Home / ಕವನ / ಕವಿತೆ / ಓಂ ಶಾಂತಿ ಶಾಂತಿ ಓಂ

ಓಂ ಶಾಂತಿ ಶಾಂತಿ ಓಂ

ಕಲಿಯಲಿಲ್ಲ ನಾವು
ಕೃಷ್ಣ, ಕ್ರೈಸ್ತ, ಪೈಗಂಬರ,
ಬುದ್ಧ, ಮಹಾವೀರ, ಸಂತರೆಲ್
ಬೋಧಿಸಿರುವ ಶಾಂತಿ ಮಂತ್ರ,
ಕಲಿಯಲಿಲ್ಲ ನಾವು
ಗೀತೆ ಬೈಬಲ್ ಕುರಾನಿನಿಂದ
ಒಬ್ಬರನ್ನೊಬ್ಬರು ಪ್ರೀತಿಸುವ ಹೃದಯವಂತಿಕೆ,
ವಿಶ್ವಶಾಂತಿಯ ಕಾಯ್ವ, ಧೀಮಂತಿಕೆ!
ಮಾರಿಕೊಂಡೆವು ನಾವು
ನಮ್ಮ ಮನದ ಶಾಂತಿ
ಮರುಳಾಗಿ ಹತ್ತು ಹಲವು ಆಮಿಷಗಳಿಗೆ.
ಯಾರು ಕೊಟ್ಟರು ನಮಗೆ
ಒಬ್ಬರನ್ನೊಬ್ಬರು ಕೊಲ್ಲುವ
ಮಕ್ಕಳ ತಬ್ಬಲಿಯಾಗಿಸುವ ಹಕ್ಕು?
ಎಲ್ಲ ಕಡೆ ಬೆಂಕಿ ಹಚ್ಚುವ
ಮನೆಮನೆಯ ಶಾಂತಿ ಕೆಡಿಸುವ ಸೊಕ್ಕು?
ಶಾಂತಿ ಇಲ್ಲದ ಕ್ರಾಂತಿ ಬರೆ ಭ್ರಾಂತಿ!
ಶಾಂತವಾಗಿರೆ ಮನ ಸಾಧನೆಗಿಲ್ಲ ಇತಿಮಿತಿ.
ಹರಡಬಹುದೆಲ್ಲೆಲ್ಲೂ ಬೆಳದಿಂಗಳ ತಂಪು;
ಸೂರ್ಯಾಸ್ತದ ಮುಗಿಲ ರಂಗಿನ ಸೊಂಪು!
ಯಾರು ತಡೆಯಬೇಕೀಗ
ಮಾನವೀಯತೆಯ ನಿರಂತರ ಹೋಮ;
ಮನಮನಕೆ ತಾಗಿರುವ ವಿಕೃತಕಾಮ;
ಶಾಂತಿಯ ಕೆಡಿಸುವ ಮಾರಣ ಹೋಮ
ತುಂಬಲಾರೆವೆ ನಾವು
ಮನಮನದಲ್ಲಿ ಶುದ್ದಭಾವ ತನ್ಮಯತೆ
ಜಾತಿ ಮತ ಭೇದಗಳ ಮರೆತು
ಜಗವ ಪ್ರೀತಿಸುವ ಜೀವಂತಿಕೆ?
ನೆಲೆಸಬೇಕೀಗ
ನಮ್ಮಲ್ಲಿ ನಿಮ್ಮಲ್ಲಿ ಅವರಲ್ಲಿ ಎಲ್ಲರಲಿ
ಉಕ್ಕಿ ಉಕ್ಕಿ ಭೋರ್ಗರೆವ ತೆರೆಗಳು
ಕಡಲತಡಿಯ ಸೋಂಕಿ
ಹಿಂದೆ ಸರಿದು ಸಮುದ್ರ ಸೇರುವಾಗಿನ
ಒಂದು ಕ್ಷಣದ ಪ್ರಶಾಂತ ಸ್ಥಿತಿ.
ಅದೇ ಸಂತರನೇಕರು ಕಂಡ ಸ್ಥಿತ ಪ್ರಜ್ಞಸ್ಥಿತಿ.
ಓಂ ಶಾಂತಿ ಓಂ ಶಾಂತಿ ಓಂ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...