ಬಂಜೆ

ಹೊಸಕವಿತೆ
ಬರೆಯ ಹೊರಟಾಗ
ನನಗರಿವಾಯಿತು
ನನ್ನೊಡಲು ಬರಿದಾಗಿದೆಯೆಂದು!
ಹಳೆಯ ಕವಿತೆಗಳೆಲ್ಲ
ಸತ್ತು ಹೋಗಿದ್ದವು
ಹೊಸ ಹುಟ್ಟಿಗೆ
ಜೀವ ಭಾವ ಕಾದುಕೊಂಡಿತ್ತು
ಆದರೆ ಹೊಸ ಕವಿತೆ ಹುಟ್ಟಲಿಲ್ಲ!
ಮನಸ್ಸು ಭಾವದ ಸಂಭೋಗವಾದರೂ
ಹೊಸಹುಟ್ಟು ಉದಯಿಸಲಿಲ್ಲ.
ಹೇಗೆ ಕಳೆಯಲಿ ಈ ಬಂಜೆತನ?
ಮನಸ್ಸು ಖಾಲಿಯಾದ
ಭಾವ ಬರಡಾದ ಈ ಜಡತನ?
ಹೊಸ ಕವಿತೆ ಹುಟ್ಟಬೇಕು
ಸತ್ತು ಹೋದ ಹಳೆಕವಿತೆಗಳಿಗೆ
ಮತ್ತೆ ಜೀವ ತುಂಬಬೇಕು.
ಯಾವ ಭಾವ ವೀರ್ಯ
ಕಳೆಯಬಹುದು ಮನದ
ಈ ಬಂಜರುತನ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿನ್ನ ನಿಷ್ಠೆಯ ನಂಬಿ, ವಂಚಿತಪತಿಯ ಹಾಗೆ
Next post ಕಾಲಕ್ಕೆ ತಕ್ಕ ಹಾಗೆ

ಸಣ್ಣ ಕತೆ

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…