Home / ಕವನ / ಕವಿತೆ / ಆ ಕನ್ನಡಿ ಬೇಕೆಂದರೆ……

ಆ ಕನ್ನಡಿ ಬೇಕೆಂದರೆ……


ನನಗಾಗಿ ನನ್ನದೇ ಒಂದು
ಕನ್ನಡಿ ಬೇಕೆಂಬ
ಗುಪ್ತ ಬಯಕೆಗೆ ಬಿದ್ದಿರುವೆ ಗುರುವೆ

ಕನ್ನಡಿಯೇ ಇಲ್ಲವೆಂದಲ್ಲ
ಊರ ತುಂಬಾ ಕನ್ನಡಿ ನೆಟ್ಟಿದ್ದಾರೆ
ಅವರಿಗಿಷ್ಟದ ಪಾದರಸ
ಇವರಿಗಿಷ್ಟದ ಮಾಪಕ
ಅವರಿಗೆ ಬೇಕೆನಿಸಿದಷ್ಟು ಹೊತ್ತು
ಕಾಯಿಸಿ ಎರಕ ಹೊಯ್ದು
ಕನ್ನಡಿ ಮಾಡಿ
ಕುಳ್ಳಿರಿಸಿದ್ದಾರೆ ಕಟ್ಟು ಹಾಕಿ.
ಬಣ್ಣ ಬಣ್ಣದ ಕನ್ನಡಿ
ಪ್ರತಿಫಲಿಸುವುದೇ ಇಲ್ಲ
ಕಟ್ಟು ಕನ್ನಡಿ!

ಆ ಬಣ್ಣದ ಕನ್ನಡಿಯಲ್ಲೇ
ನಾವೂ ನೋಡಿಕೊಳ್ಳಬೇಕೆಂದು
ಅದರಲ್ಲಿ ನೋಡಿಕೊಂಡರೆ
ಇದೇನು ಕನ್ನಡಿಯೋ
ಅವರದೇ ಭಾವಚಿತ್ರವೋ?
ಕಣ್ಕಟ್ಟೋ?

ನನ್ನದೇ ಕನ್ನಡಿಯಿದ್ದರೆ
ಇಡಿಯಾಗಿ ಬಿಡಿಯಾಗಿ
ನಾನು, ನನ್ನ ರೆಕ್ಕೆ ಪುಕ್ಕ
ಒಳಗಿನ ಸೊಕ್ಕು
ಮುರುಕು ಮುಳ್ಳು
ಅರಳು ಮುದುಡು
ಇಂಚಿಂಚೂ ನೋಡಿಕೊಳ್ಳುವ
ಹಂಬಲದಲಿ ಕಾದಿದ್ದೇನೆ
ದಾರಿ ತೋರು ಗುರುವೇ.


ನಿನ್ನ ತೋರುವ
ಸಿದ್ದ ಕನ್ನಡಿ
ಎಲ್ಲಿಯೂ ಎಂದಿಗೂ
ಬಿಕರಿಗೆ ಸಿಕ್ಕುವುದಿಲ್ಲ ಕಂದ
ಕನ್ನಡಿ ಬೇಕೇಬೇಕೆಂದರೆ
ಇರುವುದೊಂದೇ ದಾರಿ
ತಕ್ಕಡಿಯಲಿ ಪ್ರತಿಕ್ಷಣ ನಿನ್ನನಿಟ್ಟು
ತೂಗಿ ಅಳತೆ ಮಾಡುತ್ತಾ
ಕಣ ಕಣಗಳಿಗೂ
ಪಾರದರ್ಶಕವಾಗಿಸುವ ಲೇಪ ಬಳಿದು
ಆ ನೋವಿಗೆ ಕಾವಿಗೆ
ನಿನ್ನೊಳಗಿನದೆಲ್ಲ ಘನವನೂ
ಪ್ರತಿಫಲನ ಮೂಡುವವರೆಗೆ
ಕರಗಿಸಿ ಕರಗಿಸಿ ತಿಳಿಯಾಗಿಸಬೇಕು.
ಕಂದ, ನೀನೇ ಕನ್ನಡಿಯಾಗಬೇಕು!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...