ಎಲ್ಲಿದ್ದಾನೋ ಹಾಳಾದವನು

ಆ ವಿಳಾಸವಿಲ್ಲದ ಅಲೆಮಾರಿ
ಎಂದಿನಂತೆ ಜನಜಂಗುಳಿಯ
ಮಧ್ಯೆ ಸಿಕ್ಕ.
ಅವನು ಸಿಗುವುದು ಅಲ್ಲೇ
ಆ ಏಕಾಂತದಲ್ಲೇ.

ಅದೇಕೋ ಇಂದು
ನನ್ನ ಕಂಡವನೇ
ತನ್ನ ಜೋಳಿಗೆಗೆ
ಕೈ ಹಾಕಿ ತಡಕಿ
ಲಾಲಿಪಪ್ಪಿನ ಕಡ್ಡಿಯೊಂದನ್ನು
ತೆಗೆದು ಕೈಯಲ್ಲಿ ಹಿಡಿದು
ಮುಂಚಾಚಿ, ನಕ್ಕ.

ಎಂದೂ ಭಿಕ್ಷಕ್ಕೆ ಕೈಯೊಡ್ಡದವಳು
ಮೋಡಿಗೊಳಗಾದವಳಂತೆ ಕಸಿದು
ಬಗಲ ಚೀಲಕ್ಕೆ ಎಸೆದು
ಬಿರಬಿರನೆ ನಡೆದೆ.
ಇನ್ನೂ ಕೊಳ್ಳುವುದಕ್ಕಿತ್ತು
ತೆಂಗು, ತರಕಾರಿ, ಸಂಬಾರ……

ಕೆಲಸ ಬೆಟ್ಟದಷ್ಟಿತ್ತು.
ಆಗಲೇ ತಡವಾಗಿತ್ತು
ಗಂಡ ಮಕ್ಕಳೂ
ಮನೆಯಲ್ಲಿ ಕಾಯುತ್ತಿರಬಹುದು…..

ಮನೆಗೆ ಬಂದು
ಚೀಲ ಸುರುವಿ
ಎಲ್ಲ ವಿಂಗಡಿಸಿಡುವಾಗ
ಹಸಿಮೆಣಸಿನ ಮರೆಯಲ್ಲಿ
ಮೆಲ್ಲನಿಣುಕುತ್ತಿತ್ತು ಲಾಲಿಪಪ್ಪಿನ ಕಡ್ಡಿ!

ಮೇಲಿನದೆಲ್ಲಾ ಹೇರಿಕೆ
ಸರಸರನೆ ಸರಿಸಿ
ಕಡ್ಡಿಯೆಡೆಗೇ ಕೈ ಹೋಗುವುದೇ?

ತಿರುಗಿಸಿ ಮುರುಗಿಸಿ ನೋಡುತ್ತಾ
ಮುಟ್ಟುತ್ತಾ ಮೂಸುತ್ತಾ
ಒಳಗಿನ ಮಗುವೆದ್ದು
ಬೆರಗಿನಲಿ ಆಟವಾಡುತ್ತಿರಲು
ನವಿಲು ಬಣ್ಣದ ಸಿಪ್ಪೆ ಬಿಡಿಸಿದೆ

ಗಾಢ ಗುಲಾಬಿ ಬಣ್ಣದ ಗೋಲಿಗೆ
ಕಡ್ಡಿಸಿಕ್ಕಿಸಿದ್ದಾರೆ ಯಾರೋ
ನೋಡಿದೊಡನೆ ಚಪ್ಪರಿಸಬೇಕೆನಿಸುವ
ಉಮೇದು ಹುಟ್ಟಿಸುವ
ಸುವಾಸನೆ ಮೆತ್ತಿದ್ದಾರೆ ಯಾರೋ
ತಡೆಯಲಾಗದೇ ಬಾಯಿಗಿಟ್ಟುಕೊಂಡೆ
ಲಾಲಿಪಪ್ಪಿನೊಂದಿಗೇ
ಕರಗುತ್ತಾ ಹೋದೆ.

ಆಗಲೇ ಅವನಿಗೊಂದು
ವಂದನೆ ಹೇಳಲೂ ಮರೆತೆನಲ್ಲಾ!

ಛೇ! ಎಲ್ಲಿದ್ದಾನೋ ಹಾಳಾದವನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಕ್ಷರವಿಧಾನ
Next post ಮನ ಮಂಥನ ಸಿರಿ – ೪

ಸಣ್ಣ ಕತೆ

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

cheap jordans|wholesale air max|wholesale jordans|wholesale jewelry|wholesale jerseys