ಧರ್ಮ

ಧರ್ಮರಾಯ,
ನೀನು ನಡೆದದ್ದು ಧರ್ಮದ ಹಾದಿಯಲ್ಲಿ
ಎಲ್ಲ ಹೊಗಳುತ್ತಾರೆ ನಿನ್ನನ್ನು.
ಆದರೆ ದ್ರೌಪದಿಗೆ
ನೀನು ಮಾಡಿದ್ದು ಮೋಸ?
ಅರ್ಜುನ ಜಯಸಿ ತಂದವಳ
ಅವನಿಗೇ ಬಿಡದೆ
ತಾಯಿ ಅರಿವಿಲ್ಲದೇ ಆಡಿದ
ಮಾತಿನ ನೆವದಿಂದ
ಐವರ ಪತ್ನಿಯಾಗಿಸಿದೆ-
ಅವಳ ಕನಸುಗಳ ಒಡೆದೆ.
ಆಗ ಎಲ್ಲಿ ಹೋಗಿತ್ತು ನಿನ್ನ ಧರ್ಮ?

ಜೂಜಾಟದ ಗುಂಗಿನಲ್ಲಿ
ಅವಳನ್ನು ಒಂದು ವಸ್ತುವಾಗಿಸಿದೆ
ಪಣ ಒಡ್ಡಿದೆ, ಸೋತೆ.
ತುಂಬಿದ ಸಭೆಯಲ್ಲಿ ಅವಳ ಸೆರಗಿಗೆ
ನಿನ್ನ ದಾಯಾದಿ ಕೈ ಹಾಕಿದಾಗ
ತಲೆ ಕೆಳಗೆ ಹಾಕಿದೆ.
ಆಗ ಎಲ್ಲಿ ಹೋಗಿತ್ತು ನಿನ್ನ ಧರ್ಮ?
ಕೈ ಹಿಡಿದವಳಿಗೆ ಕಾಯಾ ವಾಚಾ ಮನಸಾ
ಕೊಡ ಬೇಕಿದ್ದ ಸಂರಕ್ಷಣೆ?
ಹೇಗೆ ಒಪ್ಪಲಿ ನಾವು ನಿನ್ನ
ಧರ್ಮರಾಯನೆಂದು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಜ್ಜೆಗೇಡಲ್ಲಿ ಬರಿದೆ ಸತ್ವವನು ತೇಯುವುದು
Next post ಬೆಲೆ

ಸಣ್ಣ ಕತೆ

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…