ಧರ್ಮ

ಧರ್ಮರಾಯ,
ನೀನು ನಡೆದದ್ದು ಧರ್ಮದ ಹಾದಿಯಲ್ಲಿ
ಎಲ್ಲ ಹೊಗಳುತ್ತಾರೆ ನಿನ್ನನ್ನು.
ಆದರೆ ದ್ರೌಪದಿಗೆ
ನೀನು ಮಾಡಿದ್ದು ಮೋಸ?
ಅರ್ಜುನ ಜಯಸಿ ತಂದವಳ
ಅವನಿಗೇ ಬಿಡದೆ
ತಾಯಿ ಅರಿವಿಲ್ಲದೇ ಆಡಿದ
ಮಾತಿನ ನೆವದಿಂದ
ಐವರ ಪತ್ನಿಯಾಗಿಸಿದೆ-
ಅವಳ ಕನಸುಗಳ ಒಡೆದೆ.
ಆಗ ಎಲ್ಲಿ ಹೋಗಿತ್ತು ನಿನ್ನ ಧರ್ಮ?

ಜೂಜಾಟದ ಗುಂಗಿನಲ್ಲಿ
ಅವಳನ್ನು ಒಂದು ವಸ್ತುವಾಗಿಸಿದೆ
ಪಣ ಒಡ್ಡಿದೆ, ಸೋತೆ.
ತುಂಬಿದ ಸಭೆಯಲ್ಲಿ ಅವಳ ಸೆರಗಿಗೆ
ನಿನ್ನ ದಾಯಾದಿ ಕೈ ಹಾಕಿದಾಗ
ತಲೆ ಕೆಳಗೆ ಹಾಕಿದೆ.
ಆಗ ಎಲ್ಲಿ ಹೋಗಿತ್ತು ನಿನ್ನ ಧರ್ಮ?
ಕೈ ಹಿಡಿದವಳಿಗೆ ಕಾಯಾ ವಾಚಾ ಮನಸಾ
ಕೊಡ ಬೇಕಿದ್ದ ಸಂರಕ್ಷಣೆ?
ಹೇಗೆ ಒಪ್ಪಲಿ ನಾವು ನಿನ್ನ
ಧರ್ಮರಾಯನೆಂದು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಜ್ಜೆಗೇಡಲ್ಲಿ ಬರಿದೆ ಸತ್ವವನು ತೇಯುವುದು
Next post ಬೆಲೆ

ಸಣ್ಣ ಕತೆ

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…