ಕೊನೆಯಾಶೆ

ಹೊಸದಿನದ ಹೊಸತುತ್ತೂರಿಯ ದನಿ-
ಯು ಹೃದಯವನು ಸೇರೆ, ಕುದಿರಕ್ತ
ತಳಮಳಿಸಲಾ ನವಜವ್ವನೋತ್ಸಾ-
ಹದಲಿ ಪಂಜರದೊಳಿಹ ಗಿಳಿಯ ಹೊ-
ರಗೆಳೆದು ತೂರಿ ತೇಲಲು ಬಿಟ್ಟು,
“ಸೌಖ್ಯದಾಕಾಶದಲಿ ಮುಗಿಲು-
ಹಣ್ಣುಗಳ ಸವಿದು ಶಾಂತಿಸರಕಿ-
ಳಿದು ತಿಳಿನೀರನೀಂಟಿ ಸತಿ ಸುತರ
ಕೂಡಿ ಮಾತುಕತೆಯಾಡಿ ಮರೆ”
ಯೆಂದ ಸಂದೇಶವನು ತಾಯೆ ನಿನ-
ರುಹಲೆಂದು ಧಾವಿಸಿ ಬಂದೆ.
ನಿನ್ನ ಉಪವನದಿ ಪಚ್ಚಗರುಕೆಯ
ಶಾಂತಿ ಶಯ್ಯೆಯಲಿ ಮಲಗಿಹೆ
ನಾದೊಡೇನೆಲೆತಾಯೆ, ನಿನ್ನ
ಮುದ್ದು ಕಂದನನೊಮ್ಮೆಯೆ ಒಮ್ಮೆ
ಮೈದಡವಿ ಮುದ್ದಿಟ್ಟು ಬಿಡು
ಒಡನೆ ಪ್ರಾಣವ ಬಿಡುವೆ ಸಂತಸದಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಲ್ಲಮನೆಂದರೆ
Next post ವಚನ ವಿಚಾರ – ನೀನು ನಾನು

ಸಣ್ಣ ಕತೆ

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys