ಹೊಸಕವಿತೆ
ಬರೆಯ ಹೊರಟಾಗ
ನನಗರಿವಾಯಿತು
ನನ್ನೊಡಲು ಬರಿದಾಗಿದೆಯೆಂದು!
ಹಳೆಯ ಕವಿತೆಗಳೆಲ್ಲ
ಸತ್ತು ಹೋಗಿದ್ದವು
ಹೊಸ ಹುಟ್ಟಿಗೆ
ಜೀವ ಭಾವ ಕಾದುಕೊಂಡಿತ್ತು
ಆದರೆ ಹೊಸ ಕವಿತೆ ಹುಟ್ಟಲಿಲ್ಲ!
ಮನಸ್ಸು ಭಾವದ ಸಂಭೋಗವಾದರೂ
ಹೊಸಹುಟ್ಟು ಉದಯಿಸಲಿಲ್ಲ.
ಹೇಗೆ ಕಳೆಯಲಿ ಈ ಬಂಜೆತನ?
ಮನಸ್ಸು ಖಾಲಿಯಾದ
ಭಾವ ಬರಡಾದ ಈ ಜಡತನ?
ಹೊಸ ಕವಿತೆ ಹುಟ್ಟಬೇಕು
ಸತ್ತು ಹೋದ ಹಳೆಕವಿತೆಗಳಿಗೆ
ಮತ್ತೆ ಜೀವ ತುಂಬಬೇಕು.
ಯಾವ ಭಾವ ವೀರ್ಯ
ಕಳೆಯಬಹುದು ಮನದ
ಈ ಬಂಜರುತನ?
*****
Related Post
ಸಣ್ಣ ಕತೆ
-
ಪಾಠ
ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…
-
ದೊಡ್ಡವರು
ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…
-
ನಂಬಿಕೆ
ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…
-
ಮತ್ತೆ ಬಂದ ವಸಂತ
ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…
-
ಅವರು ನಮ್ಮವರಲ್ಲ
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…