ಕ್ಷಮೆ ಇರಲಿ ನನಗೆ

ಘಾತಕ್ಕೊಳಗಾಗಿ ಪತರುಗುಟ್ಟುತ್ತಿದ್ದ
ನನ್ನ ನಿರಾಕಾರ ಮಾನಕ್ಕೆ
ಸೊಕ್ಕೆಂಬುದು ನೀವಿಟ್ಟ ಹೆಸರು.

ಎತ್ತೆತ್ತಲಿಂದಲೂ ನೀವೆಷ್ಟೇ ಬೆಂಕಿ ಇಟ್ಟರೂ
‘ಅದು’ ದಹಿಸಿ ಹೋಗದ್ದಕ್ಕೆ
ಕ್ಷಮೆ ಇರಲಿ ನನಗೆ.

ಗವ್ವೆನುವ
ಕತ್ತಲ ಗವಿಯೊಳಗೆ
ನನಗೆಂದೇ ಹಚ್ಚಿಟ್ಟ
ಆ ದೀಪಕ್ಕೆದುರಾದ
ವಿಲಗುಟ್ಟುವ ನನ್ನ ಮಾನ
ಸುಮ್ಮನಿದ್ದರೂ ಇರಲಾಗದೇ
ಮಿಡುಕುತ್ತಾ ಹೊಯ್ದಾಡುತ್ತಿದೆ
ಕಿಚ್ಚಿಗೆ ಬೆಂಕಿಯಾಗಿ

ಉರಿದು ಹೋಗಬಹುದಿತ್ತು….
ನುಡಿಯ ತುಂಬಿ ಬಸಿರಾಗಿ
ಇಳಿಯತೊಡಗಿದೆ ದೀಪದಾಳಕ್ಕೆ
ಮೊದಲು ಎಣ್ಣೆ ಬೋಗುಣಿಗೆ
ನಿಧಾನಕ್ಕೆ ಬತ್ತಿಗೆ
ಕೈ ಬಡಿದು ಈಜುತ್ತಾ
ಬತ್ತಿಯನ್ನೇರಿ ತುತ್ತತುದಿಗೆ
ಉರಿಯುತ್ತಿದ್ದ ಸೊಡರಿನ
ಮಧ್ಯಬಿಂದುವಿಗೆ.

ಉರಿಯಲೇಬೇಕಿದೆ ನನಗೆ
ಬೆಂಕಿಯಾಗಲ್ಲ ದೀಪವಾಗಿ
ರೆಪ್ಪೆ ಅಲುಗದಂತೆ ಉರಿಯಬೇಕಿದೆ
ದೀಪವೇ ಆಗಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾವ್ಯಾಧ್ಯಯನ: ಮ್ಯಾಥ್ಯೂ ಅರ್ನಾಲ್ಡ್‌ನ ವಿಚಾರಗಳು
Next post ಮನ ಮಂಥನ ಸಿರಿ – ೬

ಸಣ್ಣ ಕತೆ

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

cheap jordans|wholesale air max|wholesale jordans|wholesale jewelry|wholesale jerseys