Home / ಕವನ / ಕವಿತೆ / ಭಯೋತ್ಪಾದಕರು

ಭಯೋತ್ಪಾದಕರು

ಯಾರಿವರು ಭಯೋತ್ಪಾದಕರು
ಎಲ್ಲಿಂದ ಬಂದವರು?
ಯಾರ ಹೊಟ್ಟೆಯಲ್ಲಿ ಬಿತ್ತಿದ ವಿಷದ ಬೀಜಗಳು?
ಕ್ಲೋನಿಂಗ್‌ನಿಂದ ಹುಟ್ಟಿರ ಬಹುದೇ?
ಇಲ್ಲವಾದರೆ ಹೇಗವರು ಒಂದೇ ರೀತಿ?
ಹೃದಯ ಮನಸ್ಸು ಇಲ್ಲದವರು
ಮತಾಂಧರಾಗಿ ಮಾನವೀಯತೆಯ ಮರೆತವರು.
ಭಯೋತ್ಪಾದಕರು!
ಎಲ್ಲೆಲ್ಲೂ ಭಯೋತ್ಪಾದಕರು
ಬೀದಿ ಬೀದಿಗಳಲ್ಲಿ, ನಗರನಗರಗಳಲ್ಲಿ
ಬಸ್ಸಲ್ಲಿ, ರೈಲಲ್ಲಿ, ವಿಮಾನದಲ್ಲಿ
ಎಲ್ಲೆಂದರಲ್ಲಿ ರಕ್ತಪಿಪಾಸುಗಳು,
ಆತ್ಮಾಹುತಿಗೆ ಸಿದ್ಧರಾದವರು.
ಕಾಶ್ಮೀರದಲ್ಲಿ ಮಾರಣಹೋಮ ನಡೆದಾಗ,
ಮುಂಬಯಿಯಲ್ಲಿ ಸರಣಿ ಬಾಂಬುಗಳು ಸಿಡಿದಾಗ
ನೇಪಾಲದಲ್ಲಿ ವಿಮಾನ ಅಪಹರಣವಾದಾಗ
ತಾಲಿಬಾನ್ ನೆಲದಲ್ಲಿ ಪ್ರಯಾಣಿಕರ ಪಣಕ್ಕೊಡ್ಡಿದಾಗ,
ಜೈಲಲ್ಲಿದ್ದ ಭಯೋತ್ಪಾದಕರ ಬಿಡಬೇಕಾದಾಗ
ಯಾರನ್ನೂ ಧೃತಿಗೆಡಿಸಲಿಲ್ಲ, ಅವರ ಇರವು.
ಜಗತ್ತು ಕಣ್ಣು ಮುಚ್ಚಿತ್ತು.
ಕಂಬಿಯ ಹಿಂದಿದ್ದ ಭಯೋತ್ಪಾದಕರು ಲೀನವಾದರು
ವಿಶ್ವ ಜನಸ್ತೋಮದಲಿ ಜಯಭೇರಿ ಹೊಡೆಯುತ-
ವಿದ್ವಂಸಕ ಕೃತ್ಯಗಳ ಮೆರೆಯಿಸುತ!
ಮುಂದೆಯೊಂದು ದಿನ
ಬೆಳೆಸಿದವರದ್ದೇ ಕೈಕಚ್ಚಿ ಅವರದೆಗೇ ಗುಂಡಿಟ್ಟಾಗ
ಉರುಳಿದವು ಗಗನ ಚುಂಬಿಗಳು
ಚೆಲ್ಲಾಡಿದವು ಜೀವ ರಾಶಿಗಳು.
ಪ್ರತಿಭಾವಂತರನೇಕರು ಆದರಲ್ಲಿ ಜೀವಂತ ಸಮಾಧಿ!
ಯಾರ ತಪ್ಪಿಗೆ ಯಾರಿಗೆ ಶಿಕ್ಷೆ?
ಏನಾಗಿದೆ ಮನುಷ್ಯರಾಗಿ ಹುಟ್ಟಿದವರಿಗೆ
ಮಾನವೀಯತೆಯ ಮರೆತು ರಾಕ್ಷಸರಾಗಿ
ಬದಲಾದರು ಹೇಗೆ?
ಹುಟ್ಟುವಾಗ ಜಾತಿ ಇಲ್ಲ ಮತ ಇಲ್ಲ
ಬೆಳೆದಂತೆ ಮತಾಂಧತೆ
ಒಬ್ಬರನ್ನೊಬ್ಬರು ಕೊಚ್ಚಿಹಾಕುವಷ್ಟು,
ಸುಟ್ಟುಬಿಡುವಷ್ಟು,
ಪುಡಿಪುಡಿಮಾಡಿ ಬಿಸಾಕುವಷ್ಟು ಕೆಟ್ಟ ದ್ವೇಷ.
ಇದಕ್ಕೆಲ್ಲಿದೆ ಕೊನೆ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...