Home / ಕವನ / ಕವಿತೆ / ತನ್ನಷ್ಟಕ್ಕೆ

ತನ್ನಷ್ಟಕ್ಕೆ

ಭೂಮಿಯಾಳದಲ್ಲಿ ಮಾತ್ರ
ಈಜುವ ಪುರಾವೆಗಳಿವೆ
ಈ ಮರದ ಬೇರಿಗೆ
ಹೆಬ್ಬಂಡೆಯೂ ಮಿದು ಮಣ್ಣಾಗಿ
ಹುಡಿ ಹುಡಿಯೂ
ಮಿಸುಕುತ್ತದಂತೆ

ಕಾಣಲಾರದು
ನಮ್ಮಂಥ ಪಾಮರರಿಗೆ!

ಈ ಮರದ ಕೊಂಬೆ ಕೊಂಬೆಗಳಲ್ಲಿ
ನೇತು ಬೀಳಬಹುದು ಯಾರೂ
ಉಯ್ಯಾಲೆಯಾಡಬಹುದು
ಹತ್ತಿ ಕುಪ್ಪಳಿಸಿ ಕುಣಿದು
ಮರಹತ್ತಿ ಮರಕೋತಿಯಾಡಬಹುದು
ನೆಳಲಿನಲಿ ಕುಂಟೋಬಿಲ್ಲೆ……
ರೆಂಬೆಗಳ ಮರೆಯಲ್ಲಿ
ಗೂಡು ಕಟ್ಟಬಹುದು
ತಾವು ಹುಡುಕಬಹುದು!

ಮರ ಸಿಡುಕುವುದಿಲ್ಲ
ಚಡಪಡಿಸಿ ನೂಕುವುದಿಲ್ಲ
ಅಷ್ಟೇ ಅಲ್ಲ
ಯಾವ ಮಾಂತ್ರಿಕತೆಗೂ
ಮಿಡುಕುವುದೂ ಇಲ್ಲ!

ಅದು ಕೇಳುವುದಿಲ್ಲ ನೋಡುವುದಿಲ್ಲ
ನುಡಿಯುವುದೂ ಇಲ್ಲ.
ಅದರ ಅತೀತ ಬೇರಿಗೇ
ಪಂಚೇಂದ್ರಿಯಗಳಂಟಿಕೊಂಡು
ಬೇರು ಮಾತ್ರ ತುಡಿಯುವುದಂತೆ
ಒಳಗೇ,
ಏನು ಮಾಡುವುದು
ನಮ್ಮ ಕಣ್ಣಿಗದು ಕಾಣುವುದೇ ಇಲ್ಲ!

ಗಾಳಿ ಬೀಸಿದಾಗ
ಮಳೆ ಬಿದ್ದಾಗ
ಬಿಸಿಲು ಕಾಯಿಸಿದಾಗ
ಆ ಕ್ಷಣಕ್ಕೆ ಒಡ್ಡಿಕೊಳ್ಳುವುದು ಎಲೆಯೇ
ಮರ ನಿಂತಿರುತ್ತದಷ್ಟೇ ತನ್ನಷ್ಟಕ್ಕೇ!

ಏನೂ ಆಗಿಲ್ಲದಂತೆ!

ಅದಕ್ಕೆ ಅದರದ್ದೇ
ಜನ್ಮಾಂತರದ ಕಥೆಗಳು
ಜೊತೆಗೇ
ಹೊಳೆದೂ ಹೊಳೆಯದ ನಕ್ಷತ್ರಗಳು.
ನಂಟಿದ್ದೂ ಅಂಟಿಯೂ ಅಂಟದಂತೆ
ಹಿಂದಿಲ್ಲದೇ ಮುಂದಿಲ್ಲದೇ
ಬಯಲಲ್ಲಿ ವಿರಾಗಿಯಂತೆ
ನಿಂತ ಮರಕ್ಕೆ

ನಾವೆಷ್ಟಾದರೂ ಜೋತು ಬೀಳಬಹುದು
ಅದು ಆತುಕೊಳ್ಳುವುದಿಲ್ಲವಷ್ಟೇ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...