Home / ಕವನ / ಕವಿತೆ / ಹುಡುಕಾಟ

ಹುಡುಕಾಟ

ಯಾಕೆ ಹುಡುಕಬೇಕು ಹೇಳು ಗೆಳತಿ,
ಶಾಪಗ್ರಸ್ತರಾಗಿ ಕಲ್ಲಾಗಿ ಮಲಗಿದವರ
ಬೆಂಕಿಯಲಿ ಹಾರಿದವರ, ಭೂಮಿಯಲ್ಲಿ ಸೇರಿದವರ,
ಚುಕ್ಕಿಯಾಗಿ ಬಾನಲ್ಲಿ ಲೀನವಾದವರ?
ಯಾಕೆ ಹುಡುಕಬೇಕು ಹೇಳು, ನಮ್ಮಾದರ್ಶಗಳ ಅವರಲಿ
ರಾಮರಾವಣರಿಲ್ಲದ, ಕೃಷ್ಣ ಧರ್ಮರಾಯರಿಲ್ಲದ
ಈ ಕಲಿಯುಗದಲಿ?
ಪತಿಯ ಶಾಪಕ್ಕೊಳಗಾಗಿ
ರಾಮನ ಕಾಲಸ್ಪರ್ಶಕೆ ಕಾದು ಕಲ್ಲಾಗಿ ಮಲಗುವ
ಅಹಲ್ಯೆಯರು ನಾವಲ್ಲ;
ಕೈ ಹಿಡಿದವ ಶಂಕಿಸಿದನೆಂದು
ಕಾಡಿಗೆ ಹೋಗುವ ಬೆಂಕಿಗೆ ಹಾರುವ
ಸೀತೆಯರು ನಾವಲ್ಲ;
ಪತಿಯೇ ಪರದೈವವೆಂದು ತನ್ನತನವ ಮರೆತು
ಅವನ ನೆರಳಾಗಿ ಬಾಳುವ
ಅಳಿದ ಮೇಲೆ ನಕ್ಷತ್ರವಾಗಿ ಬಾನಲ್ಲಿ ಮೆರೆಯುವ
ಋಷಿ ಪತ್ನಿಯರೂ ನಾವಲ್ಲ;
ಕುರುಡು ಪತಿಗೆ ಒಡನಾಡಿಯೆಂದು
ಕೃತಕ ಕುರುಡುತನಕ್ಕೊಳಗಾಗಿ ನೂರು ಮಕ್ಕಳ ಹಡೆದು
ಅವರ ದುರ್ಯೋಧನ ದುಶ್ಯಾಸನರಾಗ ಬಿಡುವ
ಗಾಂಧಾರಿಯರು ನಾವಲ್ಲ;
ಕೈಹಿಡಿದವನಿಂದ ಸಂತಾನವಿಲ್ಲವೆಂದು
ದೇವತೆಗಳ ಮೊರೆಹೋಗಿ ಪುತ್ರೋತ್ಸವ ನಡೆಸುವ
ಕುಂತಿ ಮಾದ್ರಿಯರೂ ನಾವಲ್ಲ;
ಹಂಚಿ ತಿನಬೇಕೆಂಬ ತಾಯಿಮಾತ ದಿಟ ಮಾಡ ಹೊರಟು
ಪಂಚ ಪಾಂಡವರ ಸತಿಯಾಗಿ
ಹೃದಯದೊಳಗಿನ ಪ್ರೇಮಗೀತೆಗೆ ತಿಲಾಂಜಲಿ ಇತ್ತ
ಪಾಂಚಾಲಿಯರೂ ನಾವಲ್ಲ.
ಅವರೆಲ್ಲ ವಾಲ್ಮೀಕಿ ಕುಮಾರವ್ಯಾಸರ
ಲೇಖನಿಯಿಂದ ಹುಟ್ಟಿ ಬಂದವರು, ಕಲ್ಪನೆಯ ಕೂಸುಗಳು
ಅಲ್ಲಲ್ಲಿ ಕಥೆಯಲ್ಲಿ ಸೇರಿ ಹೋದವರು!
ಮತ್ತೇಕೆ ಹುಡುಕಬೇಕು ಹೇಳು ಗೆಳತಿ
ನಮ್ಮಾದರ್ಶಗಳ ಅವರಲ್ಲಿ
ಅವರಾತ್ಮ ಅಂತರಾಳದಲಿ ಅಡಗಿದ್ದ
ಅಂತಃಶಕ್ತಿಯ ಮರೆತು ಕುಳಿತವರಲ್ಲಿ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...