ತನ್ನಷ್ಟಕ್ಕೆ

ಭೂಮಿಯಾಳದಲ್ಲಿ ಮಾತ್ರ
ಈಜುವ ಪುರಾವೆಗಳಿವೆ
ಈ ಮರದ ಬೇರಿಗೆ
ಹೆಬ್ಬಂಡೆಯೂ ಮಿದು ಮಣ್ಣಾಗಿ
ಹುಡಿ ಹುಡಿಯೂ
ಮಿಸುಕುತ್ತದಂತೆ

ಕಾಣಲಾರದು
ನಮ್ಮಂಥ ಪಾಮರರಿಗೆ!

ಈ ಮರದ ಕೊಂಬೆ ಕೊಂಬೆಗಳಲ್ಲಿ
ನೇತು ಬೀಳಬಹುದು ಯಾರೂ
ಉಯ್ಯಾಲೆಯಾಡಬಹುದು
ಹತ್ತಿ ಕುಪ್ಪಳಿಸಿ ಕುಣಿದು
ಮರಹತ್ತಿ ಮರಕೋತಿಯಾಡಬಹುದು
ನೆಳಲಿನಲಿ ಕುಂಟೋಬಿಲ್ಲೆ……
ರೆಂಬೆಗಳ ಮರೆಯಲ್ಲಿ
ಗೂಡು ಕಟ್ಟಬಹುದು
ತಾವು ಹುಡುಕಬಹುದು!

ಮರ ಸಿಡುಕುವುದಿಲ್ಲ
ಚಡಪಡಿಸಿ ನೂಕುವುದಿಲ್ಲ
ಅಷ್ಟೇ ಅಲ್ಲ
ಯಾವ ಮಾಂತ್ರಿಕತೆಗೂ
ಮಿಡುಕುವುದೂ ಇಲ್ಲ!

ಅದು ಕೇಳುವುದಿಲ್ಲ ನೋಡುವುದಿಲ್ಲ
ನುಡಿಯುವುದೂ ಇಲ್ಲ.
ಅದರ ಅತೀತ ಬೇರಿಗೇ
ಪಂಚೇಂದ್ರಿಯಗಳಂಟಿಕೊಂಡು
ಬೇರು ಮಾತ್ರ ತುಡಿಯುವುದಂತೆ
ಒಳಗೇ,
ಏನು ಮಾಡುವುದು
ನಮ್ಮ ಕಣ್ಣಿಗದು ಕಾಣುವುದೇ ಇಲ್ಲ!

ಗಾಳಿ ಬೀಸಿದಾಗ
ಮಳೆ ಬಿದ್ದಾಗ
ಬಿಸಿಲು ಕಾಯಿಸಿದಾಗ
ಆ ಕ್ಷಣಕ್ಕೆ ಒಡ್ಡಿಕೊಳ್ಳುವುದು ಎಲೆಯೇ
ಮರ ನಿಂತಿರುತ್ತದಷ್ಟೇ ತನ್ನಷ್ಟಕ್ಕೇ!

ಏನೂ ಆಗಿಲ್ಲದಂತೆ!

ಅದಕ್ಕೆ ಅದರದ್ದೇ
ಜನ್ಮಾಂತರದ ಕಥೆಗಳು
ಜೊತೆಗೇ
ಹೊಳೆದೂ ಹೊಳೆಯದ ನಕ್ಷತ್ರಗಳು.
ನಂಟಿದ್ದೂ ಅಂಟಿಯೂ ಅಂಟದಂತೆ
ಹಿಂದಿಲ್ಲದೇ ಮುಂದಿಲ್ಲದೇ
ಬಯಲಲ್ಲಿ ವಿರಾಗಿಯಂತೆ
ನಿಂತ ಮರಕ್ಕೆ

ನಾವೆಷ್ಟಾದರೂ ಜೋತು ಬೀಳಬಹುದು
ಅದು ಆತುಕೊಳ್ಳುವುದಿಲ್ಲವಷ್ಟೇ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಾಹಿತ್ಯದ ಸ್ವಯಂಪ್ರಜ್ಞೆ
Next post ಪ್ರಾರ್ಥನೆ

ಸಣ್ಣ ಕತೆ

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…