Home / ಕವನ / ಕವಿತೆ / ಜೀವನ ಚಿತ್ತಾರ

ಜೀವನ ಚಿತ್ತಾರ

ನಾನು ಚಿತ್ರಿಕನಲ್ಲ
ಆದರೂ ಬಾಳಿನೊಂದು ಹಾಳೆಯಲಿ
ಚಿತ್ತಾರ ಬರೆಯ ಬಯಸಿದೆ.
ನನ್ನ ಬೆರಳುಗಳಲ್ಲಿ ರೇಖೆಗಳನ್ನೆಳೆಯುವ ಕಸುವಿಲ್ಲ
ಕುಸುರಿ ಕೆಲಸದ ಚತುರತೆಯಿಲ್
ಬಣ್ಣಗಳ ಬಾಂಡಲಿಯೂ ನನ್ನಲ್ಲಿಲ್ಲ.
ಆದರೂ ಆಸೆ –
ಬಾಳ ಕೊನೆಯ ಸಂಪುಟದ ಒಂದು ಹಾಳೆಯಲಿ
ಜೀವನ ಚಿತ್ತಾರ ಬರೆಯುವಾಸೆ.
ಯಾವ ಚಿತ್ತಾರ ಬರೆಯಲಿ?

ಪ್ರೀತಿ, ಪ್ರೇಮ, ಪ್ರಣಯ?
ಇಲ್ಲ, ಎಲ್ಲರೂ ಬರೆಯುತ್ತಾರೆ ಅದನ್ನು?!
ಆದರೆ ಯಾರಿಗೂ ಅರ್ಥವಾಗದ
ಬಣ್ಣ ಬಣ್ಣದ ಗೋಜಲದು.

ಸಾವು, ನೋವು, ಆಗಲಿಕೆ, ದುಃಖ?
ಇಲ್ಲ. ಇದು ಎಲ್ಲರ ಬಾಳಲ್ಲೂ
ಬರೆಯಲಾಗುವ ಕರಿಬಣ್ಣದ ಚಿತ್ರಗಳು
ಅದರಲ್ಲೇನಿದೆ ವಿಶೇಷ?

ಸತ್ಯ, ನ್ಯಾಯ, ನೀತಿ, ಧರ್ಮ?
ಇಲ್ಲ. ಇದಕ್ಕೆಲ್ಲ ಈಗ ಅರ್ಥವೇ ಇಲ್ಲ.
ಕ್ರೌರ್ಯ, ಕೊಲೆ, ಸುಲಿಗೆ, ಅತ್ಯಾಚಾರ?
ಇಲ್ಲ. ಈಗ ಎಲ್ಲೆಲ್ಲೂ ಅದೇ ಚಿತ್ರ.

ಮತ್ತಾವ ಚಿತ್ತಾರ ಬರೆಯಲಿ?
ಭವಿಷ್ಯದ ಚಿತ್ರ ಅದಾಗಬೇಕು
ಜೀವನ ಪ್ರೀತಿ ಅಲ್ಲಿರಬೇಕು
ರೇಖೆಗಳ ಸಿಕ್ಕುಗಳಿಲ್ಲದ, ಬಣ್ಣಗಳ ಗೊಂದಲಗಳಿರದ
ನನ್ನ ಮಕ್ಕಳು ಮೊಮ್ಮಕ್ಕಳು ಮರಿಮಕ್ಕಳು
ನೋಡಿ ಅರ್ಥಮಾಡಿಕೊಳ್ಳಲಾಗುವ
ಯಾರಕಾಲಕ್ಕೂ ಮುಂದುವರಿಸಲಾಗುವ
ಚಿತ್ತಾರ ಅದಾಗಬೇಕು.

ವಿಶ್ವ ಪ್ರೇಮದ ಚಿತ್ರ,
ಪರಿಸರಮಾಲಿನ್ಯವಿರದ ಚಿತ್ರ
ತಂಪು ಗಾಳಿಯ ಸ್ಪರ್ಶಕೆ
ಮರಗಿಡಗಳು ತೊನೆದಾಡುವ ಚಿತ್ರ
ಹೂಗಳು ನಲಿದಾಡುವ ಚಿತ್ರ
ಜಾತಿ ಮತ ಭೇದ ಭಾವಗಳಿಲ್ಲದೆ
ಎಲ್ಲರೊಂದಾಗಿ ನಲಿಯುವ ಚಿತ್ರ
ಮಕ್ಕಳ ಮುಖ ತುಂಬ ನಗುಚೆಲ್ಲುವ ಚಿತ್ರ
ಅವರಿಗಿಷ್ಟವಾದ ಗೆರೆ ಎಳೆದು ಬಣ್ಣ ತುಂಬಿದರೂ
ಹಾಳಾಗದ ಚಿತ್ರ ಅದಾಗಬೇಕು.

ನಾ ಬರೆವ ಚಿತ್ರ ಜೀವಂತಿಕೆಯ ಪುಟಿಸುವ
ಜೀವನದ ಮುಂದುವರಿಕೆಯ ಚಿತ್ರವಾಗಬೇಕು,
ಮನಕ್ಕೆ ತಂಪು ನೀಡುವ ಚಿತ್ತಾರವಾಗಬೇಕು
ಎಂದು ಬಯಸುತ –
ಯಾವ ಮುಖವಾಡಗಳಿಲ್ಲದೆ ನಾನೇ ನಾನಾಗಿ ನಿಂತು
ನನ್ನ ಬಯಕೆಯ ಚಿತ್ತಾರ ಬರೆಯಲು
ರೇಖೆಗಳ ಬಣ್ಣಗಳ ಹುಡುಕತೊಡಗಿದೆ.
ರೇಖೆಗಳು ಬಣ್ಣಗಳು ಕೈಗೆ ಸಿಗಲಿಲ್ಲ;
ಬರೆಯ ಬೇಕೆಂದು ಬಯಸಿ ರೂಪಿಸಿದ ಚಿತ್ರ
ಹಾಳೆಯಲಿ ಮೂಡಿ ಬರಲೇ ಇಲ್ಲ.
ಹಾಳೆ ಖಾಲಿಯಾಗಿಯೇ ಉಳಿಯಿತು!
ಇನ್ನೊಬ್ಬ ಚಿತ್ರಕನ ಕಾಯುತ್ತಾ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...