ಮಹಾ ಪರಿನಿರ್ವಾಣ


ಕಾಂಡವೇ ಶಿಲೀಕೃತಗೊಂಡು
ಕಲ್ಲಾದ ಪಳೆಯುಳಿಕೆ, ಮರಗಲ್ಲಿನಲಿ
ಕೆತ್ತಿದ ಬುದ್ಧನಿಗೆ
ಅವಳಡುಗೆ ಮನೆಯೀಗ ತಪೋವನ.
ನೀಳ ಕಣ್ಣು ಮುಚ್ಚಿ
ಧ್ಯಾನಕ್ಕೆ ಕೂತ ಅವನೊಂದಿಗೆ
ಅವಳ ನಿತ್ಯ ಕಸುಬಿನಲ್ಲೇ
ಮೌನ ಜುಗಲ್‌ಬಂದಿ.


ಸೊಪ್ಪು ಸೋಸುತ್ತಾ
ಕಾಳು ಬಿಡಿಸುತ್ತಾ
ಪಾತ್ರೆ ತೊಳೆಯುತ್ತಾ
ಮಗುವಿಗೆ ಹಾಲೂಡಿ
ಲಾಲಿ ಹೇಳುತ್ತಾ
ಮರಗಲ್ಲ ಬುದ್ಧನನ್ನು ನೆಟ್ಟಿದ್ದಾಳೆ
ಹೆಣ್ಣ ಪ್ರತಿರೂಪದ ಮೃತ್ತಿಕೆಯಲಿ.


ಗಡಿಬಿಡಿಯಲಿ ಕೈಸುಟ್ಟು
ಬೆರಳು ಕೊಯ್ದು
ಜಾರಿ ಬಿದ್ದು
ನೋವು ಉಮ್ಮಳಿಸಿ
ಬಿಕ್ಕಳಿಸಿದ ಸದ್ದು.
ಒಂದಿಷ್ಟೇ ಕಣ್ತೆರೆದು ನೋಡಿ
ಥಟ್ಟನೆ ಮುಚ್ಚುವ ತಥಾಗತ!
ಅವಳ ನೋವಿಗೆ ಮಿಡುಕುವನೇ?
ತನ್ನ ಸಂಘಕ್ಕೇ ಹೆಣ್ಣ ನಿರಾಕರಿಸಿ
ಅವಳೊಡಲನೇ ಅಪಮಾನಿಸಿ
ಈ ಹಸಿಮಣ್ಣನೊದ್ದು ಮೇಲೇರಿದವನು?


ಆದರೀಗ…
ಈರುಳ್ಳಿ ಹೆಚ್ಚುವ ನೆವದಲಿ
ಒಳಗಿನ ಸಂಕಟಕ್ಕೇ ಬಾಯ್ಬಂದು
ದಳ ದಳ ಉದುರುವ ಅವಳ ಕಣ್ಣೀರಿಗೆ
ಈಗೀಗ ಅವನ ಕಣ್ಣಂಚಿನಲ್ಲೂ
ಕಂಡೂ ಕಾಣದಂತೆ ನೀರ ಪಸೆಯೇ?


ಒಲೆಯ ಕಾವಿಗೆ ಬಿಸಿಯಾಗಿ
ಕುಳಿರ್ಗಾಳಿಗೆ ತಂಪಾಗಿ
ಜೋಗುಳಕ್ಕೆ ನಿದ್ದೆಯಾಗಿ
ಪಾತ್ರೆ ಸಪ್ಪಳಕ್ಕೆ ಕಿವಿಯಾಗಿ
ಅಡುಗೆ ಘಮಕ್ಕೆ ವಾಸನೆಯಾಗಿ
ಅವಳ ತುಡುಮುಡಿಕೆಗೆ ಕಣ್ಣಾಗಿ
ಅರಳುತ್ತಿವೆ ಅವನೊಳಹೊರಗು
ಬುದ್ಧನೆನಿಸಿಕೊಂಡೂ ಮುಕ್ಕಾಗಿ
ಮಿಕ್ಕುಳಿದ ಸಾಕ್ಷಿಗಾಗಿ.


ಹೆಣ್ಣ ಮಿಡಿತದ ಮೃತ್ತಿಕೆಯಲಿ ನೆಟ್ಟ
ಮರಗಲ್ಲ ಬುದ್ಧನಿಗೀಗ
ನೆಲದಾಳದಲ್ಲೆಲ್ಲಾ ಬೇರು
ಕೈಕಾಲು ಎದೆ ತಲೆಗಳೆಲ್ಲ ಚಿಗುರು
ಕಣಕಣದ ಚಲನೆಗೂ ಮಿಡಿವ
ಹೆಣ್ಣ ನೋವಿಗೂ ತುಡಿವ
ಅವನೀಗ ಮರ್ತ್ಯಲೋಕದ ಕೂಸು!

[ಮರದ ಕಾಂಡ ಒಣಗಿ ಅನೇಕ ವರ್ಷಗಳ ಕಾಲ ಮಣ್ಣಿನೊಂದಿಗಿನ ಸಂಪರ್ಕ ದಿಂದ, ರಾಸಾಯನಿಕ ಕ್ರಿಯೆ ನಡೆದು ಖನಿಜವನ್ನು ಹೀರಿ ಮರದ ಕಾಂಡವೇ ಕಲ್ಲಾಗಿ ಪರಿವರ್ತನೆಯಾಗುವ ಸೃಷ್ಟಿ ವಿಶೇಷಕ್ಕೆ ಇಂಗ್ಲಿಷಿನಲ್ಲಿ petrified wood ಎನ್ನುತ್ತಾರೆ. ಅದಕ್ಕೆ ಸಂವಾದಿಯಾಗಿ ‘ಮರಗಲ್ಲು’ ಎಂದಿಲ್ಲಿ ಬಳಸಿದ್ದೇನೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭವ ನೀಗುವ ಬಗೆ
Next post ಮನ ಮಂಥನ ಸಿರಿ – ೧೦

ಸಣ್ಣ ಕತೆ

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…