Home / ಕವನ / ಕವಿತೆ / ಓಂ ಶಾಂತಿ ಶಾಂತಿ ಓಂ

ಓಂ ಶಾಂತಿ ಶಾಂತಿ ಓಂ

ಕಲಿಯಲಿಲ್ಲ ನಾವು
ಕೃಷ್ಣ, ಕ್ರೈಸ್ತ, ಪೈಗಂಬರ,
ಬುದ್ಧ, ಮಹಾವೀರ, ಸಂತರೆಲ್
ಬೋಧಿಸಿರುವ ಶಾಂತಿ ಮಂತ್ರ,
ಕಲಿಯಲಿಲ್ಲ ನಾವು
ಗೀತೆ ಬೈಬಲ್ ಕುರಾನಿನಿಂದ
ಒಬ್ಬರನ್ನೊಬ್ಬರು ಪ್ರೀತಿಸುವ ಹೃದಯವಂತಿಕೆ,
ವಿಶ್ವಶಾಂತಿಯ ಕಾಯ್ವ, ಧೀಮಂತಿಕೆ!
ಮಾರಿಕೊಂಡೆವು ನಾವು
ನಮ್ಮ ಮನದ ಶಾಂತಿ
ಮರುಳಾಗಿ ಹತ್ತು ಹಲವು ಆಮಿಷಗಳಿಗೆ.
ಯಾರು ಕೊಟ್ಟರು ನಮಗೆ
ಒಬ್ಬರನ್ನೊಬ್ಬರು ಕೊಲ್ಲುವ
ಮಕ್ಕಳ ತಬ್ಬಲಿಯಾಗಿಸುವ ಹಕ್ಕು?
ಎಲ್ಲ ಕಡೆ ಬೆಂಕಿ ಹಚ್ಚುವ
ಮನೆಮನೆಯ ಶಾಂತಿ ಕೆಡಿಸುವ ಸೊಕ್ಕು?
ಶಾಂತಿ ಇಲ್ಲದ ಕ್ರಾಂತಿ ಬರೆ ಭ್ರಾಂತಿ!
ಶಾಂತವಾಗಿರೆ ಮನ ಸಾಧನೆಗಿಲ್ಲ ಇತಿಮಿತಿ.
ಹರಡಬಹುದೆಲ್ಲೆಲ್ಲೂ ಬೆಳದಿಂಗಳ ತಂಪು;
ಸೂರ್ಯಾಸ್ತದ ಮುಗಿಲ ರಂಗಿನ ಸೊಂಪು!
ಯಾರು ತಡೆಯಬೇಕೀಗ
ಮಾನವೀಯತೆಯ ನಿರಂತರ ಹೋಮ;
ಮನಮನಕೆ ತಾಗಿರುವ ವಿಕೃತಕಾಮ;
ಶಾಂತಿಯ ಕೆಡಿಸುವ ಮಾರಣ ಹೋಮ
ತುಂಬಲಾರೆವೆ ನಾವು
ಮನಮನದಲ್ಲಿ ಶುದ್ದಭಾವ ತನ್ಮಯತೆ
ಜಾತಿ ಮತ ಭೇದಗಳ ಮರೆತು
ಜಗವ ಪ್ರೀತಿಸುವ ಜೀವಂತಿಕೆ?
ನೆಲೆಸಬೇಕೀಗ
ನಮ್ಮಲ್ಲಿ ನಿಮ್ಮಲ್ಲಿ ಅವರಲ್ಲಿ ಎಲ್ಲರಲಿ
ಉಕ್ಕಿ ಉಕ್ಕಿ ಭೋರ್ಗರೆವ ತೆರೆಗಳು
ಕಡಲತಡಿಯ ಸೋಂಕಿ
ಹಿಂದೆ ಸರಿದು ಸಮುದ್ರ ಸೇರುವಾಗಿನ
ಒಂದು ಕ್ಷಣದ ಪ್ರಶಾಂತ ಸ್ಥಿತಿ.
ಅದೇ ಸಂತರನೇಕರು ಕಂಡ ಸ್ಥಿತ ಪ್ರಜ್ಞಸ್ಥಿತಿ.
ಓಂ ಶಾಂತಿ ಓಂ ಶಾಂತಿ ಓಂ
*****

Tagged:

Leave a Reply

Your email address will not be published. Required fields are marked *

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...