Home / ಕವನ / ಕವಿತೆ / ತನ್ನಷ್ಟಕ್ಕೆ

ತನ್ನಷ್ಟಕ್ಕೆ

ಭೂಮಿಯಾಳದಲ್ಲಿ ಮಾತ್ರ
ಈಜುವ ಪುರಾವೆಗಳಿವೆ
ಈ ಮರದ ಬೇರಿಗೆ
ಹೆಬ್ಬಂಡೆಯೂ ಮಿದು ಮಣ್ಣಾಗಿ
ಹುಡಿ ಹುಡಿಯೂ
ಮಿಸುಕುತ್ತದಂತೆ

ಕಾಣಲಾರದು
ನಮ್ಮಂಥ ಪಾಮರರಿಗೆ!

ಈ ಮರದ ಕೊಂಬೆ ಕೊಂಬೆಗಳಲ್ಲಿ
ನೇತು ಬೀಳಬಹುದು ಯಾರೂ
ಉಯ್ಯಾಲೆಯಾಡಬಹುದು
ಹತ್ತಿ ಕುಪ್ಪಳಿಸಿ ಕುಣಿದು
ಮರಹತ್ತಿ ಮರಕೋತಿಯಾಡಬಹುದು
ನೆಳಲಿನಲಿ ಕುಂಟೋಬಿಲ್ಲೆ……
ರೆಂಬೆಗಳ ಮರೆಯಲ್ಲಿ
ಗೂಡು ಕಟ್ಟಬಹುದು
ತಾವು ಹುಡುಕಬಹುದು!

ಮರ ಸಿಡುಕುವುದಿಲ್ಲ
ಚಡಪಡಿಸಿ ನೂಕುವುದಿಲ್ಲ
ಅಷ್ಟೇ ಅಲ್ಲ
ಯಾವ ಮಾಂತ್ರಿಕತೆಗೂ
ಮಿಡುಕುವುದೂ ಇಲ್ಲ!

ಅದು ಕೇಳುವುದಿಲ್ಲ ನೋಡುವುದಿಲ್ಲ
ನುಡಿಯುವುದೂ ಇಲ್ಲ.
ಅದರ ಅತೀತ ಬೇರಿಗೇ
ಪಂಚೇಂದ್ರಿಯಗಳಂಟಿಕೊಂಡು
ಬೇರು ಮಾತ್ರ ತುಡಿಯುವುದಂತೆ
ಒಳಗೇ,
ಏನು ಮಾಡುವುದು
ನಮ್ಮ ಕಣ್ಣಿಗದು ಕಾಣುವುದೇ ಇಲ್ಲ!

ಗಾಳಿ ಬೀಸಿದಾಗ
ಮಳೆ ಬಿದ್ದಾಗ
ಬಿಸಿಲು ಕಾಯಿಸಿದಾಗ
ಆ ಕ್ಷಣಕ್ಕೆ ಒಡ್ಡಿಕೊಳ್ಳುವುದು ಎಲೆಯೇ
ಮರ ನಿಂತಿರುತ್ತದಷ್ಟೇ ತನ್ನಷ್ಟಕ್ಕೇ!

ಏನೂ ಆಗಿಲ್ಲದಂತೆ!

ಅದಕ್ಕೆ ಅದರದ್ದೇ
ಜನ್ಮಾಂತರದ ಕಥೆಗಳು
ಜೊತೆಗೇ
ಹೊಳೆದೂ ಹೊಳೆಯದ ನಕ್ಷತ್ರಗಳು.
ನಂಟಿದ್ದೂ ಅಂಟಿಯೂ ಅಂಟದಂತೆ
ಹಿಂದಿಲ್ಲದೇ ಮುಂದಿಲ್ಲದೇ
ಬಯಲಲ್ಲಿ ವಿರಾಗಿಯಂತೆ
ನಿಂತ ಮರಕ್ಕೆ

ನಾವೆಷ್ಟಾದರೂ ಜೋತು ಬೀಳಬಹುದು
ಅದು ಆತುಕೊಳ್ಳುವುದಿಲ್ಲವಷ್ಟೇ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...