Home / ಕವನ / ಕವಿತೆ / ತನ್ನಷ್ಟಕ್ಕೆ

ತನ್ನಷ್ಟಕ್ಕೆ

ಭೂಮಿಯಾಳದಲ್ಲಿ ಮಾತ್ರ
ಈಜುವ ಪುರಾವೆಗಳಿವೆ
ಈ ಮರದ ಬೇರಿಗೆ
ಹೆಬ್ಬಂಡೆಯೂ ಮಿದು ಮಣ್ಣಾಗಿ
ಹುಡಿ ಹುಡಿಯೂ
ಮಿಸುಕುತ್ತದಂತೆ

ಕಾಣಲಾರದು
ನಮ್ಮಂಥ ಪಾಮರರಿಗೆ!

ಈ ಮರದ ಕೊಂಬೆ ಕೊಂಬೆಗಳಲ್ಲಿ
ನೇತು ಬೀಳಬಹುದು ಯಾರೂ
ಉಯ್ಯಾಲೆಯಾಡಬಹುದು
ಹತ್ತಿ ಕುಪ್ಪಳಿಸಿ ಕುಣಿದು
ಮರಹತ್ತಿ ಮರಕೋತಿಯಾಡಬಹುದು
ನೆಳಲಿನಲಿ ಕುಂಟೋಬಿಲ್ಲೆ……
ರೆಂಬೆಗಳ ಮರೆಯಲ್ಲಿ
ಗೂಡು ಕಟ್ಟಬಹುದು
ತಾವು ಹುಡುಕಬಹುದು!

ಮರ ಸಿಡುಕುವುದಿಲ್ಲ
ಚಡಪಡಿಸಿ ನೂಕುವುದಿಲ್ಲ
ಅಷ್ಟೇ ಅಲ್ಲ
ಯಾವ ಮಾಂತ್ರಿಕತೆಗೂ
ಮಿಡುಕುವುದೂ ಇಲ್ಲ!

ಅದು ಕೇಳುವುದಿಲ್ಲ ನೋಡುವುದಿಲ್ಲ
ನುಡಿಯುವುದೂ ಇಲ್ಲ.
ಅದರ ಅತೀತ ಬೇರಿಗೇ
ಪಂಚೇಂದ್ರಿಯಗಳಂಟಿಕೊಂಡು
ಬೇರು ಮಾತ್ರ ತುಡಿಯುವುದಂತೆ
ಒಳಗೇ,
ಏನು ಮಾಡುವುದು
ನಮ್ಮ ಕಣ್ಣಿಗದು ಕಾಣುವುದೇ ಇಲ್ಲ!

ಗಾಳಿ ಬೀಸಿದಾಗ
ಮಳೆ ಬಿದ್ದಾಗ
ಬಿಸಿಲು ಕಾಯಿಸಿದಾಗ
ಆ ಕ್ಷಣಕ್ಕೆ ಒಡ್ಡಿಕೊಳ್ಳುವುದು ಎಲೆಯೇ
ಮರ ನಿಂತಿರುತ್ತದಷ್ಟೇ ತನ್ನಷ್ಟಕ್ಕೇ!

ಏನೂ ಆಗಿಲ್ಲದಂತೆ!

ಅದಕ್ಕೆ ಅದರದ್ದೇ
ಜನ್ಮಾಂತರದ ಕಥೆಗಳು
ಜೊತೆಗೇ
ಹೊಳೆದೂ ಹೊಳೆಯದ ನಕ್ಷತ್ರಗಳು.
ನಂಟಿದ್ದೂ ಅಂಟಿಯೂ ಅಂಟದಂತೆ
ಹಿಂದಿಲ್ಲದೇ ಮುಂದಿಲ್ಲದೇ
ಬಯಲಲ್ಲಿ ವಿರಾಗಿಯಂತೆ
ನಿಂತ ಮರಕ್ಕೆ

ನಾವೆಷ್ಟಾದರೂ ಜೋತು ಬೀಳಬಹುದು
ಅದು ಆತುಕೊಳ್ಳುವುದಿಲ್ಲವಷ್ಟೇ!
*****

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...