ಕಣ್ಣು ಮುಚ್ಚಾಟ!


ಅಜ್ಜ ಕಣ್ಣು ಮುಚ್ಚಿ ಬಿಟ್ಟ!
ಕೈಯ ಹಿಡಿದು ಕೇಳಿಬಿಟ್ಟ!


“ಇವಳಬಿಟ್ಟು ಇವಳುಯಾರು?
ಇವನಬಿಟ್ಟು ಇವನುಯಾರು?”


ಇವಳುಗಂಗೆ, ಇವಳುಗೌರಿ!
ಬ್ರಹ್ಮ, ವಿಷ್ಣು, ರುದ್ರರಿವರು!


“ಹೋಗೆ ಗಂಗಿ, ಹೋಗೆ ಗೌರಿ!
ಹೋಗೊ ಬ್ರಹ್ಮ, ವಿಷ್ಣು, ರುದ್ರ!”


“ಬಿಟ್ಟಿ, ಬಿಟ್ಟೆ, ಬೆಳಗು ಆಯ್ತು!
ತಟ್ಟಿ ಮನೆಯು ಹಾಳು ಆಯ್ತು!”


“ಹಾಳುಗೋಡೆ ದೆವ್ವ ಬಂತು!”
ಅಯ್ಯೊ ಅವರ ಹುಡುಕಲೆಂತು?


ಗಂಗೆಯಿಲ್ಲ, ಗೌರಿಯಿಲ್ಲ!
ಬ್ರಹ್ಮ, ವಿಷ್ಣು, ರುದ್ರರಿಲ್ಲ!


ವನದೊಳಿಲ್ಲ, ಮನೆಯೊಳಿಲ್ಲ!
ಸ್ವರ್ಗ ನರಕದೊಳಗು ಇಲ್ಲ!


ಹೆಣ್ಣಿನಾಟವಾಡಬಂದೆ!
ಮನೆಯ ಕೆಲಸ ಮರೆತು ನಿಂದೆ!

೧೦
ದೇವರನ್ನು ಹುಡುಕ ಹೋದೆ!
ಗಂಡು ಹುಡುಗ `ಹೆಣ್ಣು’ ಆದೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೊಂಬೆ
Next post ವಚನ ವಿಚಾರ – ಇಲ್ಲೇ ಇದ್ದಾರೆ

ಸಣ್ಣ ಕತೆ

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…