Home / ಕವನ / ಕವಿತೆ / ಬೆಳೆಯಗೊಡಲಿಲ್ಲವೇನಮ್ಮ?

ಬೆಳೆಯಗೊಡಲಿಲ್ಲವೇನಮ್ಮ?

ಯಾಕಮ್ಮ ಈ ಕೋಪ, ಈ ರೋಷ,
ಇಷ್ಟೊಂದು ಆವೇಶ ಅವರ ಮೇಲೆ?
ಬೆಳೆಯ ಗೊಡಲಿಲ್ಲವೇ ಅವರು ನಮ್ಮ-
ನಾವಿಂದು ಇರುವ ಹಾಗೆ?

ಇರಲಿಲ್ಲವೇ ಲಕ್ಷ್ಮೀಬಾಯಿ ನಮ್ಮ ನಿಮ್ಮ ಹಾಗೆ
ಬೆಳೆಯಲಿಲ್ಲವೇ ಅವಳು ದೇಶಕ್ಕಾಗಿ ಜೀವತೆತ್ತು
ಝಾನ್ಸಿರಾಣಿ ಲಕ್ಷ್ಮೀಬಾಯಿಯಾಗಿ
ನಮಗಿಂತ ಭಿನ್ನವಾಗಿ?

ಇರಲಿಲ್ಲವೇ ಮಹಾದೇವಿ ನಮ್ಮ ನಿಮ್ಮ ಹಾಗೆ
ಬೆಳಯಲಿಲ್ಲವೇ ಅವಳು ಕಟ್ಟಿಕೊಂಡವನ ಬಿಟ್ಟು
ಉಳ್ಳಾಲದ ಉಕ್ಕಿನ ರಾಣಿಯಾಗಿ
ನಮಗಿಂತ ಭಿನ್ನವಾಗಿ?

ಇರಲಿಲ್ಲವೇ ಮಹಾದೇವಿ ನಮ್ಮ ನಿಮ್ಮ ಹಾಗೆ
ಬೆಳೆಯಲಿಲ್ಲವೇ ಅವಳು ಕಟ್ಟಿಕೊಂಡವನ ತೊರೆದು
ಅಕ್ಕ ಮಹಾದೇವಿಯಾಗಿ
ನಮಗಿಂತ ಭಿನ್ನವಾಗಿ?

ಇರಲಿಲ್ಲವೇ ಇಂದಿರಾ ನಮ್ಮ ನಿಮ್ಮ ಹಾಗೆ
ಬೆಳೆಯಲಿಲ್ಲವೇ ಅವಳು ಗಂಡಸರಲ್ಲಿ ಗಂಡಸಾಗಿ
ಯುಗಕ್ಕೊಬ್ಬಳೇ ರಾಜಕಾರಣಿಯಾಗಿ
ನಮಗಿಂತ ಭಿನ್ನವಾಗಿ?

ಬೆಳೆಯಲಿಲ್ಲವೇ ಇವರೆಲ್ಲ
ನಮ್ಮ ಹಾಗಿದ್ದೂ ನಮಗಿಂತ ಭಿನ್ನವಾಗಿ
ಹೆಣ್ಣಾಗಿದ್ದೂ ಗಂಡಿನಂತಾಗಿ
ಚರಿತ್ರೆಯ ಪುಟಗಳಲ್ಲಿ ದಾಖಲಾಗಿ?

ಮತ್ತೇಕೆ ಈ ಕೋಪ, ಈ ರೋಷ,
ಇಷ್ಟೊಂದು ಆವೇಶ ಅವರ ಮೇಲೆ,
ಬೆಳೆಯ ಗೊಡಲಿಲ್ಲವೇ ಅವರು, ನಮ್
ನಾವಿಂದು ಇರುವಹಾಗೆ?

ಗರ್ಭದೊಳಗೆ ಆಗ ತಾನೇ ಮೊಳಕೆಯೊಡೆದ
ಕುಡಿ ಹೆಣ್ಣೆಂದು ಭ್ರೂಣ ಹತ್ಯೆಗೆ ಒಪ್ಪುವವರು ನಾವು;
ಹೆತ್ತ ಮಗು ಹೆಣ್ಣೆಂದು ಜರಿಯುವವರು ನಾವು;
ಬಂದ ಹೆಣ್ಣು ವರದಕ್ಷಿಣೆ ತರಲಿಲ್ಲವೆಂದು
ಸುಟ್ಟು ಹಾಕಲು ಸಹಕರಿಸುವವರು ನಾವು;
ಒಂಟಿ ಹೆಣ್ಣು ತನಗಾಗಿ ಬದುಕುತ್ತಿರುವಾಗ
ಅವಳ ಚಾರಿತ್ರ್ಯ ವಧೆ ಮಾಡುವವರು ನಾವು;
ಜಾಹೀರಾತಿಗೆಂದು ಮೈ ಚಳಿ ಬಿಟ್ಟು
ಎಲ್ಲ ತೆರೆದು ಬರಿದಾಗಿ ನಿಲ್ಲುವವರು ನಾವು;
ಬೆಳೆಯ ಗೊಡಲಿಲ್ಲವೇ ಅವರು, ನಮ್ಮ
ನಮಗೆ ಬೇಕೆನಿಸಿದ ಹಾಗೆ?

ಈಗ ಯಾಕಮ್ಮ ಈ ಕೋಪ, ಈ ರೋಷ,
ಇಷ್ಟೊಂದು ಆವೇಶ ಅವರ ಮೇಲೆ
ಬೆಳೆಯಗೊಡಲಿಲ್ಲವೇ ಅವರು, ನಮ್ಮ-
ನಾವಿಂದು ಇರುವ ಹಾಗೆ?

ನಾವೇಕೆ ನಮ್ಮತನವ ಕಾಯ್ದು ಕೊಳ್ಳಲಿಲ್ಲ?
ನಾವೇಕೆ ನಮ್ಮ ಶೋಷಿಸುವವರ ಪ್ರತಿಭಟಿಸಲಿಲ್ಲ?
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...