ಬೆತ್ತಲೆ ಮಗುವು

ಎಚ್ಚರಾದ ಎಷ್ಟೋ ಹೊತ್ತಿನ ಮೇಲೆ
ತೊಡೆಯಲ್ಲಿ ಜೀವಾಡುವ ಗೊಂಬೆ.
ಗಾಜಿನೆರಕ ಹೊಯ್ದು ತೆಗೆದದ್ದೋ?
ಸ್ಪಟಿಕದ್ದೋ? ಸ್ಪರ್ಶಕ್ಕೆ ನಿಲುಕದ ಬೆರಗು

ಇದೇನಿದು?
ಪಕ್ಕೆಗಳೆರಡಕ್ಕೆ ಅಂಟಿಕೊಂಡಂತೆ
ಕಂಡೂ ಕಾಣದಂತಾ ಎಳಸು ರೆಕ್ಕೆ?
ನೆತ್ತಿಯ ಮೇಲೆ ಕೂದಲೊಂದಿಗೇ
ಪುಕ್ಕದಂತಾ ಜುಟ್ಟು?
ಪಾದಕ್ಕೆ ಟಿಸಿಲೊಡೆದ ಸಣ್ಣ ಸಣ್ಣ ಬೇರು!

ಇದೇನು ಹಾರಲು ಕಾದಿರುವ ಹಕ್ಕಿಯೋ?
ಬೇರೂರಲು ಹವಣಿಸುತಿಹ ಮರವೋ?
ಮೊಲೆ ಹೀರಲು ಕಾದಿರುವ ಕಂದಮ್ಮನೋ?
ಇಲ್ಲ….
ಜೀವ ಬಿರಿಯಿತು ತಳ್ಳಂಕದಲ್ಲಿ.

ಎಲ್ಲಿದ್ದರೋ ಅವರು
ಪಕ್ಕೆಯ ಎಳೆ ರೆಕ್ಕೆ ಹರಿದು

ತಲೆಯ ಮೇಲಿನ ಪುಕ್ಕ ತರಿದು
ಪಾದಕ್ಕೆ ಬೆಳೆದ ಬೇರು ಮುರಿದು
ಈಗೆಲ್ಲಾ ಸರಿಯಾಯ್ತೆಂದು ಬೀಗಿದರು.

ಬೆತ್ತಲೆ ಮಗುವಾಗಿಹೋಯ್ತು!

ಅಯ್ಯೋ ಇದೇನು ಮಾಡಿದರವರು?
ಕೊಲೆಯೋ? ಜೀವದಾನವೋ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿಶ್ವಕೋಶಗಳ ರಾಣಿ ಎನ್‌ಸೈಕ್ಲೋಪೇಡಿಯಾಬ್ರಿಟಾನಿಕಾ
Next post ಕಣ್ಣೀರು

ಸಣ್ಣ ಕತೆ

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…