Home / ಕವನ / ಕವಿತೆ / ಭಯೋತ್ಪಾದಕರು

ಭಯೋತ್ಪಾದಕರು

ಯಾರಿವರು ಭಯೋತ್ಪಾದಕರು
ಎಲ್ಲಿಂದ ಬಂದವರು?
ಯಾರ ಹೊಟ್ಟೆಯಲ್ಲಿ ಬಿತ್ತಿದ ವಿಷದ ಬೀಜಗಳು?
ಕ್ಲೋನಿಂಗ್‌ನಿಂದ ಹುಟ್ಟಿರ ಬಹುದೇ?
ಇಲ್ಲವಾದರೆ ಹೇಗವರು ಒಂದೇ ರೀತಿ?
ಹೃದಯ ಮನಸ್ಸು ಇಲ್ಲದವರು
ಮತಾಂಧರಾಗಿ ಮಾನವೀಯತೆಯ ಮರೆತವರು.
ಭಯೋತ್ಪಾದಕರು!
ಎಲ್ಲೆಲ್ಲೂ ಭಯೋತ್ಪಾದಕರು
ಬೀದಿ ಬೀದಿಗಳಲ್ಲಿ, ನಗರನಗರಗಳಲ್ಲಿ
ಬಸ್ಸಲ್ಲಿ, ರೈಲಲ್ಲಿ, ವಿಮಾನದಲ್ಲಿ
ಎಲ್ಲೆಂದರಲ್ಲಿ ರಕ್ತಪಿಪಾಸುಗಳು,
ಆತ್ಮಾಹುತಿಗೆ ಸಿದ್ಧರಾದವರು.
ಕಾಶ್ಮೀರದಲ್ಲಿ ಮಾರಣಹೋಮ ನಡೆದಾಗ,
ಮುಂಬಯಿಯಲ್ಲಿ ಸರಣಿ ಬಾಂಬುಗಳು ಸಿಡಿದಾಗ
ನೇಪಾಲದಲ್ಲಿ ವಿಮಾನ ಅಪಹರಣವಾದಾಗ
ತಾಲಿಬಾನ್ ನೆಲದಲ್ಲಿ ಪ್ರಯಾಣಿಕರ ಪಣಕ್ಕೊಡ್ಡಿದಾಗ,
ಜೈಲಲ್ಲಿದ್ದ ಭಯೋತ್ಪಾದಕರ ಬಿಡಬೇಕಾದಾಗ
ಯಾರನ್ನೂ ಧೃತಿಗೆಡಿಸಲಿಲ್ಲ, ಅವರ ಇರವು.
ಜಗತ್ತು ಕಣ್ಣು ಮುಚ್ಚಿತ್ತು.
ಕಂಬಿಯ ಹಿಂದಿದ್ದ ಭಯೋತ್ಪಾದಕರು ಲೀನವಾದರು
ವಿಶ್ವ ಜನಸ್ತೋಮದಲಿ ಜಯಭೇರಿ ಹೊಡೆಯುತ-
ವಿದ್ವಂಸಕ ಕೃತ್ಯಗಳ ಮೆರೆಯಿಸುತ!
ಮುಂದೆಯೊಂದು ದಿನ
ಬೆಳೆಸಿದವರದ್ದೇ ಕೈಕಚ್ಚಿ ಅವರದೆಗೇ ಗುಂಡಿಟ್ಟಾಗ
ಉರುಳಿದವು ಗಗನ ಚುಂಬಿಗಳು
ಚೆಲ್ಲಾಡಿದವು ಜೀವ ರಾಶಿಗಳು.
ಪ್ರತಿಭಾವಂತರನೇಕರು ಆದರಲ್ಲಿ ಜೀವಂತ ಸಮಾಧಿ!
ಯಾರ ತಪ್ಪಿಗೆ ಯಾರಿಗೆ ಶಿಕ್ಷೆ?
ಏನಾಗಿದೆ ಮನುಷ್ಯರಾಗಿ ಹುಟ್ಟಿದವರಿಗೆ
ಮಾನವೀಯತೆಯ ಮರೆತು ರಾಕ್ಷಸರಾಗಿ
ಬದಲಾದರು ಹೇಗೆ?
ಹುಟ್ಟುವಾಗ ಜಾತಿ ಇಲ್ಲ ಮತ ಇಲ್ಲ
ಬೆಳೆದಂತೆ ಮತಾಂಧತೆ
ಒಬ್ಬರನ್ನೊಬ್ಬರು ಕೊಚ್ಚಿಹಾಕುವಷ್ಟು,
ಸುಟ್ಟುಬಿಡುವಷ್ಟು,
ಪುಡಿಪುಡಿಮಾಡಿ ಬಿಸಾಕುವಷ್ಟು ಕೆಟ್ಟ ದ್ವೇಷ.
ಇದಕ್ಕೆಲ್ಲಿದೆ ಕೊನೆ?
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...