Home / ಕವನ / ಕವಿತೆ / ಕಸವೂ ನಕ್ಷತ್ರವೂ

ಕಸವೂ ನಕ್ಷತ್ರವೂ


ಬಯಲಿನಲಿ ಕೂತು
ಆಕಾಶಕ್ಕೆ ಕಣ್ಣು.
ಬೆಳ್ಳಂಬೆಳಗೇ ತಾರೆಗಳ ಹುಡುಕಿ
ಕಿತ್ತು ಪೋಣಿಸಿ
ಮಾಲೆ ಮಾಡುತ್ತ
ಮಡಿಲು ತುಂಬಿಕೊಳುವುದರಲೇ ಮಗ್ನ
ಈ ಬಯಲ ಬುದ್ಧ.


ಗುಡಿಸಿದ ರಾಶಿ ಬೀದಿ ಕಸ
ತನ್ನ ಪುಟ್ಟ ಬೊಗಸೆಗೆ ತುಂಬಿ
ದಿನವೂ ಪುಟ ಪುಟನೆ ಓಡಿ ಬಂದು
ಅವನ ಪಾದ ಬುಡಕ್ಕೆ ಸುರುವಿ
ತಾರೆಗಳ ಮಾಲೆ ಕಟ್ಟುತಾ
ಮೋಹಕ್ಕೆ ಬಿದ್ದವನ ಮೈತಡವಿ
ಎಬ್ಬಿಸಿ
ಇಹಕ್ಕೆ ಕಣ್ಬಿಡಿಸಿ
ಕಲ್ಲು ಹೂವು ಮುಳ್ಳು ಕಾಗದದ ಚೂರು…..
ಒಂದೊಂದೇ
ಅವಶೇಷ ಎತ್ತಿ ಹಿಡಿದು
ಪ್ರತಿ ಕಸದ ಇತಿಹಾಸ ವರ್ತಮಾನ
ಬಿಡಿ ಇಡಿಯಾಗಿ ಏರಿಳಿತದ ದನಿಯಲ್ಲೇ
ಕಥೆ ಬಿಡಿಸಿಡುತ್ತದೆ
ಈ ಬೀದಿ ಗುಡಿಸುವ ಜೀವ.


ಸಾಣೆಗೆ ಸಿಕ್ಕದ ಚೂಪುಗಲ್ಲು
ತುಳಿದು ಬಾಡಿಸಿದ ಹೂವು
ಚುಚ್ಚಲು ಕಾದಿರುವ ಮುಳ್ಳು
ಒಡೆದ ಬಳೆ ಚೂರು
ರಕ್ತದ ಕಲೆಯ ಬಟ್ಟೆ ಚಿಂದಿ
ಒಡೆದ ಭ್ರೂಣದ ಪಳೆಯುಳಿಕೆ…..
ಕಸದ ಮಣ್ಣಿನ ತುಂಬಾ ನೋವು.
ಅವನ ಪಾದಕ್ಕೆ ಕಸ ಸುರುವಿ
ಕಣ್ಣೀರಲೇ ಕೈ ತೊಳೆದರೂ
ಅವಳ ಪುಟ್ಟ ಬೊಗಸೆಯೊಂದು
ಸದಾ ಸುಡುವ ಕುಲುಮೆ.


ಅವನಿಗೆ ಕತೆ ಹೇಳುತ್ತಾ ಹೇಳುತ್ತಾ
ಕಸವಾಗಿಸಿದವರ ನಿರ್ದಯತೆಗೆ
ಕುದಿಯುತ್ತಾ ಸಿಡಿಯುತ್ತಾ
ಬಿಕ್ಕುತ್ತಾ ಉಮ್ಮಳಿಸಿ ಅಳುತ್ತಾಳೆ.


ಅವಳ ಮನ ನೇವರಿಸಿ ಸಂತೈಸುವ
ಬಯಲ ಬುದ್ಧ
ತಲೆನೇವರಿಸುತ್ತಾ
ಹೆಗಲ ಮೇಲಿನ ಚುಂಗಿನಲಿ
ಕಣ್ಣೀರೊರೆಸುತ್ತಾ
ಪ್ರತಿ ಕಸದ ಕಥೆಗೂ
ತಾನೇ ಅದಾಗಿ,
ಭವಿಷ್ಯ ನೂಲುತ್ತಾನೆ ಕರುಳ ನೂಲಿನಲಿ.


ಮುಟ್ಟುತ್ತಾ ಮುಟ್ಟುತ್ತಾ
ಕಸದ ಕಲ್ಲು ನಯವಾಗಿಸುತ್ತಾ
ಚೂಪು ಮುಳ್ಳಿನ ಮೊನೆ ಮುರಿಯುತ್ತಾ
ಬಳೆ ಚೂರು ಗುಂಡಗೆ ಅಂಟಿಸುತ್ತಾ….
ಈ ಬಯಲ ಬುದ್ಧ
ಮುರಿದ ಹೂವಿನ ದಳಗಳ
ದೇಟಿಗೆ ಜೋಡಿಸುತ್ತಾ… ಇರುತ್ತ.


ಇರುತ್ತಾ,
ಈ ಬೀದಿ ಗುಡಿಸುವ ಜೀವ
ಅವನ ಪಾದಕ್ಕೆ
ಕಸ ಸುರುವುತ್ತಾ
ಕತೆ ಹೇಳುತ್ತಾ
ಅವನ ತಾರೆಗಳ
ಮಡಿಲಿಗೆಳೆದುಕೊಂಡು
ತಾನೂ
ಮಾಲೆ ಕಟ್ಟುತ್ತಾಳೆ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...