Home / ಕವನ / ಕವಿತೆ / ಓಂ ಶಾಂತಿ ಶಾಂತಿ ಓಂ

ಓಂ ಶಾಂತಿ ಶಾಂತಿ ಓಂ

ಕಲಿಯಲಿಲ್ಲ ನಾವು
ಕೃಷ್ಣ, ಕ್ರೈಸ್ತ, ಪೈಗಂಬರ,
ಬುದ್ಧ, ಮಹಾವೀರ, ಸಂತರೆಲ್
ಬೋಧಿಸಿರುವ ಶಾಂತಿ ಮಂತ್ರ,
ಕಲಿಯಲಿಲ್ಲ ನಾವು
ಗೀತೆ ಬೈಬಲ್ ಕುರಾನಿನಿಂದ
ಒಬ್ಬರನ್ನೊಬ್ಬರು ಪ್ರೀತಿಸುವ ಹೃದಯವಂತಿಕೆ,
ವಿಶ್ವಶಾಂತಿಯ ಕಾಯ್ವ, ಧೀಮಂತಿಕೆ!
ಮಾರಿಕೊಂಡೆವು ನಾವು
ನಮ್ಮ ಮನದ ಶಾಂತಿ
ಮರುಳಾಗಿ ಹತ್ತು ಹಲವು ಆಮಿಷಗಳಿಗೆ.
ಯಾರು ಕೊಟ್ಟರು ನಮಗೆ
ಒಬ್ಬರನ್ನೊಬ್ಬರು ಕೊಲ್ಲುವ
ಮಕ್ಕಳ ತಬ್ಬಲಿಯಾಗಿಸುವ ಹಕ್ಕು?
ಎಲ್ಲ ಕಡೆ ಬೆಂಕಿ ಹಚ್ಚುವ
ಮನೆಮನೆಯ ಶಾಂತಿ ಕೆಡಿಸುವ ಸೊಕ್ಕು?
ಶಾಂತಿ ಇಲ್ಲದ ಕ್ರಾಂತಿ ಬರೆ ಭ್ರಾಂತಿ!
ಶಾಂತವಾಗಿರೆ ಮನ ಸಾಧನೆಗಿಲ್ಲ ಇತಿಮಿತಿ.
ಹರಡಬಹುದೆಲ್ಲೆಲ್ಲೂ ಬೆಳದಿಂಗಳ ತಂಪು;
ಸೂರ್ಯಾಸ್ತದ ಮುಗಿಲ ರಂಗಿನ ಸೊಂಪು!
ಯಾರು ತಡೆಯಬೇಕೀಗ
ಮಾನವೀಯತೆಯ ನಿರಂತರ ಹೋಮ;
ಮನಮನಕೆ ತಾಗಿರುವ ವಿಕೃತಕಾಮ;
ಶಾಂತಿಯ ಕೆಡಿಸುವ ಮಾರಣ ಹೋಮ
ತುಂಬಲಾರೆವೆ ನಾವು
ಮನಮನದಲ್ಲಿ ಶುದ್ದಭಾವ ತನ್ಮಯತೆ
ಜಾತಿ ಮತ ಭೇದಗಳ ಮರೆತು
ಜಗವ ಪ್ರೀತಿಸುವ ಜೀವಂತಿಕೆ?
ನೆಲೆಸಬೇಕೀಗ
ನಮ್ಮಲ್ಲಿ ನಿಮ್ಮಲ್ಲಿ ಅವರಲ್ಲಿ ಎಲ್ಲರಲಿ
ಉಕ್ಕಿ ಉಕ್ಕಿ ಭೋರ್ಗರೆವ ತೆರೆಗಳು
ಕಡಲತಡಿಯ ಸೋಂಕಿ
ಹಿಂದೆ ಸರಿದು ಸಮುದ್ರ ಸೇರುವಾಗಿನ
ಒಂದು ಕ್ಷಣದ ಪ್ರಶಾಂತ ಸ್ಥಿತಿ.
ಅದೇ ಸಂತರನೇಕರು ಕಂಡ ಸ್ಥಿತ ಪ್ರಜ್ಞಸ್ಥಿತಿ.
ಓಂ ಶಾಂತಿ ಓಂ ಶಾಂತಿ ಓಂ
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...