Home / ಕವನ / ಕವಿತೆ / ಓಂ ಶಾಂತಿ ಶಾಂತಿ ಓಂ

ಓಂ ಶಾಂತಿ ಶಾಂತಿ ಓಂ

ಕಲಿಯಲಿಲ್ಲ ನಾವು
ಕೃಷ್ಣ, ಕ್ರೈಸ್ತ, ಪೈಗಂಬರ,
ಬುದ್ಧ, ಮಹಾವೀರ, ಸಂತರೆಲ್
ಬೋಧಿಸಿರುವ ಶಾಂತಿ ಮಂತ್ರ,
ಕಲಿಯಲಿಲ್ಲ ನಾವು
ಗೀತೆ ಬೈಬಲ್ ಕುರಾನಿನಿಂದ
ಒಬ್ಬರನ್ನೊಬ್ಬರು ಪ್ರೀತಿಸುವ ಹೃದಯವಂತಿಕೆ,
ವಿಶ್ವಶಾಂತಿಯ ಕಾಯ್ವ, ಧೀಮಂತಿಕೆ!
ಮಾರಿಕೊಂಡೆವು ನಾವು
ನಮ್ಮ ಮನದ ಶಾಂತಿ
ಮರುಳಾಗಿ ಹತ್ತು ಹಲವು ಆಮಿಷಗಳಿಗೆ.
ಯಾರು ಕೊಟ್ಟರು ನಮಗೆ
ಒಬ್ಬರನ್ನೊಬ್ಬರು ಕೊಲ್ಲುವ
ಮಕ್ಕಳ ತಬ್ಬಲಿಯಾಗಿಸುವ ಹಕ್ಕು?
ಎಲ್ಲ ಕಡೆ ಬೆಂಕಿ ಹಚ್ಚುವ
ಮನೆಮನೆಯ ಶಾಂತಿ ಕೆಡಿಸುವ ಸೊಕ್ಕು?
ಶಾಂತಿ ಇಲ್ಲದ ಕ್ರಾಂತಿ ಬರೆ ಭ್ರಾಂತಿ!
ಶಾಂತವಾಗಿರೆ ಮನ ಸಾಧನೆಗಿಲ್ಲ ಇತಿಮಿತಿ.
ಹರಡಬಹುದೆಲ್ಲೆಲ್ಲೂ ಬೆಳದಿಂಗಳ ತಂಪು;
ಸೂರ್ಯಾಸ್ತದ ಮುಗಿಲ ರಂಗಿನ ಸೊಂಪು!
ಯಾರು ತಡೆಯಬೇಕೀಗ
ಮಾನವೀಯತೆಯ ನಿರಂತರ ಹೋಮ;
ಮನಮನಕೆ ತಾಗಿರುವ ವಿಕೃತಕಾಮ;
ಶಾಂತಿಯ ಕೆಡಿಸುವ ಮಾರಣ ಹೋಮ
ತುಂಬಲಾರೆವೆ ನಾವು
ಮನಮನದಲ್ಲಿ ಶುದ್ದಭಾವ ತನ್ಮಯತೆ
ಜಾತಿ ಮತ ಭೇದಗಳ ಮರೆತು
ಜಗವ ಪ್ರೀತಿಸುವ ಜೀವಂತಿಕೆ?
ನೆಲೆಸಬೇಕೀಗ
ನಮ್ಮಲ್ಲಿ ನಿಮ್ಮಲ್ಲಿ ಅವರಲ್ಲಿ ಎಲ್ಲರಲಿ
ಉಕ್ಕಿ ಉಕ್ಕಿ ಭೋರ್ಗರೆವ ತೆರೆಗಳು
ಕಡಲತಡಿಯ ಸೋಂಕಿ
ಹಿಂದೆ ಸರಿದು ಸಮುದ್ರ ಸೇರುವಾಗಿನ
ಒಂದು ಕ್ಷಣದ ಪ್ರಶಾಂತ ಸ್ಥಿತಿ.
ಅದೇ ಸಂತರನೇಕರು ಕಂಡ ಸ್ಥಿತ ಪ್ರಜ್ಞಸ್ಥಿತಿ.
ಓಂ ಶಾಂತಿ ಓಂ ಶಾಂತಿ ಓಂ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...