯಸುತ –
ಯಾವ ಮುಖವಾಡಗಳಿಲ್ಲದೆ ನಾನೇ ನಾನಾಗಿ ನಿಂತು
ನನ್ನ ಬಯಕೆಯ ಚಿತ್ತಾರ ಬರೆಯಲು
ರೇಖೆಗಳ ಬಣ್ಣಗಳ ಹುಡುಕತೊಡಗಿದೆ.
ರೇಖೆಗಳು ಬಣ್ಣಗಳು ಕೈಗೆ ಸಿಗಲಿಲ್ಲ;
ಬರೆಯ ಬೇಕೆಂದು ಬಯಸಿ ರೂಪಿಸಿದ ಚಿತ್ರ
ಹಾಳೆಯಲಿ ಮೂಡಿ ಬರಲೇ ಇಲ್ಲ.
ಹಾಳೆ ಖಾಲಿಯಾಗಿಯೇ ಉಳಿಯಿತು!
ಇನ್ನೊಬ್ಬ ಚಿತ್ರಕನ ಕಾಯುತ್ತಾ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...