ಬೇಡವೆನಗಿನ್ನೇನು!

ಮಾಲಕಂಸ

ಒಡೆಯ ನಿನ್ನಾಶೆಯೊಳೆ ತೊಡಕಿ ನಾ ಮಿಡುಕುತಿರೆ
ಹಡೆದಮ್ಮ ಕೂಗಿದಳು: “ಹುಡುಗಿ ಇಲ್ಲಿಗೆ ಬಾರೆ!”
ಜಡಭಾವದಿಂದ ಎಳೆದಿಡುತಲಡಿಗಳನು
ನಡೆದು ಅವಳೆಡೆಗೆ ಕೇಳಿದೆ: “ಕರೆದುದೇನು?”
ಕಿರುನಗೆಯ ನಗುತಮ್ಮ ಹೊರಮನೆಗೆ ಕರೆತಂದು
“ನಿರುಕಿಸೆಲ್ಲವ ನಿನ್ನದಿರುವುದಿದು” ಎಂದೊರೆದು
ಹರಡಿರುವ ಒಡವೆಗಳನೆಲ್ಲ ತೋರಿದಳು,
ಬೆರತು ನಾ ನಿಂತೆ ಬೆರಳಿರಿಸಿ ಬಾಯಿಯೊಳು.
ಬಣ್ಣ ಬಣ್ಣದ ಸೀರೆ ಹೊನ್ನ ಹೂ-ರವಿಕೆಗಳು!
ರನ್ನದೋಲೆಯು ಮುತ್ತು ಚಿನ್ನ ದಾಭರಣಗಳು!
ಕುಸುರು ಕುಸುರಿನ ಹವಳ ಬೆಸೆದ ಕಂಕಣವು!
ಹಸನು ಹೊಗರುಗುವ ಕಾಲ್‌ಕಡಗ ಪೈಜಣವು!
ಬಗೆಬಗೆಯ ಕೆಮ್ಮೆಣ್ಣೆ ಸೊಗಸೆನಿಪ ಪನ್ನೀರು!
ಮೃಗಸಾರ ಕರ್ಪೂರ ಅಗುರು-ಗಂಧದ ತಿಗುರು!
ಹಣ್ಣು ಹಂಪಲವು ಸವಿಯನ್ನ ದಿನಿಸುಗಳು!
ಕಣ್ಣ ಸೆಳೆಯುವ ಹಲವು ಬಣ್ಣದರಳುಗಳು!
ನೋಡಿದೆನದೆಲ್ಲವನು, ನೋಡಿಯೇ ನೋಡಿದೆನು,
ಕೂಡಿಸಿದೆನದರಲಿಯೆ ನೀಡಿರುವ ನೋಟವನು.
‘ಎಲ್ಲವೂ ನನ್ನದಿದು’ ಎಂಬುದನ್ನು ನೆನೆದು
ಉಲ್ಲಸವು ಆಟವಾಡಿತು ಮನದಿ ಕುಣಿದು.
ಹಿಂಡುಹಿಂಡಾಗಿ ಹೆಣ್ಣುಗಳಲ್ಲಿಗೈತಂದು
ಕೊಂಡಾಡತೊಡಗಿದರು ನನ್ನ ದೈವವನಂದು.
ಕೊರೆಯುವೆದೆನೋವೆಲ್ಲ ಹೇಗೋ ಮರೆಯಾಯ್ತು
ಗರುವಿಕೆಗೆ ಮೈ-ಮನವದಾಗ ಸೆರೆಯಾಯ್ತು.
ಉಡುಗೆಯುಡಬಯಸಿದೆನು, ತೊಡಿಗೆಯಿಡಬಯಸಿದೆನು,
ಮುಡಿಬಿಗಿದು ಬೆಡಗಿನೊಳು ಮುಡಿವೆನೆಂದೆನು ಅರಳು,
ತಂಪು ಬಾವನ್ನದಣ್ಪನು ಮೈಗೆ ತೀಡಿ
ಸೊಂಪಾಗಿರುವೆನೆಂದೆ ಸವಿಯುಣಿಸನೂಡಿ.
‘ಮುಂದೇನು? ಮುಂದೇನು?’ ಎಂದು ಯಾರೋ ಕೇಳಿ-
ದಂದ ಕಿವಿದೆರೆಗೈದಲೆದೆಯು ಜುಽಮ್ಮನು ತಾಳಿ
ತನುವೊಮ್ಮಿದೊಮ್ಮೆಯೇ ನವಿರಿಗೊಳಗಾಯ್ತು,
ಇನಿಯ ನಿನ್ನಯ ನೆನಹೆ ಮನತುಂಬಿ ಹೋಯ್ತು.
ಬಿಡುಬಿಡರಿತೆನು ನಿನ್ನ ಹುಡುಗಾಟವೆಲ್ಲವನು
ಹಡೆದಮ್ಮ ಹೇಳಿದಳು: ಒಡವೆಯಿವನೆಲ್ಲವನು
ನೀನೆ ನನಗಾಗಿಯೇ ಕಳುಹಿರುವೆಯಂತೆ!
ಏನು ಈ ಮೊಡಿಯಾಟವನೆಲ್ಲಿ ಕಲಿತೆ?
ತೊಡೆಯಲಿಕೆ ನೆನಹನೀನೊಡವೆಗಳ ಕಳುಹಿಸಿದೆ,
ಜಡಮತಿಯು ನಾನರಿವುಗೆಡುತನಕೆ ಬೆರಗಾದೆ.
ನಿನ್ನ ಮರಸುವ ಚಿನ್ನ ರನ್ನದೊಡಿಗೆಗಳು
ಮಣ್ಣುಗೂಡಲಿ ಹಾಳು ಬಣ್ಣದುಡುಗೆಗಳು!
ಬೇಡವೆನಗಿನ್ನೇನು! ಬೇಡವೆನಗಿನ್ನೇನು!
ಓಡಿ ಬಾ ದೊರೆಯೆ, ನೀನೇ ಬೇಕು ನೀನು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾನು ನಿನಗೆ ಋಣಿಯಾಗಿ
Next post ಅದು ಅದುವೆ ಯುಗಾದಿ

ಸಣ್ಣ ಕತೆ

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

cheap jordans|wholesale air max|wholesale jordans|wholesale jewelry|wholesale jerseys