Home / ಕವನ / ಕವಿತೆ / ಮಹಾ ಪರಿನಿರ್ವಾಣ

ಮಹಾ ಪರಿನಿರ್ವಾಣ


ಕಾಂಡವೇ ಶಿಲೀಕೃತಗೊಂಡು
ಕಲ್ಲಾದ ಪಳೆಯುಳಿಕೆ, ಮರಗಲ್ಲಿನಲಿ
ಕೆತ್ತಿದ ಬುದ್ಧನಿಗೆ
ಅವಳಡುಗೆ ಮನೆಯೀಗ ತಪೋವನ.
ನೀಳ ಕಣ್ಣು ಮುಚ್ಚಿ
ಧ್ಯಾನಕ್ಕೆ ಕೂತ ಅವನೊಂದಿಗೆ
ಅವಳ ನಿತ್ಯ ಕಸುಬಿನಲ್ಲೇ
ಮೌನ ಜುಗಲ್‌ಬಂದಿ.


ಸೊಪ್ಪು ಸೋಸುತ್ತಾ
ಕಾಳು ಬಿಡಿಸುತ್ತಾ
ಪಾತ್ರೆ ತೊಳೆಯುತ್ತಾ
ಮಗುವಿಗೆ ಹಾಲೂಡಿ
ಲಾಲಿ ಹೇಳುತ್ತಾ
ಮರಗಲ್ಲ ಬುದ್ಧನನ್ನು ನೆಟ್ಟಿದ್ದಾಳೆ
ಹೆಣ್ಣ ಪ್ರತಿರೂಪದ ಮೃತ್ತಿಕೆಯಲಿ.


ಗಡಿಬಿಡಿಯಲಿ ಕೈಸುಟ್ಟು
ಬೆರಳು ಕೊಯ್ದು
ಜಾರಿ ಬಿದ್ದು
ನೋವು ಉಮ್ಮಳಿಸಿ
ಬಿಕ್ಕಳಿಸಿದ ಸದ್ದು.
ಒಂದಿಷ್ಟೇ ಕಣ್ತೆರೆದು ನೋಡಿ
ಥಟ್ಟನೆ ಮುಚ್ಚುವ ತಥಾಗತ!
ಅವಳ ನೋವಿಗೆ ಮಿಡುಕುವನೇ?
ತನ್ನ ಸಂಘಕ್ಕೇ ಹೆಣ್ಣ ನಿರಾಕರಿಸಿ
ಅವಳೊಡಲನೇ ಅಪಮಾನಿಸಿ
ಈ ಹಸಿಮಣ್ಣನೊದ್ದು ಮೇಲೇರಿದವನು?


ಆದರೀಗ…
ಈರುಳ್ಳಿ ಹೆಚ್ಚುವ ನೆವದಲಿ
ಒಳಗಿನ ಸಂಕಟಕ್ಕೇ ಬಾಯ್ಬಂದು
ದಳ ದಳ ಉದುರುವ ಅವಳ ಕಣ್ಣೀರಿಗೆ
ಈಗೀಗ ಅವನ ಕಣ್ಣಂಚಿನಲ್ಲೂ
ಕಂಡೂ ಕಾಣದಂತೆ ನೀರ ಪಸೆಯೇ?


ಒಲೆಯ ಕಾವಿಗೆ ಬಿಸಿಯಾಗಿ
ಕುಳಿರ್ಗಾಳಿಗೆ ತಂಪಾಗಿ
ಜೋಗುಳಕ್ಕೆ ನಿದ್ದೆಯಾಗಿ
ಪಾತ್ರೆ ಸಪ್ಪಳಕ್ಕೆ ಕಿವಿಯಾಗಿ
ಅಡುಗೆ ಘಮಕ್ಕೆ ವಾಸನೆಯಾಗಿ
ಅವಳ ತುಡುಮುಡಿಕೆಗೆ ಕಣ್ಣಾಗಿ
ಅರಳುತ್ತಿವೆ ಅವನೊಳಹೊರಗು
ಬುದ್ಧನೆನಿಸಿಕೊಂಡೂ ಮುಕ್ಕಾಗಿ
ಮಿಕ್ಕುಳಿದ ಸಾಕ್ಷಿಗಾಗಿ.


ಹೆಣ್ಣ ಮಿಡಿತದ ಮೃತ್ತಿಕೆಯಲಿ ನೆಟ್ಟ
ಮರಗಲ್ಲ ಬುದ್ಧನಿಗೀಗ
ನೆಲದಾಳದಲ್ಲೆಲ್ಲಾ ಬೇರು
ಕೈಕಾಲು ಎದೆ ತಲೆಗಳೆಲ್ಲ ಚಿಗುರು
ಕಣಕಣದ ಚಲನೆಗೂ ಮಿಡಿವ
ಹೆಣ್ಣ ನೋವಿಗೂ ತುಡಿವ
ಅವನೀಗ ಮರ್ತ್ಯಲೋಕದ ಕೂಸು!

[ಮರದ ಕಾಂಡ ಒಣಗಿ ಅನೇಕ ವರ್ಷಗಳ ಕಾಲ ಮಣ್ಣಿನೊಂದಿಗಿನ ಸಂಪರ್ಕ ದಿಂದ, ರಾಸಾಯನಿಕ ಕ್ರಿಯೆ ನಡೆದು ಖನಿಜವನ್ನು ಹೀರಿ ಮರದ ಕಾಂಡವೇ ಕಲ್ಲಾಗಿ ಪರಿವರ್ತನೆಯಾಗುವ ಸೃಷ್ಟಿ ವಿಶೇಷಕ್ಕೆ ಇಂಗ್ಲಿಷಿನಲ್ಲಿ petrified wood ಎನ್ನುತ್ತಾರೆ. ಅದಕ್ಕೆ ಸಂವಾದಿಯಾಗಿ ‘ಮರಗಲ್ಲು’ ಎಂದಿಲ್ಲಿ ಬಳಸಿದ್ದೇನೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...