ಬೆಳೆಯಗೊಡಲಿಲ್ಲವೇನಮ್ಮ?

ಯಾಕಮ್ಮ ಈ ಕೋಪ, ಈ ರೋಷ,
ಇಷ್ಟೊಂದು ಆವೇಶ ಅವರ ಮೇಲೆ?
ಬೆಳೆಯ ಗೊಡಲಿಲ್ಲವೇ ಅವರು ನಮ್ಮ-
ನಾವಿಂದು ಇರುವ ಹಾಗೆ?

ಇರಲಿಲ್ಲವೇ ಲಕ್ಷ್ಮೀಬಾಯಿ ನಮ್ಮ ನಿಮ್ಮ ಹಾಗೆ
ಬೆಳೆಯಲಿಲ್ಲವೇ ಅವಳು ದೇಶಕ್ಕಾಗಿ ಜೀವತೆತ್ತು
ಝಾನ್ಸಿರಾಣಿ ಲಕ್ಷ್ಮೀಬಾಯಿಯಾಗಿ
ನಮಗಿಂತ ಭಿನ್ನವಾಗಿ?

ಇರಲಿಲ್ಲವೇ ಮಹಾದೇವಿ ನಮ್ಮ ನಿಮ್ಮ ಹಾಗೆ
ಬೆಳಯಲಿಲ್ಲವೇ ಅವಳು ಕಟ್ಟಿಕೊಂಡವನ ಬಿಟ್ಟು
ಉಳ್ಳಾಲದ ಉಕ್ಕಿನ ರಾಣಿಯಾಗಿ
ನಮಗಿಂತ ಭಿನ್ನವಾಗಿ?

ಇರಲಿಲ್ಲವೇ ಮಹಾದೇವಿ ನಮ್ಮ ನಿಮ್ಮ ಹಾಗೆ
ಬೆಳೆಯಲಿಲ್ಲವೇ ಅವಳು ಕಟ್ಟಿಕೊಂಡವನ ತೊರೆದು
ಅಕ್ಕ ಮಹಾದೇವಿಯಾಗಿ
ನಮಗಿಂತ ಭಿನ್ನವಾಗಿ?

ಇರಲಿಲ್ಲವೇ ಇಂದಿರಾ ನಮ್ಮ ನಿಮ್ಮ ಹಾಗೆ
ಬೆಳೆಯಲಿಲ್ಲವೇ ಅವಳು ಗಂಡಸರಲ್ಲಿ ಗಂಡಸಾಗಿ
ಯುಗಕ್ಕೊಬ್ಬಳೇ ರಾಜಕಾರಣಿಯಾಗಿ
ನಮಗಿಂತ ಭಿನ್ನವಾಗಿ?

ಬೆಳೆಯಲಿಲ್ಲವೇ ಇವರೆಲ್ಲ
ನಮ್ಮ ಹಾಗಿದ್ದೂ ನಮಗಿಂತ ಭಿನ್ನವಾಗಿ
ಹೆಣ್ಣಾಗಿದ್ದೂ ಗಂಡಿನಂತಾಗಿ
ಚರಿತ್ರೆಯ ಪುಟಗಳಲ್ಲಿ ದಾಖಲಾಗಿ?

ಮತ್ತೇಕೆ ಈ ಕೋಪ, ಈ ರೋಷ,
ಇಷ್ಟೊಂದು ಆವೇಶ ಅವರ ಮೇಲೆ,
ಬೆಳೆಯ ಗೊಡಲಿಲ್ಲವೇ ಅವರು, ನಮ್
ನಾವಿಂದು ಇರುವಹಾಗೆ?

ಗರ್ಭದೊಳಗೆ ಆಗ ತಾನೇ ಮೊಳಕೆಯೊಡೆದ
ಕುಡಿ ಹೆಣ್ಣೆಂದು ಭ್ರೂಣ ಹತ್ಯೆಗೆ ಒಪ್ಪುವವರು ನಾವು;
ಹೆತ್ತ ಮಗು ಹೆಣ್ಣೆಂದು ಜರಿಯುವವರು ನಾವು;
ಬಂದ ಹೆಣ್ಣು ವರದಕ್ಷಿಣೆ ತರಲಿಲ್ಲವೆಂದು
ಸುಟ್ಟು ಹಾಕಲು ಸಹಕರಿಸುವವರು ನಾವು;
ಒಂಟಿ ಹೆಣ್ಣು ತನಗಾಗಿ ಬದುಕುತ್ತಿರುವಾಗ
ಅವಳ ಚಾರಿತ್ರ್ಯ ವಧೆ ಮಾಡುವವರು ನಾವು;
ಜಾಹೀರಾತಿಗೆಂದು ಮೈ ಚಳಿ ಬಿಟ್ಟು
ಎಲ್ಲ ತೆರೆದು ಬರಿದಾಗಿ ನಿಲ್ಲುವವರು ನಾವು;
ಬೆಳೆಯ ಗೊಡಲಿಲ್ಲವೇ ಅವರು, ನಮ್ಮ
ನಮಗೆ ಬೇಕೆನಿಸಿದ ಹಾಗೆ?

ಈಗ ಯಾಕಮ್ಮ ಈ ಕೋಪ, ಈ ರೋಷ,
ಇಷ್ಟೊಂದು ಆವೇಶ ಅವರ ಮೇಲೆ
ಬೆಳೆಯಗೊಡಲಿಲ್ಲವೇ ಅವರು, ನಮ್ಮ-
ನಾವಿಂದು ಇರುವ ಹಾಗೆ?

ನಾವೇಕೆ ನಮ್ಮತನವ ಕಾಯ್ದು ಕೊಳ್ಳಲಿಲ್ಲ?
ನಾವೇಕೆ ನಮ್ಮ ಶೋಷಿಸುವವರ ಪ್ರತಿಭಟಿಸಲಿಲ್ಲ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನನ್ನೊಡನೆ ಗೆಳೆಯನನೂ ಹಿಂಡಿ ನನ್ನೆದೆಯನ್ನ
Next post ಸರಕಾರಿ ಕಛೇರಿ

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

cheap jordans|wholesale air max|wholesale jordans|wholesale jewelry|wholesale jerseys